<p><strong>ಶಿಡ್ಲಘಟ್ಟ:</strong> ನಮ್ಮ ನಾಡು ಕರ್ನಾಟಕದ ಸಂಕೇತವಾಗಿ ಹಳದಿ ಹಾಗೂ ಕೆಂಪು ಬಣ್ಣದ ಬಾವುಟವಿದೆ. ನವೆಂಬರ್ ತಿಂಗಳು ರಾಜ್ಯದ ಎಲ್ಲೆಡೆ ಹಳದಿ, ಕೆಂಪು ಬಣ್ಣದ ಕನ್ನಡ ಧ್ವಜ ರಾರಾಜಿಸಲಿದೆ.</p>.<p>ಕನ್ನಡ ಲೇಖಕ ಮತ್ತು ಕನ್ನಡಪರ ಹೋರಾಟಗಾರ ಮಾ ರಾಮಮೂರ್ತಿ ಕನ್ನಡ ಪಕ್ಷ ಎಂಬ ಕನ್ನಡ ಪರ ಪಕ್ಷಕ್ಕಾಗಿ ರಚಿಸಿದ ಕೆಂಪು ಮತ್ತು ಹಳದಿ ಧ್ವಜವು 1960 ರಿಂದ ನಾಡಧ್ವಜ ಎಂಬ ಅನಧಿಕೃತ ಸ್ಥಾನಮಾನ ಹೊಂದಿತ್ತು. ಈ ಧ್ವಜಕ್ಕೆ ಅಧಿಕೃತ ಮಾನ್ಯತೆ ದೊರೆಯದಿದ್ದರೂ ಕನ್ನಡಿಗರು, ಕನ್ನಡಪರ ಹೋರಾಟಗಾರರು ಇದನ್ನು ರಾಜ್ಯದ ಹೆಮ್ಮೆಯ ಸಂಕೇತವಾಗಿ ಅಳವಡಿಸಿಕೊಂಡಿದ್ದಾರೆ.</p>.<p>ಕನ್ನಡದ ಬಾವುಟ ಕೇವಲ ಬಣ್ಣದ ಬಾವುಟವಲ್ಲ, ಅದು ಕನ್ನಡಿಗರ ಭಾವೈಕ್ಯದ ಸಂಕೇತ. ಚಿನ್ನದ ಬೀಡು, ರೇಷ್ಮೆಯ ನಾಡನ್ನು ಸಂಪತ್ತಿನ ಪ್ರತಿನಿಧಿಯಾಗಿ ಹಳದಿ ಬಣ್ಣ ಸೂಚಿಸಿದರೆ, ಫಲವತ್ತಾದ ಕೆಂಪು ಮಣ್ಣು, ವೀರತ್ವ, ಔದಾರ್ಯ ಮತ್ತು ಖನಿಜ ಸಂಪತ್ತನ್ನು ಕೆಂಪು ಬಣ್ಣ ಪ್ರತಿನಿಧಿಸುತ್ತದೆ.</p>.<p>ಈ ಧ್ವಜದ ಬಣ್ಣ ನಮ್ಮ ನಾಡಲ್ಲಿ ಎಲ್ಲೆಲ್ಲೂ ಇದೆ. ಜನಪದದಲ್ಲಿ, ಹಕ್ಕಿಯಲ್ಲಿ, ಚಿಟ್ಟೆಯಲ್ಲಿ, ಹಣ್ಣಲ್ಲಿ, ಮಗುವಿನ ಕಣ್ಣಲ್ಲಿ, ಹೂವಲ್ಲಿ...ನೋಡುವ ಕಣ್ಣು ಮತ್ತು ಮನಸ್ಸು ಕನ್ನಡವಾದರೆ, ಎಲ್ಲೆಲ್ಲಿ ನೋಡಿದರೂ ನಾಡಬಾವುಟ.</p>.<p>ಜನಪದ ಉತ್ಸವ, ಆಚರಣೆಗಳಲ್ಲಿ, ಹಕ್ಕಿಯಲ್ಲಿ, ಚಿಟ್ಟೆಯಲ್ಲಿ ಮೈದುಂಬಿಕೊಂಡ ಪರಿ ಕ್ಯಾಮೆರಾ ಕಣ್ಣಲ್ಲಿ ದಾಖಲಾಗಿದೆ. ಹಕ್ಕಿ, ಚಿಟ್ಟೆ, ಹೆಣ್ಣುಮಕ್ಕಳ ಜಾನಪದ ನರ್ತನದಲ್ಲಿ ಮೂಡಿ ಬಂದ ಕನ್ನಡ ಬಣ್ಣದ ಸೊಗಸಿಗೆ ಇಲ್ಲಿವೆ ಸಾಕ್ಷ್ಯಗಳು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ನಮ್ಮ ನಾಡು ಕರ್ನಾಟಕದ ಸಂಕೇತವಾಗಿ ಹಳದಿ ಹಾಗೂ ಕೆಂಪು ಬಣ್ಣದ ಬಾವುಟವಿದೆ. ನವೆಂಬರ್ ತಿಂಗಳು ರಾಜ್ಯದ ಎಲ್ಲೆಡೆ ಹಳದಿ, ಕೆಂಪು ಬಣ್ಣದ ಕನ್ನಡ ಧ್ವಜ ರಾರಾಜಿಸಲಿದೆ.</p>.<p>ಕನ್ನಡ ಲೇಖಕ ಮತ್ತು ಕನ್ನಡಪರ ಹೋರಾಟಗಾರ ಮಾ ರಾಮಮೂರ್ತಿ ಕನ್ನಡ ಪಕ್ಷ ಎಂಬ ಕನ್ನಡ ಪರ ಪಕ್ಷಕ್ಕಾಗಿ ರಚಿಸಿದ ಕೆಂಪು ಮತ್ತು ಹಳದಿ ಧ್ವಜವು 1960 ರಿಂದ ನಾಡಧ್ವಜ ಎಂಬ ಅನಧಿಕೃತ ಸ್ಥಾನಮಾನ ಹೊಂದಿತ್ತು. ಈ ಧ್ವಜಕ್ಕೆ ಅಧಿಕೃತ ಮಾನ್ಯತೆ ದೊರೆಯದಿದ್ದರೂ ಕನ್ನಡಿಗರು, ಕನ್ನಡಪರ ಹೋರಾಟಗಾರರು ಇದನ್ನು ರಾಜ್ಯದ ಹೆಮ್ಮೆಯ ಸಂಕೇತವಾಗಿ ಅಳವಡಿಸಿಕೊಂಡಿದ್ದಾರೆ.</p>.<p>ಕನ್ನಡದ ಬಾವುಟ ಕೇವಲ ಬಣ್ಣದ ಬಾವುಟವಲ್ಲ, ಅದು ಕನ್ನಡಿಗರ ಭಾವೈಕ್ಯದ ಸಂಕೇತ. ಚಿನ್ನದ ಬೀಡು, ರೇಷ್ಮೆಯ ನಾಡನ್ನು ಸಂಪತ್ತಿನ ಪ್ರತಿನಿಧಿಯಾಗಿ ಹಳದಿ ಬಣ್ಣ ಸೂಚಿಸಿದರೆ, ಫಲವತ್ತಾದ ಕೆಂಪು ಮಣ್ಣು, ವೀರತ್ವ, ಔದಾರ್ಯ ಮತ್ತು ಖನಿಜ ಸಂಪತ್ತನ್ನು ಕೆಂಪು ಬಣ್ಣ ಪ್ರತಿನಿಧಿಸುತ್ತದೆ.</p>.<p>ಈ ಧ್ವಜದ ಬಣ್ಣ ನಮ್ಮ ನಾಡಲ್ಲಿ ಎಲ್ಲೆಲ್ಲೂ ಇದೆ. ಜನಪದದಲ್ಲಿ, ಹಕ್ಕಿಯಲ್ಲಿ, ಚಿಟ್ಟೆಯಲ್ಲಿ, ಹಣ್ಣಲ್ಲಿ, ಮಗುವಿನ ಕಣ್ಣಲ್ಲಿ, ಹೂವಲ್ಲಿ...ನೋಡುವ ಕಣ್ಣು ಮತ್ತು ಮನಸ್ಸು ಕನ್ನಡವಾದರೆ, ಎಲ್ಲೆಲ್ಲಿ ನೋಡಿದರೂ ನಾಡಬಾವುಟ.</p>.<p>ಜನಪದ ಉತ್ಸವ, ಆಚರಣೆಗಳಲ್ಲಿ, ಹಕ್ಕಿಯಲ್ಲಿ, ಚಿಟ್ಟೆಯಲ್ಲಿ ಮೈದುಂಬಿಕೊಂಡ ಪರಿ ಕ್ಯಾಮೆರಾ ಕಣ್ಣಲ್ಲಿ ದಾಖಲಾಗಿದೆ. ಹಕ್ಕಿ, ಚಿಟ್ಟೆ, ಹೆಣ್ಣುಮಕ್ಕಳ ಜಾನಪದ ನರ್ತನದಲ್ಲಿ ಮೂಡಿ ಬಂದ ಕನ್ನಡ ಬಣ್ಣದ ಸೊಗಸಿಗೆ ಇಲ್ಲಿವೆ ಸಾಕ್ಷ್ಯಗಳು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>