<p><strong>ಶಿಡ್ಲಘಟ್ಟ:</strong> ಕನ್ನಡ ಸಾಹಿತ್ಯ ಪರಿಷತ್ನಿಂದ ಕನ್ನಡ ನಡೆ ಶಾಲೆಗಳ ಕಡೆ ಅಭಿಯಾನದಡಿ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಜನ್ಮದಿನ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು. </p>.<p>ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಸಮ್ಮೇಳನ ಅಧ್ಯಕ್ಷ ರೂಪಸಿ ರಮೇಶ್ ಮಾತನಾಡಿ ‘ಸರ್.ಎಂ.ವಿಶ್ವೇಶ್ವರಯ್ಯ ಅವರ ಸತತ ಪರಿಶ್ರಮದಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ನಡುವೆ ನ್ಯಾರೊ ಗೇಜ್ ರೈಲು ಮಾರ್ಗ ಆರಂಭವಾಗಿತ್ತು’ ಎಂದು ತಿಳಿಸಿದರು.</p>.<p>ವಿಶ್ವೇಶ್ವರಯ್ಯನವರ ಕೊಡುಗೆ ಇಡೀ ಜಗತ್ತಿಗೆ ಇದೆ. ಆದರೆ ಅವರ ಹುಟ್ಟೂರು ಚಿಕ್ಕಬಳ್ಳಾಪುರ ಜಿಲ್ಲೆ ಆಗಿನ ಕೋಲಾರ ಜಿಲ್ಲೆಗೆ ಇರಲಿಲ್ಲ. ಆ ನೋವು ಅವರನ್ನು ಬಹಳವಾಗಿ ಕಾಡುತ್ತಿತ್ತು. ಇಲ್ಲಿ ಯಾವುದೇ ನದಿ ನಾಲೆಗಳಿಲ್ಲದ್ದಕ್ಕೆ ಅವರು ಬಹಳ ಬೇಸತ್ತಿದ್ದರು ಎಂದರು.</p>.<p>ಕೊನೆಗೆ ಮೈಸೂರು ಮಹಾರಾಜರ ಮನವೊಲಿಸಿ ಅವರ ಹುಟ್ಟಿದ ಊರಿನ ಈ ಭಾಗದಲ್ಲಿ ನ್ಯಾರೊ ಗೇಜ್ ರೈಲು ಸಂಚಾರ ಆರಂಭಿಸಿದರು ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಜಿಲ್ಲಾಧ್ಯಕ್ಷ ಎಸ್.ವಿ.ನಾಗರಾಜ್ರಾವ್ ಅವರು ಆಶಯ ನುಡಿಗಳನ್ನಾಡಿದರು. </p>.<p>ಸರ್.ಎಂ.ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಲಾಯಿತು. </p>.<p>ಕಸಾಪ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ವೆಂಕಟಶಿವಾರೆಡ್ಡಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಸಿ.ಮುನಿರಾಜು, ಈ ಧರೆ ಪ್ರಕಾಶ್, ಮುನಿನಾರಾಯಣಪ್ಪ, ಟಿ.ಟಿ. ನರಸಿಂಹಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಕನ್ನಡ ಸಾಹಿತ್ಯ ಪರಿಷತ್ನಿಂದ ಕನ್ನಡ ನಡೆ ಶಾಲೆಗಳ ಕಡೆ ಅಭಿಯಾನದಡಿ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಜನ್ಮದಿನ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು. </p>.<p>ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಸಮ್ಮೇಳನ ಅಧ್ಯಕ್ಷ ರೂಪಸಿ ರಮೇಶ್ ಮಾತನಾಡಿ ‘ಸರ್.ಎಂ.ವಿಶ್ವೇಶ್ವರಯ್ಯ ಅವರ ಸತತ ಪರಿಶ್ರಮದಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ನಡುವೆ ನ್ಯಾರೊ ಗೇಜ್ ರೈಲು ಮಾರ್ಗ ಆರಂಭವಾಗಿತ್ತು’ ಎಂದು ತಿಳಿಸಿದರು.</p>.<p>ವಿಶ್ವೇಶ್ವರಯ್ಯನವರ ಕೊಡುಗೆ ಇಡೀ ಜಗತ್ತಿಗೆ ಇದೆ. ಆದರೆ ಅವರ ಹುಟ್ಟೂರು ಚಿಕ್ಕಬಳ್ಳಾಪುರ ಜಿಲ್ಲೆ ಆಗಿನ ಕೋಲಾರ ಜಿಲ್ಲೆಗೆ ಇರಲಿಲ್ಲ. ಆ ನೋವು ಅವರನ್ನು ಬಹಳವಾಗಿ ಕಾಡುತ್ತಿತ್ತು. ಇಲ್ಲಿ ಯಾವುದೇ ನದಿ ನಾಲೆಗಳಿಲ್ಲದ್ದಕ್ಕೆ ಅವರು ಬಹಳ ಬೇಸತ್ತಿದ್ದರು ಎಂದರು.</p>.<p>ಕೊನೆಗೆ ಮೈಸೂರು ಮಹಾರಾಜರ ಮನವೊಲಿಸಿ ಅವರ ಹುಟ್ಟಿದ ಊರಿನ ಈ ಭಾಗದಲ್ಲಿ ನ್ಯಾರೊ ಗೇಜ್ ರೈಲು ಸಂಚಾರ ಆರಂಭಿಸಿದರು ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಜಿಲ್ಲಾಧ್ಯಕ್ಷ ಎಸ್.ವಿ.ನಾಗರಾಜ್ರಾವ್ ಅವರು ಆಶಯ ನುಡಿಗಳನ್ನಾಡಿದರು. </p>.<p>ಸರ್.ಎಂ.ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಲಾಯಿತು. </p>.<p>ಕಸಾಪ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ವೆಂಕಟಶಿವಾರೆಡ್ಡಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಸಿ.ಮುನಿರಾಜು, ಈ ಧರೆ ಪ್ರಕಾಶ್, ಮುನಿನಾರಾಯಣಪ್ಪ, ಟಿ.ಟಿ. ನರಸಿಂಹಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>