ಗುಡಿಬಂಡೆ: ಪಟ್ಟಣ ಪಂಚಾಯಿತಿ 2024-25ನೇ ಸಾಲಿನ ಬಜೆಟ್ ಸಿದ್ಧಪಡಿಸುವ ಸಲುವಾಗಿ ಇದೇ ಮೋದಲು ಬಾರಿಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸಭೆ ನಡೆಸಿತು.
ಸೋಮುವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಗೀನ್ ತಾಜ್ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಮುಖ್ಯಾಧಿಕಾರಿ ಸಭಾ ಶೀರಿನಾ ಮಾತನಾಡಿ, ಗುಡಿಬಂಡೆ ಅಭಿವೃದ್ಧಿಗಾಗಿ ಬಜೆಟ್ ಸಿದ್ಧಪಡಿಸುವ ಸಲುವಾಗಿ ಸಾರ್ವಜನಿಕರಿಂದ ಸಲಹೆ ಸೂಚನೆ ನೀಡಬೇಕೆಂದು ತಿಳಿಸಿದರು.
ಬೀದಿದೀಪ, ರಸ್ತೆ, ಕುಡಿಯುವ ನೀರು ಸೌಲಭ್ಯ ಒದಗಿಸಲು ಸಾರ್ವಜನಿಕರು ಒಕ್ಕೊರಲಿನಿಂದ ಆಗ್ರಹಿಸಿದರು.
ಸುರಸದ್ಮಗಿರಿ ಬೆಟ್ಟ, ಅಮಾನಿ ಭೈರಸಾಗರ ಕೆರೆ ವಿಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು ಮೂಲಸೌಲಭ್ಯ ಒದಗಿಸಬೇಕಾಗಿದೆ. ಪಟ್ಟಣದ ಹಲವು ಉದ್ಯಾನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಬೇಕಾಗಿದೆ ಎಂದು ಮನವಿ ಮಾಡಿದರು.
ಸಭೆಯಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವಿಕಾಸ, ಸದಸ್ಯರಾದ ವೀಣ, ಅನುಷಾ, ಬಷೀರ್ ಅಹಮದ್, ರಾಜೇಶ, ರಾಜು, ಜೆ.ಇ. ಚಕ್ರಪಾಣಿ, ಅರೋಗ್ಯ ನಿರೀಕ್ಷಕ ಶಿವಣ್ಣ, ಸಾರ್ವಜನಿಕರರು ಹಾಜರಿದ್ದರು.