ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.9ರ ನಂತರ ಸರ್ಕಾರ ಪತನವಾಗಲಿದೆ: ಶಾಸಕ ಡಿ.ಕೆ. ಶಿವಕುಮಾರ್ ಭವಿಷ್ಯ

ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಶಾಸಕ ಡಿ.ಕೆ.ಶಿವಕುಮಾರ್‌ ಭವಿಷ್ಯ
Last Updated 28 ನವೆಂಬರ್ 2019, 11:13 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: 'ಡಿ.9 ರ ನಂತರ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅನರ್ಹ ಶಾಸಕರು ಸೋತ ಮೇಲೆ ರಾಜ್ಯದ ಜನರಿಗೆ ನೆಮ್ಮದಿ ಸಿಗಲಿದೆ' ಎಂದು ಶಾಸಕ ಡಿ.ಕೆ. ಶಿವಕುಮಾರ್ ತಿಳಿಸಿದರು.

ತಾಲ್ಲೂಕಿನ ನಂದಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, 'ರಾಜಕಾರಣದಲ್ಲಿ ಕೆಟ್ಟ ಹುಳುಗಳನ್ನು ತೆಗೆದು ಹಾಕಬೇಕು. ಅಂತಹ ಕೆಲಸ ಮತದಾರರು ಮಾಡಬೇಕು. ಡಾ.ಕೆ. ಸುಧಾಕರ್ ಅವರನ್ನು ಗೆಲ್ಲಿಸಿದರೆ ಪ್ರಜಾಪ್ರಭುತ್ವಕ್ಕೆ ಅವಮಾನ' ಎಂದು ಹೇಳಿದರು.

'ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೋದಲ್ಲಿ ಬಂದಲ್ಲಿ ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು. ಅನರ್ಹರು ಹಣದ ಆಸೆಗೆ ಮಂತ್ರಿಸ್ಥಾನದ ಆಮಿಷಕ್ಕೆ ಬಲಿಯಾಗಿ ತಾಯಿಯಂತಹ ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.

'ಜಾತ್ಯತೀತ ವ್ಯವಸ್ಥೆ ಉಳಿಸಿಕೊಳ್ಳಲು ಕುಮಾರಸ್ವಾಮಿ ಅವರಿಗೆ ಬೆಂಬಲ ಸೂಚಿಸಿ ಸರ್ಕಾರ ರಚಿಸಿಲಾಗಿತ್ತು, ಆದರೆ, ಯಡಿಯೂರಪ್ಪ ಏಳು ಬಾರಿ ಸಂಚು ರೂಪಿಸಿ ಕೊನೆಗೆ ಕಾಂಗ್ರೆಸ್ – ಜೆಡಿಎಸ್ ಸರ್ಕಾರವನ್ನು ಕೆಡುವಿದರು' ಎಂದು ಗುಡುಗಿದರು.

'ಬಿಜೆಪಿ ಸ್ನೇಹಿತರು ನನ್ನನ್ನು ಜೈಲಿಗೆ ಕಳುಹಿಸಿದಾಗ ಇದೇ ಜನ ನನ್ನನ್ನು ರಕ್ಷಿಸಿದ್ದೀರಿ. ಹೋರಾಟ, ಪೂಜಾ ಫಲದ ಮೂಲಕ ನಾನು ನಿಮ್ಮ ಸೇವೆಗಾಗಿ ಮತ್ತೆ ಬಂದಿದ್ದೀನಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸುಧಾಕರ್ ಮಾರಿಕೊಳ್ಳುತ್ತಾನೆ. ಅಂತಹ ಕುಟಿಲ ಬುದ್ಧಿ ಉಳ್ಳ ವ್ಯಕ್ತಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದಾಗ ಭ್ರಷ್ಟಾಚಾರ ಮಾಡಿದ್ದಾನೆ' ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT