ಬೆಳಗಾವಿ ಕರ್ನಾಟಕದಲ್ಲಿ ಇದೆ. ಇರಲು ಬಿಡಿ. ಬೆಳಗಾವಿಯನ್ನು ಹೊಡೆದುಕೊಳ್ಳುವ ದುಷ್ಟತನ ಏಕೆ? ಬಿಜೆಪಿನೆಲ, ಜಲ, ಭಾಷೆ ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ. ನೆರೆಯ ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳದ ಜತೆ ಗಡಿ ಗಲಾಟೆ ಇಲ್ಲ. ಈ ರಾಜ್ಯಗಳು ಸೌಹಾರ್ದವಾಗಿ ಬಾಳುತ್ತವೆ. ಮಹಾರಾಷ್ಟ್ರ ಮಾತ್ರ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ.ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬಂದಾಕ್ಷಣ ಬೆಳಗಾವಿ ನಮ್ಮದು ಎನ್ನುತ್ತಿದ್ದಾರೆ ಎಂದು ಹೇಳಿದರು.