<p><strong>ಚಿಕ್ಕಬಳ್ಳಾಪುರ: </strong>‘ತಮ್ಮ ಆಡಳಿತದಲ್ಲಿ ಬರೀ ಹಗರಣಗಳನ್ನೇ ಮಾಡಿರುವ ಕಾಂಗ್ರೆಸ್ನವರಿಗೆ ಕಾಮಾಲೆ ರೋಗದವರಿಗೆ ಕಾಣೋದೆಲ್ಲ ಹಳದಿ ಎನ್ನುವಂತಾಗಿದೆ. ಅವರು ಆ ಕಾಯಿಲೆಯಿಂದ ಹೊರ ಬರಲಿ. ಇಲ್ಲದಿದ್ದರೆ ಯಾರೆಲ್ಲ ಎಲ್ಲೆಲ್ಲಿ ಹೋಗಿ ಬಂದಿದ್ದಾರೆ ಎಂದು ಹೇಳಬೇಕಾಗುತ್ತದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಎಷ್ಟು ಹಗರಣಗಳನ್ನು ಮಾಡಿಲ್ಲ? ಕೇಂದ್ರದಲ್ಲಿ ಅವರು ಅಧಿಕಾರ ಕಳೆದುಕೊಂಡದ್ದೇ ಹಗರಣಗಳ ಕಾರಣಕ್ಕೆ. ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಲಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಆರೋಗ್ಯ ಇಲಾಖೆಯವರು ಪಿಪಿಇ ಕಿಟ್ ಮತ್ತು ಸ್ಯಾನಿಟೈಸರ್ ಖರೀದಿಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆಸಿಲ್ಲ. ಕೋವಿಡ್ ಆರಂಭವಾದಾಗ ಪಿಪಿಇ ಕಿಟ್ ಮತ್ತು ಸ್ಯಾನಿಟೈಸರ್ಗೆ ಜಾಗತಿಕ ಮಟ್ಟದಲ್ಲಿ ತುಂಬಾ ಬೇಡಿಕೆ ಇತ್ತು. ಹಾಗಾಗಿ ಸ್ವಲ್ಪ ಹೆಚ್ಚಿನ ಬೆಲೆ ಕೊಟ್ಟಿರಬಹುದು’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/coronavirus-covid-19-congress-started-video-campaign-against-state-government-744024.html" itemprop="url">ಲೆಕ್ಕ ಕೇಳುವುದು ಜನತೆಯ ಹಕ್ಕು, ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ: ಸಿದ್ದರಾಮಯ್ಯ</a></p>.<p>‘ಆರೋಗ್ಯ ಇಲಾಖೆಯವರು ಮತ್ತು ಕೋವಿಡ್ ಕಾರ್ಯಪಡೆ ಸದಸ್ಯರು ಅತ್ಯಂತ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ಕಾರ್ಯಪಡೆಯಲ್ಲಿ ಐದು ಸಚಿವರು, ತಜ್ಞರಿದ್ದಾರೆ. ಕಾಂಗ್ರೆಸ್ನವರು ವಾಸ್ತವಗಳನ್ನು ತಿಳಿದುಕೊಂಡು ಮಾತನಾಡಲಿ’ ಎಂದು ಹೇಳಿದರು.</p>.<p>‘ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಶನಿವಾರ ಕೂಡ ಲಾಕ್ಡೌನ್ ಜಾರಿಗೆ ಮಾಡಬೇಕು ಎಂಬ ಕೂಗಿದೆ. ಕೊನೆಪಕ್ಷ ಬೆಂಗಳೂರಿನಲ್ಲಾದರೂ ಸ್ವಲ್ಪ ದಿನಗಳ ಮಟ್ಟಿಗೆ ಲಾಕ್ಡೌನ್ ಮಾಡುವಂತೆ ತಜ್ಞರು ಹೇಳುತ್ತಿದ್ದಾರೆ. ಈ ಬಗ್ಗೆ ಪರಾಮರ್ಶೆ ಮಾಡುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>‘ತಮ್ಮ ಆಡಳಿತದಲ್ಲಿ ಬರೀ ಹಗರಣಗಳನ್ನೇ ಮಾಡಿರುವ ಕಾಂಗ್ರೆಸ್ನವರಿಗೆ ಕಾಮಾಲೆ ರೋಗದವರಿಗೆ ಕಾಣೋದೆಲ್ಲ ಹಳದಿ ಎನ್ನುವಂತಾಗಿದೆ. ಅವರು ಆ ಕಾಯಿಲೆಯಿಂದ ಹೊರ ಬರಲಿ. ಇಲ್ಲದಿದ್ದರೆ ಯಾರೆಲ್ಲ ಎಲ್ಲೆಲ್ಲಿ ಹೋಗಿ ಬಂದಿದ್ದಾರೆ ಎಂದು ಹೇಳಬೇಕಾಗುತ್ತದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಎಷ್ಟು ಹಗರಣಗಳನ್ನು ಮಾಡಿಲ್ಲ? ಕೇಂದ್ರದಲ್ಲಿ ಅವರು ಅಧಿಕಾರ ಕಳೆದುಕೊಂಡದ್ದೇ ಹಗರಣಗಳ ಕಾರಣಕ್ಕೆ. ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಲಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಆರೋಗ್ಯ ಇಲಾಖೆಯವರು ಪಿಪಿಇ ಕಿಟ್ ಮತ್ತು ಸ್ಯಾನಿಟೈಸರ್ ಖರೀದಿಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆಸಿಲ್ಲ. ಕೋವಿಡ್ ಆರಂಭವಾದಾಗ ಪಿಪಿಇ ಕಿಟ್ ಮತ್ತು ಸ್ಯಾನಿಟೈಸರ್ಗೆ ಜಾಗತಿಕ ಮಟ್ಟದಲ್ಲಿ ತುಂಬಾ ಬೇಡಿಕೆ ಇತ್ತು. ಹಾಗಾಗಿ ಸ್ವಲ್ಪ ಹೆಚ್ಚಿನ ಬೆಲೆ ಕೊಟ್ಟಿರಬಹುದು’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/coronavirus-covid-19-congress-started-video-campaign-against-state-government-744024.html" itemprop="url">ಲೆಕ್ಕ ಕೇಳುವುದು ಜನತೆಯ ಹಕ್ಕು, ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ: ಸಿದ್ದರಾಮಯ್ಯ</a></p>.<p>‘ಆರೋಗ್ಯ ಇಲಾಖೆಯವರು ಮತ್ತು ಕೋವಿಡ್ ಕಾರ್ಯಪಡೆ ಸದಸ್ಯರು ಅತ್ಯಂತ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ಕಾರ್ಯಪಡೆಯಲ್ಲಿ ಐದು ಸಚಿವರು, ತಜ್ಞರಿದ್ದಾರೆ. ಕಾಂಗ್ರೆಸ್ನವರು ವಾಸ್ತವಗಳನ್ನು ತಿಳಿದುಕೊಂಡು ಮಾತನಾಡಲಿ’ ಎಂದು ಹೇಳಿದರು.</p>.<p>‘ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಶನಿವಾರ ಕೂಡ ಲಾಕ್ಡೌನ್ ಜಾರಿಗೆ ಮಾಡಬೇಕು ಎಂಬ ಕೂಗಿದೆ. ಕೊನೆಪಕ್ಷ ಬೆಂಗಳೂರಿನಲ್ಲಾದರೂ ಸ್ವಲ್ಪ ದಿನಗಳ ಮಟ್ಟಿಗೆ ಲಾಕ್ಡೌನ್ ಮಾಡುವಂತೆ ತಜ್ಞರು ಹೇಳುತ್ತಿದ್ದಾರೆ. ಈ ಬಗ್ಗೆ ಪರಾಮರ್ಶೆ ಮಾಡುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>