<p><strong>ಚಿಂತಾಮಣಿ:</strong> ‘ಸಂಸದ ಡಾ.ಕೆ.ಸುಧಾಕರ್ ಅಷ್ಟೇ ಅಲ್ಲ ಬೇರೆಯವರೂ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎನ್ನುತ್ತಿದ್ದಾರೆ. ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಮತ್ತು ರಾಜ್ಯ ಅಧ್ಯಕ್ಷರು ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. </p><p>ನಗರದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಶನಿವಾರ ಪಾಲ್ಗೊಂಡಿದ್ದ ಸಚಿವರಿಗೆ, ‘ಡಾ.ಕೆ.ಸುಧಾಕರ್ ಅವರು ಕಾಂಗ್ರೆಸ್ ಸೇರುವರಾ’ ಎಂದು ಪ್ರಶ್ನಿಸಿದ್ದಕ್ಕೆ ಈ ಉತ್ತರ ನೀಡಿದರು.</p><p>‘ಕಾಂಗ್ರೆಸ್ ಸಮುದ್ರ ಇದ್ದಂತೆ. ಪಕ್ಷಕ್ಕೆ ಯಾರನ್ನೂ ಬರಬೇಡಿ ಎಂದು ಹೇಳಲು ಆಗುವುದಿಲ್ಲ. ಪಕ್ಷ ಕಟ್ಟಬೇಕಾಗುತ್ತದೆ. ಕೇವಲ ಸುಧಾಕರ್ ಅಷ್ಟೇ ಅಲ್ಲ ಬೇರೆಯವರೂ ಬರಬೇಕು ಎನ್ನುತ್ತಿದ್ದಾರೆ. ಸಾಮಾನ್ಯವಾಗಿ ಯಾರೇ ಬಂದರೂ ಪಕ್ಷಕ್ಕೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ಆಗುತ್ತದೆ’ ಎಂದರು. </p><p>ಸಂಸದ ಡಾ.ಕೆ.ಸುಧಾಕರ್ ಕಾಂಗ್ರೆಸ್ ಸೇರುತ್ತಾರೆಯೇ ಇಲ್ಲವೆ ಎನ್ನುವ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ.</p><p>ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಹೈಕಮಾಂಡ್ಗೆ ದೂರು ಸಹ ನೀಡಿದ್ದಾರೆ. </p><p>ಮತ್ತೊಂದು ಕಡೆ ಗೌರಿಬಿದನೂರು ತಾಲ್ಲೂಕಿನ ಹೊಸೂರಿನಲ್ಲಿ ಇತ್ತೀಚೆಗೆ ನಡೆದ ಗಾಂಧಿವಾದಿ ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಅವರ ಈ ಮಾತುಗಳು ನಾನಾ ರೀತಿಯ ರಾಜಕೀಯ ವಿಶ್ಲೇಷಣೆಗೆ ಕಾರಣವಾಗಿದೆ.</p>.ಚಿಕ್ಕಬಳ್ಳಾಪುರ | ನನ್ನ ರಾಜಕೀಯ ಸಮಾಧಿಗೆ ವಿಜಯೇಂದ್ರ ಯತ್ನ: ಸುಧಾಕರ್ ವಾಗ್ದಾಳಿ.ಅಧ್ಯಕ್ಷರ ನೇಮಕಕ್ಕೆ ವಿರೋಧ: ಪಕ್ಷದ ಕಚೇರಿಗೆ ನುಗ್ಗಿ ಸುಧಾಕರ್ ಬೆಂಬಲಿಗರ ಆಕ್ರೋಶ.ಸುಧಾಕರ್ ಕಾಂಗ್ರೆಸ್ ಸೇರುತ್ತಾರೆ ಎನ್ನುವುದು ಊಹೆ: ಸಚಿವ ಡಾ.ಎಂ.ಸಿ.ಸುಧಾಕರ್ .ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ‘ಸಂಸದ ಡಾ.ಕೆ.ಸುಧಾಕರ್ ಅಷ್ಟೇ ಅಲ್ಲ ಬೇರೆಯವರೂ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎನ್ನುತ್ತಿದ್ದಾರೆ. ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಮತ್ತು ರಾಜ್ಯ ಅಧ್ಯಕ್ಷರು ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. </p><p>ನಗರದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಶನಿವಾರ ಪಾಲ್ಗೊಂಡಿದ್ದ ಸಚಿವರಿಗೆ, ‘ಡಾ.ಕೆ.ಸುಧಾಕರ್ ಅವರು ಕಾಂಗ್ರೆಸ್ ಸೇರುವರಾ’ ಎಂದು ಪ್ರಶ್ನಿಸಿದ್ದಕ್ಕೆ ಈ ಉತ್ತರ ನೀಡಿದರು.</p><p>‘ಕಾಂಗ್ರೆಸ್ ಸಮುದ್ರ ಇದ್ದಂತೆ. ಪಕ್ಷಕ್ಕೆ ಯಾರನ್ನೂ ಬರಬೇಡಿ ಎಂದು ಹೇಳಲು ಆಗುವುದಿಲ್ಲ. ಪಕ್ಷ ಕಟ್ಟಬೇಕಾಗುತ್ತದೆ. ಕೇವಲ ಸುಧಾಕರ್ ಅಷ್ಟೇ ಅಲ್ಲ ಬೇರೆಯವರೂ ಬರಬೇಕು ಎನ್ನುತ್ತಿದ್ದಾರೆ. ಸಾಮಾನ್ಯವಾಗಿ ಯಾರೇ ಬಂದರೂ ಪಕ್ಷಕ್ಕೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ಆಗುತ್ತದೆ’ ಎಂದರು. </p><p>ಸಂಸದ ಡಾ.ಕೆ.ಸುಧಾಕರ್ ಕಾಂಗ್ರೆಸ್ ಸೇರುತ್ತಾರೆಯೇ ಇಲ್ಲವೆ ಎನ್ನುವ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ.</p><p>ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಹೈಕಮಾಂಡ್ಗೆ ದೂರು ಸಹ ನೀಡಿದ್ದಾರೆ. </p><p>ಮತ್ತೊಂದು ಕಡೆ ಗೌರಿಬಿದನೂರು ತಾಲ್ಲೂಕಿನ ಹೊಸೂರಿನಲ್ಲಿ ಇತ್ತೀಚೆಗೆ ನಡೆದ ಗಾಂಧಿವಾದಿ ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಅವರ ಈ ಮಾತುಗಳು ನಾನಾ ರೀತಿಯ ರಾಜಕೀಯ ವಿಶ್ಲೇಷಣೆಗೆ ಕಾರಣವಾಗಿದೆ.</p>.ಚಿಕ್ಕಬಳ್ಳಾಪುರ | ನನ್ನ ರಾಜಕೀಯ ಸಮಾಧಿಗೆ ವಿಜಯೇಂದ್ರ ಯತ್ನ: ಸುಧಾಕರ್ ವಾಗ್ದಾಳಿ.ಅಧ್ಯಕ್ಷರ ನೇಮಕಕ್ಕೆ ವಿರೋಧ: ಪಕ್ಷದ ಕಚೇರಿಗೆ ನುಗ್ಗಿ ಸುಧಾಕರ್ ಬೆಂಬಲಿಗರ ಆಕ್ರೋಶ.ಸುಧಾಕರ್ ಕಾಂಗ್ರೆಸ್ ಸೇರುತ್ತಾರೆ ಎನ್ನುವುದು ಊಹೆ: ಸಚಿವ ಡಾ.ಎಂ.ಸಿ.ಸುಧಾಕರ್ .ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>