ಶಾಸಕ ವಿ. ಮುನಿಯಪ್ಪ ಅವರು ಈ ಕ್ಷೇತ್ರವನ್ನು ಆರು ಬಾರಿ ಪ್ರತಿನಿಧಿಸಿದ್ದು, ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದಾರೆ.ಆದರೆ ಇತ್ತೀಚೆಗೆ ಎಬಿಡಿ ಟ್ರಸ್ಟ್ನ ಅಧ್ಯಕ್ಷ ರಾಜೀವ್ಗೌಡ, ಎಸ್ಎನ್ ಕ್ರಿಯಾ ಟ್ರಸ್ಟ್ನ ಅಧ್ಯಕ್ಷ ಪುಟ್ಟು ಆಂಜಿನಪ್ಪ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಸಮಾಜ ಸೇವೆ ಮೂಲಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳತೊಡಗಿದ್ದಾರೆ. ಈ ಮೂವರಲ್ಲಿ ಪಕ್ಷದ ‘ಬಿ’ಫಾರಂಯಾರಿಗೆ ಸಿಗುತ್ತದೆ ಎಂಬುದು ಗೊತ್ತಿಲ್ಲ. ಇದರಿಂದಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.