ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಡಸ್ತನ ಇದ್ದರೆ ನ್ಯಾಯಾಲಯಕ್ಕೆ ಹೋಗಲಿ: ಟಿ.ಬಿ.ಜಯಚಂದ್ರ

ಸಿದ್ದರಾಮಯ್ಯನವರಿಗೆ ಬಿಜೆಪಿ ನೋಟಿಸ್‌ ನೀಡಿದ್ದಕ್ಕೆ ಸವಾಲು
Last Updated 4 ಆಗಸ್ಟ್ 2020, 12:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಬಿಜೆಪಿಯವರು ನೋಟಿಸ್‌ ಕೊಟ್ಟು ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಅವರಿಗೆ ಗಂಡಸ್ತನ ಇದ್ದರೆ ನ್ಯಾಯಾಲಯಕ್ಕೆ ಹೋಗಲಿ. ಅವ್ಯವಹಾರ ಹೇಗಾಗಿದೆ ಎಂದು ನಾವು ಅಲ್ಲಿ ಸಾಬೀತು ಮಾಡುತ್ತೇವೆ’ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾವು ಮಾಡುವ ಆರೋಪಗಳಿಗೆ ಉತ್ತರ ಕೊಡಲಾಗದೆ ಬಿಜೆಪಿಯವರು ವಕೀಲರ ಮೂಲಕ ನೋಟಿಸ್‌ ಕೊಡಿಸುವುದು ನೋಡಿದರೆ ಪರೋಕ್ಷವಾಗಿ ತಪ್ಪನ್ನು ಒಪ್ಪಿಕೊಂಡಂತಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಧೈರ್ಯವಿದ್ದರೆ ಕಾಂಗ್ರೆಸ್‌ನವರು ಆರೋಪ ಮಾಡುತ್ತಿರುವುದು ಸುಳ್ಳು ಎಂದು ನ್ಯಾಯಾಲಯಕ್ಕೆ ಹೋಗಲಿ. ಅಲ್ಲಿ ನಾವು ನಮ್ಮ ಬಳಿ ಇರುವ ದಾಖಲೆಗಳನ್ನು ಕೊಡುತ್ತೇವೆ. ಅವರೂ ದಾಖಲೆಗಳನ್ನು ನೀಡಲಿ. ನ್ಯಾಯಾಲಯಕ್ಕೆ ಪ್ರಧಾನಮಂತ್ರಿ ಅವರು ಬಂದು ಪಿಎಂ ಕೇರ್‌ ನಿಧಿಯ ಲೆಕ್ಕ ಕೊಡಲಿ’ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT