ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶಿಡ್ಲಘಟ್ಟ: ರಸ್ತೆಗಳಿಗೆ ಸಿಗಬಹುದೇ ತುರ್ತು ‘ಶಸ್ತ್ರ ಚಿಕಿತ್ಸೆ’

ರೇಷ್ಮೆ, ಹೈನು, ಆಸ್ಪತ್ರೆ ಅಭಿವೃದ್ಧಿ ಕನಸು । ಬಜೆಟ್– ಶಿಡ್ಲಘಟ್ಟ ಜನತೆ ನಿರೀಕ್ಷೆ ಅಪಾರ
Published : 24 ಫೆಬ್ರುವರಿ 2025, 7:11 IST
Last Updated : 24 ಫೆಬ್ರುವರಿ 2025, 7:11 IST
ಫಾಲೋ ಮಾಡಿ
Comments
ಶಿಡ್ಲಘಟ್ಟದ ರೇಷ್ಮೆ ನೂಲು ಬಿಚ್ಚಾಣಿಕೆ ಕೇಂದ್ರ
ಶಿಡ್ಲಘಟ್ಟದ ರೇಷ್ಮೆ ನೂಲು ಬಿಚ್ಚಾಣಿಕೆ ಕೇಂದ್ರ
ಈ ಬಜೆಟ್‌ನಲ್ಲಿ ಕ್ಷೇತ್ರಕ್ಕೆ ಹಲವು ಪ್ರಯೋಜನೆ ‘
ಗ್ರಾಮೀಣ ರಸ್ತೆಗಳು ಹದಗೆಟ್ಟಿದ್ದು ಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಜನರು ದೈನಂದಿನ ಕೆಲಸಗಳಿಗೆ ತೊಂದರೆಯಾಗುತ್ತಿರುವ ವಿಚಾರವನ್ನು ಈಗಾಗಲೇ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು 2024-25 ಸಾಲಿನಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಅನುದಾನ ಮಂಜೂರು ಮಾಡಿ ಹಾಳಾಗಿರುವ ರಸ್ತೆಗಳನ್ನು ದುರಸ್ತಿ ಪಡಿಸಲು ಕ್ರಮವಹಿಸಲಾಗುತ್ತಿದೆ ಎಂದು ಲಿಖಿತ ಉತ್ತರ ಕೊಟ್ಟಿದ್ದಾರೆ. ಹಾಗಾಗಿ ಈ ಬಾರಿಯ ಬಜೆಟ್ ಶಿಡ್ಲಘಟ್ಟ ಕ್ಷೇತ್ರಕ್ಕೆ ಅನುಕೂಲವಾಗಲಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ ಅಂಗನವಾಡಿ ಕೊರತೆ ನೀಗಿಸಬೇಕು ಎಂಬ ವಿಚಾರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು 2024-25 ನೇ ಸಾಲಿಗೆ ಹೊಸದಾಗಿ ಅಂಗನವಾಡಿ ಕೇಂದ್ರ ತೆರೆಯಲು ಅಗತ್ಯಕ್ಕೆ ತಕ್ಕಂತೆ ಹೊಸ ಅಂಗನವಾಡಿ ಕೇಂದ್ರ ಸ್ಥಾಪಿಸಲು ಕೇಂದ್ರ ಸಕಾರದ ಅನುಮೋದನೆ ಪಡೆದು ಕ್ರಮವಹಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಅಂಗವಿಕಲರ ವಸತಿನಿಲಯದ ಬಗ್ಗೆ ನೀರಿನ ಕುರಿತಾಗಿ ಸೇರಿದಂತೆ ಹಲವು ಅತ್ಯವಶ್ಯಕ ಅಭಿವೃದ್ಧಿ ವಿಚಾರಗಳನ್ನು ಸಂಬಂಧಿಸಿದ ಸಚಿವರಿಗೆ ಲಿಖಿತವಾಗಿ ವಿವರಿಸಿದ್ದೇವೆ ಎಂದು ಹೇಳಿದರು.
ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಿ
ಈ ಭಾಗದ ರೈತರಿಗೆ ನೀರಾವರಿ ಯೋಜನೆಗಳು ಬೇಕಾಗಿದೆ. ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಗ್ರಂಥಾಲಯ ತುರ್ತಾಗಿ ಆಗಬೇಕಿದೆ. ತಾಲ್ಲೂಕಿನ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು. ಕೌಶಲ್ಯ ತರಬೇತಿ ಕೇಂದ್ರ ಅವಶ್ಯಕತೆ ಇದೆ. ಯುವಕರಿಗೆ ಉದ್ಯೋಗದ ಅವಶ್ಯಕತೆ ಇರುವುದರಿಂದ ‌ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಬೇಕು. ಟೊಮೆಟೊ ಮಾವು ಮತ್ತು ದ್ರಾಕ್ಷಿ ಬೆಳೆಗಳನ್ನು ಅತಿ ಹೆಚ್ಚು ನಮ್ಮ ರೈತರು ಬೆಳೆಯುತ್ತಾರೆ. ಆದರೆ ಬೆಲೆ ಸಿಗದೇ ಕೆಲವು ಬಾರಿ ರಸ್ತೆಗೆ ಬಿಸಾಡುತ್ತಾರೆ ಅಥವಾ ತೋಟದಲ್ಲಿಯೇ ಕೊಳೆಯಲು ಬಿಡುತ್ತಾರೆ. ಆದ್ದರಿಂದ ಈ ಬೆಳೆಗಳಿಗೆ ಪೂರಕ ಘಟಕಗಳು ಅವಶ್ಯಕತೆ ‌ಇರುವುದರಿಂದ ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕು. ತಾಲ್ಲೂಕಿನ ‌ ವಿವಿದ ಇತಿಹಾಸವನ್ನು‌ ತಿಳಿಸುವ ಸ್ಥಳಗಳು ಮತ್ತು ದಾಖಲೆಗಳನ್ನು ಸಂರಕ್ಷಣೆ ಮಾಡಬೇಕಿದೆ. ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳನ್ನು ಸರ್ಕಾರ ವಿಶೇಷ ಅನುದಾನ ಕೊಟ್ಟು ಸಕಲ ಸೌಲಭ್ಯಗಳೊಂದಿಗೆ ಉನ್ನತ ದರ್ಜೆಗೆ ಏರಿಸಬೇಕು. ಬಿ.ಆರ್.ಅನಂತಕೃಷ್ಣ ಶಿಡ್ಲಘಟ್ಟ *** 100 ಕಿ.ಮೀ ರಸ್ತೆ ಅತ್ಯಂತ ಹೀನಾಯ ಸ್ಥಿತಿಯಲ್ಲಿ... ಸೋರುತಿಹುದು ಮನೆಯ ಮಾಳಿಗೆ ಎಂಬಂತೆ ಶಿಡ್ಲಘಟ್ಟದ ತಾಲ್ಲೂಕು ಆಡಳಿತದ ಕೇಂದ್ರ ಸ್ಥಾನ ಮಿನಿ ವಿಧಾನಸೌಧದ ಪರಿಸ್ಥಿತಿಯಿದೆ. ಕಳಪೆಯಾಗಿ ಮೂವತ್ತು ವರ್ಷಗಳ ಹಿಂದೆ ನಿರ್ಮಾಣವಾಗಿರುವ ಕಟ್ಟಡವನ್ನು ಪುನರುಜ್ಜೀವಗೊಳಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಸುಮಾರು 100 ಕಿ.ಮೀ ರಸ್ತೆ ಅತ್ಯಂತ ಹೀನಾಯ ಪರಿಸ್ಥಿತಿಯಲ್ಲಿದ್ದರೆ ಇನ್ನು 150 ಕಿ.ಮೀ ರಸ್ತೆ ದುರಸ್ತಿ ಮಾಡಲೇ ಬೇಕಾಗಿದೆ. ಹೈಟೆಕ್ ಮಾರುಕಟ್ಟೆ ನಿರ್ಮಾಣವಾದ ಮೇಲೆ ಈಗಿರುವ ರೇಷ್ಮೆ ಗೂಡಿನ ಮಾರುಕಟ್ಟೆಯ ಸ್ಥಳದಲ್ಲಿ ಸುಸಜ್ಜಿತವಾದ ನೂರು ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಎ.ಎಂ.ತ್ಯಾಗರಾಜ್ ಅಪ್ಪೇಗೌಡನಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT