ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ತಿಕ ಹುಣ್ಣಿಮೆ ಪೂಜೆ

Last Updated 1 ಡಿಸೆಂಬರ್ 2020, 3:19 IST
ಅಕ್ಷರ ಗಾತ್ರ

ಚೇಳೂರು: ಇಲ್ಲಿನ ಪ್ರಸಿದ್ಧ ಶ್ರೀಪ್ರಸನ್ನ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ಸೋಮವಾರ ಕಾರ್ತಿಕ ಹುಣ್ಣಿಮೆ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.

ಬೆಳಿಗ್ಗೆ 5 ಗಂಟೆಯಿಂದಲೇ ಪಟ್ಟಣದ ಅಪಾರ ಸಂಖ್ಯೆಯ ಭಕ್ತರು ದೇವಾಲಯದ ಮುಂಭಾಗ ಸ್ವಾಮಿಯ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತಿದ್ದರು. ಅರಳಿಕಟ್ಟೆ ಮತ್ತು ನಾಗದೇವತೆಗಳಿಗೆ ದೀಪದಾರತಿ ಸೇವೆ ಸಲ್ಲಿಸಿ ಭಕ್ತಿಭಾವ ಮೆರೆದರು ಮೂಲದೇವರಿಗೆ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ಕಾಶಿ ವಿಶ್ವೇಶ್ವರ ಸ್ವಾಮಿಯ ದರ್ಶನ
ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT