ಬಾಗೇಪಲ್ಲಿ: ಗಡಿ ಭಾಗದ ತಾಲ್ಲೂಕಿನಲ್ಲಿ 30 ವರ್ಷಗಳಿಂದ ಕನ್ನಡ ನಾಡು, ನುಡಿ, ನೆಲ, ಜಲ, ಕಲೆ, ಸಾಹಿತ್ಯ ಸೇವೆ ಮಾಡಿದಂತಹ ನನ್ನಂತಹ ಹಿರಿಯರನ್ನು ಪರಿಗಣನೆಗೆ ತೆಗೆದುಕೊಳ್ಳದೆ ತಾಲ್ಲೂಕು ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ನ್ಯಾಷನಲ್ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎ.ಕೆ. ನಿಂಗಪ್ಪ ದೂರಿದರು.