<p><strong>ಚಿಕ್ಕಬಳ್ಳಾಪುರ:</strong> ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್) ಆಗಸ್ಟ್ನಲ್ಲಿ ಸ್ವಾತಂತ್ರ್ಯ ಚಳವಳಿ ಕುರಿತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. </p><p>ನಗರದಲ್ಲಿ ಭಾನುವಾರ ಜಿಲ್ಲೆ, ತಾಲ್ಲೂಕು ಮತ್ತು ಶಾಲೆ ಮಟ್ಟದಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪರೀಕ್ಷೆಗೆ ತಮ್ಮ ಶಾಲೆಯ ವಿದ್ಯಾರ್ಥಿಗಳನ್ನು ನೋಂದಾಯಿಸಿದ್ದ ಶಾಲಾ ಸಂಯೋಜಕರಿಗೆ ಗೌರವ ಸಮರ್ಪಣೆ ಸಮಾರಂಭ ನಡೆಯಿತು.</p><p>ಜಿಲ್ಲಾ ಮುತ್ತು ತಾಲ್ಲೂಕು ಮಟ್ಟದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಚಿರಂತನ ಗೌಡ, ಪ್ರೇರಿತ, ಹರ್ಷಿತ್ ಎಂ.ಗೌಡ, ವೇದಶ್ರೀ, ದಿವ್ಯ.ಆರ್, ಸವೇರಿಯ ಅವರಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ವಿತರಿಸಲಾಯಿತು.</p><p>ಶಾಲಾ ಹಂತದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು, ವಿದುರಾಶ್ವತ್ಥ ಭಾವಚಿತ್ರವಿರುವ ಸ್ಮರಣಿಕೆ , ಪುಸ್ತಕ ಮತ್ತು ಅಭಿನಂದನಾ ಪತ್ರ ನೀಡಲಾಯಿತು. ವಿವಿಧ ಶಾಲೆಗಳ ಹದಿನಾಲ್ಕು ಶಿಕ್ಷಕರು ಮತ್ತು ಜಿಲ್ಲಾ ಸಂಯೋಜಕಿ ಕೆ.ಎಂ.ಕಾವ್ಯ ಅವರನ್ನು ಸನ್ಮಾನಿಸಲಾಯಿತು.</p><p>ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವ ಎನ್.ಲೋಕನಾಥ್ ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಬೇಕು. ಜೀವನದಲ್ಲಿ ಅನ್ವಯಿಕ ಜ್ಞಾನ ಹೊಂದಬೇಕು. ಹದಿಹರೆಯದಲ್ಲಿ ಕಷ್ಟ, ಸಂಕಟ, ದುಃಖ, ಸಂತೋಷಗಳಿಂದ ವಿಚಲಿತರಾಗಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.</p><p>ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿರುವ ಇಂತಹ ಪರೀಕ್ಷೆಗಳು ನಿಮ್ಮ ಜ್ಞಾನವೃದ್ಧಿಗೆ ಪೂರಕ ಎಂದರು.</p><p>ಸಮಿತಿಯ ರಾಜ್ಯ ಪದಾಧಿಕಾರಿ ಕೃಷ್ಣಾನಂದ ಮಾತನಾಡಿ, ಸಮಿತಿಯ ಜನಸಮುದಾಯಕ್ಕೆ ಅಂಧಾನುಕರಣೆ , ಕಂದಾಚಾರಗಳಿಂದ ಆಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡುತ್ತಿದೆ. ವೈಜ್ಞಾನಿಕ ವಿಚಾರಗಳನ್ನು ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.</p><p>ಎಲ್ಲ ವಿಚಾರಗಳನ್ನು ವೈಜ್ಞಾನಿಕ ದೃಷ್ಟಿಕೋನದಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಲು ಅರಿವು ಮೂಡಿಸುತ್ತಿದೆ ಎಂದು ಹೇಳಿದರು. </p><p>ಅಧ್ಯಕ್ಷತೆವಹಿಸಿದ್ದ ಸಮಿತಿಯ ಜಿಲ್ಲಾ ಅಧ್ಯಕ್ಷ ಕೆ.ಎಂ. ರೆಡ್ಡಪ್ಪ, ಜಿಲ್ಲೆಯಿಂದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.</p><p>ನಗರಸಭೆ ಸದಸ್ಯರಾದ ಅಣ್ಣಮ್ಮ, ಪ್ರಾಂತ ರೈತ ಸಂಘದ ಮುಖಂಡ ಮುನಿಕೃಷ್ಣಪ್ಪ, ಕೆ.ಎಸ್.ನಾರಾಯಣ ಸ್ವಾಮಿ, ವೆಂಕಟರಮಣ ನಾಯಕ್, ಕಾವ್ಯ, ಶಶಿಕಲಾ, ಜಯಭಾರತಿ, ಸೌಭಾಗ್ಯ, ಶ್ರೀನಿವಾಸ್, ಭೈರಪ್ಪ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್) ಆಗಸ್ಟ್ನಲ್ಲಿ ಸ್ವಾತಂತ್ರ್ಯ ಚಳವಳಿ ಕುರಿತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. </p><p>ನಗರದಲ್ಲಿ ಭಾನುವಾರ ಜಿಲ್ಲೆ, ತಾಲ್ಲೂಕು ಮತ್ತು ಶಾಲೆ ಮಟ್ಟದಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪರೀಕ್ಷೆಗೆ ತಮ್ಮ ಶಾಲೆಯ ವಿದ್ಯಾರ್ಥಿಗಳನ್ನು ನೋಂದಾಯಿಸಿದ್ದ ಶಾಲಾ ಸಂಯೋಜಕರಿಗೆ ಗೌರವ ಸಮರ್ಪಣೆ ಸಮಾರಂಭ ನಡೆಯಿತು.</p><p>ಜಿಲ್ಲಾ ಮುತ್ತು ತಾಲ್ಲೂಕು ಮಟ್ಟದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಚಿರಂತನ ಗೌಡ, ಪ್ರೇರಿತ, ಹರ್ಷಿತ್ ಎಂ.ಗೌಡ, ವೇದಶ್ರೀ, ದಿವ್ಯ.ಆರ್, ಸವೇರಿಯ ಅವರಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ವಿತರಿಸಲಾಯಿತು.</p><p>ಶಾಲಾ ಹಂತದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು, ವಿದುರಾಶ್ವತ್ಥ ಭಾವಚಿತ್ರವಿರುವ ಸ್ಮರಣಿಕೆ , ಪುಸ್ತಕ ಮತ್ತು ಅಭಿನಂದನಾ ಪತ್ರ ನೀಡಲಾಯಿತು. ವಿವಿಧ ಶಾಲೆಗಳ ಹದಿನಾಲ್ಕು ಶಿಕ್ಷಕರು ಮತ್ತು ಜಿಲ್ಲಾ ಸಂಯೋಜಕಿ ಕೆ.ಎಂ.ಕಾವ್ಯ ಅವರನ್ನು ಸನ್ಮಾನಿಸಲಾಯಿತು.</p><p>ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವ ಎನ್.ಲೋಕನಾಥ್ ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಬೇಕು. ಜೀವನದಲ್ಲಿ ಅನ್ವಯಿಕ ಜ್ಞಾನ ಹೊಂದಬೇಕು. ಹದಿಹರೆಯದಲ್ಲಿ ಕಷ್ಟ, ಸಂಕಟ, ದುಃಖ, ಸಂತೋಷಗಳಿಂದ ವಿಚಲಿತರಾಗಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.</p><p>ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿರುವ ಇಂತಹ ಪರೀಕ್ಷೆಗಳು ನಿಮ್ಮ ಜ್ಞಾನವೃದ್ಧಿಗೆ ಪೂರಕ ಎಂದರು.</p><p>ಸಮಿತಿಯ ರಾಜ್ಯ ಪದಾಧಿಕಾರಿ ಕೃಷ್ಣಾನಂದ ಮಾತನಾಡಿ, ಸಮಿತಿಯ ಜನಸಮುದಾಯಕ್ಕೆ ಅಂಧಾನುಕರಣೆ , ಕಂದಾಚಾರಗಳಿಂದ ಆಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡುತ್ತಿದೆ. ವೈಜ್ಞಾನಿಕ ವಿಚಾರಗಳನ್ನು ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.</p><p>ಎಲ್ಲ ವಿಚಾರಗಳನ್ನು ವೈಜ್ಞಾನಿಕ ದೃಷ್ಟಿಕೋನದಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಲು ಅರಿವು ಮೂಡಿಸುತ್ತಿದೆ ಎಂದು ಹೇಳಿದರು. </p><p>ಅಧ್ಯಕ್ಷತೆವಹಿಸಿದ್ದ ಸಮಿತಿಯ ಜಿಲ್ಲಾ ಅಧ್ಯಕ್ಷ ಕೆ.ಎಂ. ರೆಡ್ಡಪ್ಪ, ಜಿಲ್ಲೆಯಿಂದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.</p><p>ನಗರಸಭೆ ಸದಸ್ಯರಾದ ಅಣ್ಣಮ್ಮ, ಪ್ರಾಂತ ರೈತ ಸಂಘದ ಮುಖಂಡ ಮುನಿಕೃಷ್ಣಪ್ಪ, ಕೆ.ಎಸ್.ನಾರಾಯಣ ಸ್ವಾಮಿ, ವೆಂಕಟರಮಣ ನಾಯಕ್, ಕಾವ್ಯ, ಶಶಿಕಲಾ, ಜಯಭಾರತಿ, ಸೌಭಾಗ್ಯ, ಶ್ರೀನಿವಾಸ್, ಭೈರಪ್ಪ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>