<p>ಚೇಳೂರು: 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ, ಚೇಳೂರು ತಾಲ್ಲೂಕಿನ ಪಿಬಿಆರ್ಸಿಪಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಭೂಮಿಪೂಜೆ ನೆರವೇರಿಸಿದರು.</p>.<p>ಗ್ರಾಮೀಣ ಭಾಗದ ಸಾರ್ವಜನಿಕರ ಹಾಗೂ ವಾಹನ ಸವಾರರ ಮನವಿಗೆ ಸ್ಪಂದಿಸಿರುವ ಶಾಸಕ, ರಸ್ತೆ ನಿರ್ಮಾಣಕ್ಕಾಗಿ ₹4.75ಕೋಟಿ ಅನುದಾನ ಮಂಜೂರು ಮಾಡಿಸಿದ್ದಾರೆ.</p>.<p>ನಿಗದಿತ ಅವಧಿಯೊಳಗೆ ಗುಣಮಟ್ಟದ ವಸ್ತುಗಳನ್ನು ಬಳಸಿ ರಸ್ತೆ ನಿರ್ಮಿಸಬೇಕು. ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ದಿನನಿತ್ಯ ನೂರಾರು ವಾಹನ ಸಂಚರಿಸುವ ಈ ರಸ್ತೆಗಳು ಕನಿಷ್ಠ ಹತ್ತಾರು ವರ್ಷಗಳ ಕಾಲ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಎಂದರು.</p>.<p>ರಾಶ್ಚರುವು ಗ್ರಾಮದಿಂದ ಕುರುಬವಾಂಡ್ಲಪಲ್ಲಿ ಗ್ರಾಮದವರೆಗೆ ಹಾಗೂ ಚಾಕವೇಲು ಗ್ರಾಮದಿಂದ ವಡ್ಡಿವಾಂಡ್ಲಪಲ್ಲಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿಯಾಗಲಿದೆ.</p>.<p>ವಕೀಲ ಚಂದ್ರಶೇಖರರೆಡ್ಡಿ, ಬಾಬುರೆಡ್ಡಿ, ಎಚ್.ಶಾಮೀರ್ ಬಾಷ, ವೆಂಕಟೇಶ್, ಡೈರಿ ನಾಗರಾಜ್, ನರಸಿರಾಮ, ರಾಮು, ಶಫಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-16-1621267172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೇಳೂರು: 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ, ಚೇಳೂರು ತಾಲ್ಲೂಕಿನ ಪಿಬಿಆರ್ಸಿಪಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಭೂಮಿಪೂಜೆ ನೆರವೇರಿಸಿದರು.</p>.<p>ಗ್ರಾಮೀಣ ಭಾಗದ ಸಾರ್ವಜನಿಕರ ಹಾಗೂ ವಾಹನ ಸವಾರರ ಮನವಿಗೆ ಸ್ಪಂದಿಸಿರುವ ಶಾಸಕ, ರಸ್ತೆ ನಿರ್ಮಾಣಕ್ಕಾಗಿ ₹4.75ಕೋಟಿ ಅನುದಾನ ಮಂಜೂರು ಮಾಡಿಸಿದ್ದಾರೆ.</p>.<p>ನಿಗದಿತ ಅವಧಿಯೊಳಗೆ ಗುಣಮಟ್ಟದ ವಸ್ತುಗಳನ್ನು ಬಳಸಿ ರಸ್ತೆ ನಿರ್ಮಿಸಬೇಕು. ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ದಿನನಿತ್ಯ ನೂರಾರು ವಾಹನ ಸಂಚರಿಸುವ ಈ ರಸ್ತೆಗಳು ಕನಿಷ್ಠ ಹತ್ತಾರು ವರ್ಷಗಳ ಕಾಲ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಎಂದರು.</p>.<p>ರಾಶ್ಚರುವು ಗ್ರಾಮದಿಂದ ಕುರುಬವಾಂಡ್ಲಪಲ್ಲಿ ಗ್ರಾಮದವರೆಗೆ ಹಾಗೂ ಚಾಕವೇಲು ಗ್ರಾಮದಿಂದ ವಡ್ಡಿವಾಂಡ್ಲಪಲ್ಲಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿಯಾಗಲಿದೆ.</p>.<p>ವಕೀಲ ಚಂದ್ರಶೇಖರರೆಡ್ಡಿ, ಬಾಬುರೆಡ್ಡಿ, ಎಚ್.ಶಾಮೀರ್ ಬಾಷ, ವೆಂಕಟೇಶ್, ಡೈರಿ ನಾಗರಾಜ್, ನರಸಿರಾಮ, ರಾಮು, ಶಫಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-16-1621267172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>