<p>ಚೇಳೂರು: ಕಲ್ಯಾಣಿ ಸ್ವಚ್ಛತಾ ಅಭಿಯಾನದ ಅಂಗವಾಗಿ ತಾಲ್ಲೂಕಿನ ಚಾಕವೇಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಗವಪ್ಯಾಯಲವಾರಿಪಲ್ಲಿ ಗ್ರಾಮದ ಐತಿಹಾಸಿಕ ಕಲ್ಯಾಣಿಯನ್ನು ಶ್ರಮದಾನದ ಮೂಲಕ ಸೋಮವಾರ ಸ್ವಚ್ಛಗೊಳಿಸಲಾಯಿತು.</p>.<p>ಜಿಲ್ಲೆಯಾದ್ಯಂತ ಮಾರ್ಚ್ 23 ರಿಂದ ಏ.3ರವರೆಗೆ ಕಲ್ಯಾಣಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p>ದಿಗವಪ್ಯಾಯಲವಾರಿಪಲ್ಲಿಯ ಕಲ್ಯಾಣಿಯು ಶತಮಾನಗಳ ಇತಿಹಾಸ ಹೊಂದಿದೆ. ನಿರ್ವಹಣೆಯಿಲ್ಲದೆ ಗಿಡಗಂಟಿಗಳು ಹಾಗೂ ಹೂಳಿನಿಂದ ತುಂಬಿತ್ತು. ಸೋಮವಾರ ನಡೆದ ಶ್ರಮದಾನದಲ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p>ಬೆಳಿಗ್ಗೆಯಿಂದಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಕಲ್ಯಾಣಿಯ ಸುತ್ತಮುತ್ತ ಬೆಳೆದಿದ್ದ ಮುಳ್ಳಿನ ಪೊದೆಗಳನ್ನು ತೆರವುಗೊಳಿಸಿದರು. ಒಳಭಾಗದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಹೂಳನ್ನು ವಿಲೇವಾರಿ ಮಾಡಲಾಯಿತು.</p>.<p>ಪಂಚಾಯತಿ ಸಿಬ್ಬಂದಿಗಳ ಈ ಕಾರ್ಯವನ್ನು ಕಂಡ ಗ್ರಾಮಸ್ಥರು ಕೂಡ ಶ್ರಮದಾನದಲ್ಲಿ ಕೈಜೋಡಿಸಿದರು. ಕಲ್ಯಾಣಿಯನ್ನು ಸ್ವಚ್ಛಗೊಳಿಸುವುದಷ್ಟೇ ಅಲ್ಲದೆ, ಅದನ್ನು ಮುಂದಿನ ದಿನಗಳಲ್ಲಿ ಕಲುಷಿತಗೊಳಿಸದಂತೆ ಕಾಪಾಡಿಕೊಳ್ಳುವ ಸಂಕಲ್ಪವನ್ನು ಗ್ರಾಮಸ್ಥರು ಮಾಡಿದರು. ಪ್ಲಾಸ್ಟಿಕ್ ಮುಕ್ತ ಗ್ರಾಮ ಮತ್ತು ಜಲ ಸಂರಕ್ಷಣೆಯ ಬಗ್ಗೆ ಈ ಸಂದರ್ಭದಲ್ಲಿ ಜಾಗೃತಿ ಮೂಡಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-16-614327933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೇಳೂರು: ಕಲ್ಯಾಣಿ ಸ್ವಚ್ಛತಾ ಅಭಿಯಾನದ ಅಂಗವಾಗಿ ತಾಲ್ಲೂಕಿನ ಚಾಕವೇಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಗವಪ್ಯಾಯಲವಾರಿಪಲ್ಲಿ ಗ್ರಾಮದ ಐತಿಹಾಸಿಕ ಕಲ್ಯಾಣಿಯನ್ನು ಶ್ರಮದಾನದ ಮೂಲಕ ಸೋಮವಾರ ಸ್ವಚ್ಛಗೊಳಿಸಲಾಯಿತು.</p>.<p>ಜಿಲ್ಲೆಯಾದ್ಯಂತ ಮಾರ್ಚ್ 23 ರಿಂದ ಏ.3ರವರೆಗೆ ಕಲ್ಯಾಣಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p>ದಿಗವಪ್ಯಾಯಲವಾರಿಪಲ್ಲಿಯ ಕಲ್ಯಾಣಿಯು ಶತಮಾನಗಳ ಇತಿಹಾಸ ಹೊಂದಿದೆ. ನಿರ್ವಹಣೆಯಿಲ್ಲದೆ ಗಿಡಗಂಟಿಗಳು ಹಾಗೂ ಹೂಳಿನಿಂದ ತುಂಬಿತ್ತು. ಸೋಮವಾರ ನಡೆದ ಶ್ರಮದಾನದಲ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p>ಬೆಳಿಗ್ಗೆಯಿಂದಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಕಲ್ಯಾಣಿಯ ಸುತ್ತಮುತ್ತ ಬೆಳೆದಿದ್ದ ಮುಳ್ಳಿನ ಪೊದೆಗಳನ್ನು ತೆರವುಗೊಳಿಸಿದರು. ಒಳಭಾಗದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಹೂಳನ್ನು ವಿಲೇವಾರಿ ಮಾಡಲಾಯಿತು.</p>.<p>ಪಂಚಾಯತಿ ಸಿಬ್ಬಂದಿಗಳ ಈ ಕಾರ್ಯವನ್ನು ಕಂಡ ಗ್ರಾಮಸ್ಥರು ಕೂಡ ಶ್ರಮದಾನದಲ್ಲಿ ಕೈಜೋಡಿಸಿದರು. ಕಲ್ಯಾಣಿಯನ್ನು ಸ್ವಚ್ಛಗೊಳಿಸುವುದಷ್ಟೇ ಅಲ್ಲದೆ, ಅದನ್ನು ಮುಂದಿನ ದಿನಗಳಲ್ಲಿ ಕಲುಷಿತಗೊಳಿಸದಂತೆ ಕಾಪಾಡಿಕೊಳ್ಳುವ ಸಂಕಲ್ಪವನ್ನು ಗ್ರಾಮಸ್ಥರು ಮಾಡಿದರು. ಪ್ಲಾಸ್ಟಿಕ್ ಮುಕ್ತ ಗ್ರಾಮ ಮತ್ತು ಜಲ ಸಂರಕ್ಷಣೆಯ ಬಗ್ಗೆ ಈ ಸಂದರ್ಭದಲ್ಲಿ ಜಾಗೃತಿ ಮೂಡಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-16-614327933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>