<p>ಚೇಳೂರು: ತಾಲ್ಲೂಕಿನ ಮೂಗಿರೆಡ್ಡಿಪಲ್ಲಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವಿನ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತಪಟ್ಟ ಯುವಕನನ್ನು ಆಂಧ್ರಪ್ರದೇಶದ ಪುಲಿಕಲ್ಲು ಗ್ರಾಮದ ಅಭಿಷೇಕ್ (23) ಎಂದು ಗುರುತಿಸಲಾಗಿದೆ. ಇವರು ತಮ್ಮ ಸಂಬಂಧಿ ಪ್ರವರ್ಧನ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಚೇಳೂರಿನಿಂದ ತಮ್ಮ ತಾಯಿಯ ತವರೂರು ರಾಮಾನುಪಡಿಗೆ ತೆರಳುತ್ತಿದ್ದರು. ಈ ವೇಳೆ ಮೂಗಿರೆಡ್ಡಿಪಲ್ಲಿ ಕ್ರಾಸ್ ಬಳಿ ಎದುರಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿವೆ.</p>.<p>ಅಪಘಾತದ ತೀವ್ರತೆಗೆ ಅಭಿಷೇಕ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಅಭಿಷೇಕ್ಗೆ ಮದುವೆಯಾಗಿ ಕೇವಲ ಒಂದು ತಿಂಗಳು ಕಳೆದಿತ್ತು. ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈ ಘಟನೆ ಬರಸಿಡಿಲಿನಂತೆ ಎರಗಿದ್ದು, ಮೃತರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.</p>.<p>ಅಪಘಾತದಲ್ಲಿ ಗಾಯಗೊಂಡಿರುವ ಹಿಂಬದಿ ಸವಾರ ಪ್ರವರ್ಧನ ಚೇಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-15-2036681374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೇಳೂರು: ತಾಲ್ಲೂಕಿನ ಮೂಗಿರೆಡ್ಡಿಪಲ್ಲಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವಿನ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತಪಟ್ಟ ಯುವಕನನ್ನು ಆಂಧ್ರಪ್ರದೇಶದ ಪುಲಿಕಲ್ಲು ಗ್ರಾಮದ ಅಭಿಷೇಕ್ (23) ಎಂದು ಗುರುತಿಸಲಾಗಿದೆ. ಇವರು ತಮ್ಮ ಸಂಬಂಧಿ ಪ್ರವರ್ಧನ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಚೇಳೂರಿನಿಂದ ತಮ್ಮ ತಾಯಿಯ ತವರೂರು ರಾಮಾನುಪಡಿಗೆ ತೆರಳುತ್ತಿದ್ದರು. ಈ ವೇಳೆ ಮೂಗಿರೆಡ್ಡಿಪಲ್ಲಿ ಕ್ರಾಸ್ ಬಳಿ ಎದುರಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿವೆ.</p>.<p>ಅಪಘಾತದ ತೀವ್ರತೆಗೆ ಅಭಿಷೇಕ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಅಭಿಷೇಕ್ಗೆ ಮದುವೆಯಾಗಿ ಕೇವಲ ಒಂದು ತಿಂಗಳು ಕಳೆದಿತ್ತು. ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈ ಘಟನೆ ಬರಸಿಡಿಲಿನಂತೆ ಎರಗಿದ್ದು, ಮೃತರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.</p>.<p>ಅಪಘಾತದಲ್ಲಿ ಗಾಯಗೊಂಡಿರುವ ಹಿಂಬದಿ ಸವಾರ ಪ್ರವರ್ಧನ ಚೇಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-15-2036681374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>