<p>ಚಿಕ್ಕಬಳ್ಳಾಪುರ: ಕೆ.ಸಿ ವ್ಯಾಲಿ, ಎಚ್.ಎನ್.ವ್ಯಾಲಿ ಮತ್ತು ವೃಷಭಾವತಿ ನೀರಾವರಿ ಯೋಜನೆಯ ಕುರಿತು ಕೆಲವು ಸಚಿವರು ಸಭೆ ನಡೆಸಿದ್ದಾರೆ. ಸಭೆಯಲ್ಲಿನ ಹೇಳಿಕೆಗಳು ಸಂಶಯ ಮತ್ತು ಅನುಮಾನಾಸ್ಪವಾಗಿವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ತಿಳಿಸಿದ್ದಾರೆ.</p>.<p>ವಿಜ್ಞಾನಿಗಳ ಸೋಗಿನಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಹೆಸರು ದುರ್ಬಳಕೆ ಮಾಡಿಕೊಂಡು ಸರ್ಕಾರಕ್ಕೆ ಬೇಕಾದ ರೀತಿಯಲ್ಲಿ ವರದಿ ಬರೆದುಕೊಡುತ್ತಿದ್ದಾರೆ. ಈ ವಿಚಾರವನ್ನು ಐಐಎಸ್ಸಿ ನಿರ್ದೇಶಕರ ಗಮನಕ್ಕೆ ತರುತ್ತೇವೆ. ಇದರಲ್ಲಿ ಸಂಸ್ಥೆಯ ಪಾತ್ರವೇನು ಎನ್ನುವುದನ್ನು ಜನರ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು.</p>.<p>ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಶಾಸಕರು ಮೂರು ಹಂತದಲ್ಲಿ ಶುದ್ಧೀಕರಿಸಿ ಕೊಳಚೆ ನೀರನ್ನು ತಮ್ಮ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ತುಂಬಿಸಬೇಕು ಎಂದು ಆಗ್ರಹಿಸಿದ್ದಾರೆ ಎಂದರು.</p>.<p>ವ್ಯಾಲಿ ನೀರು ಸುರಕ್ಷಿತವಾಗಿದೆ. ಆತಂಕಪಡುವ ಅಗತ್ಯವಿಲ್ಲ. ನೀರು ಸಮರ್ಪಕವಾಗಿ ಶುದ್ಧೀಕರಣವಾಗುತ್ತಿದೆ. ಮಣ್ಣು, ನೀರಿಗೆ ಹಾನಿಯಾಗಿಲ್ಲ. 1,500 ಅಡಿಗೆ ದೊರೆಯುತ್ತಿದ್ದ ನೀರು 50ರಿಂದ 100 ಅಡಿಗೆ ದೊರೆಯುತ್ತಿದೆ ಎಂದು ಸಚಿವರು ಆತ್ಮವಂಚನೆಯ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೇವಲ ಮೂರು ಸಚಿವರು ಈ ಬಗ್ಗೆ ತೀರ್ಮಾನ ಕೈಗೊಂಡು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಚಿವರಿಗೆ ಬದ್ಧತೆ ಇದ್ದರೆ ಮೂರು ಜಿಲ್ಲೆಯ ನೀರಾವರಿ ಹೋರಾಟಗಾರರು ಮತ್ತು ಶಾಸಕರನ್ನು ಪಕ್ಷಾತೀತವಾಗಿ ಕರೆದು ಸಭೆ ನಡೆಸಿ ಚರ್ಚಿಸಬೇಕು ಎಂದರು.</p>.<p>ಐಐಎಸ್ಸಿ ವಿಜ್ಞಾನಿಗಳು ಎಂದು ಕೆಲವರು ಸಂಸ್ಥೆ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗುತ್ತಿಗೆದಾರರು ಮತ್ತು ನೀರಾವರಿ ಇಲಾಖೆ ಏಜೆಂಟರ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಯೋಜನೆಯನ್ನು ರೂಪಿಸಿಕೊಟ್ಟು ಮತ್ತು ಗುಣಮಟ್ಟ ಪರಿಶೀಲನೆಗೂ ಮುನ್ನವೇ ಪ್ರಶಂಸೆ ಸಹ ವಿಜ್ಞಾನಿಗಳು ವ್ಯಕ್ತಪಡಿಸಿದ್ದರು ಎಂದು ತಿಳಿಸಿದರು.</p>.<p>ಯೋಜನೆಯ ಕುರಿತು ಐಐಎಸ್ಸಿ ವಿಜ್ಞಾನಿಗಳಿಗೆ ಇರುವ ಆಸಕ್ತಿಯ ಬಗ್ಗೆ ನಾವು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದೇವೆ. ಇವರ ಉಸ್ತುವಾರಿ ಮತ್ತು ಸಂಶೋಧನೆಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ಕಿಡಿಕಾರಿದರು.</p>.<p>ಸರ್ಕಾರಕ್ಕೆ ಬದ್ಧತೆ ಇದ್ದರೆ ಸಿಪಿಎಚ್ಒ ಮಾರ್ಗಸೂಚಿ ಅನ್ವಯ ಮೂರು ಹಂತದಲ್ಲಿ ನೀರು ಶುದ್ಧೀಕರಿಸಬೇಕಿತ್ತು. ರಾಷ್ಟ್ರೀಯ ಹಸಿರು ಪೀಠ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹ ಈ ಹಿಂದೆಯೇ ಮೂರು ಹಂತದಲ್ಲಿ ವ್ಯಾಲಿ ನೀರು ಶುದ್ಧೀಕರಣ ಆಗಬೇಕು ಎಂದಿವೆ.</p>.<p>ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಇತ್ತೀಚೆಗೆ ವರದಿಯೊಂದನ್ನು ಬಿಡುಗಡೆ ಮಾಡಿದೆ. ಆ ವರದಿಯಲ್ಲಿ ಕೆ.ಸಿ ವ್ಯಾಲಿ, ಎಚ್.ಎನ್.ವ್ಯಾಲಿ ನೀರು ಹರಿದ ಮಣ್ಣಿನಲ್ಲಿ, ತರಕಾರಿ ಮಾದರಿಯಲ್ಲಿ ಅನೇಕ ರೀತಿಯ ಭಾರಿ ಲೋಹ, ನೈಟ್ರೇಟ್, ಸೀಸದ ಅಂಶಗಳು ಬಂದಿವೆ ಎಂದಿದೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-16-1914737979</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಕೆ.ಸಿ ವ್ಯಾಲಿ, ಎಚ್.ಎನ್.ವ್ಯಾಲಿ ಮತ್ತು ವೃಷಭಾವತಿ ನೀರಾವರಿ ಯೋಜನೆಯ ಕುರಿತು ಕೆಲವು ಸಚಿವರು ಸಭೆ ನಡೆಸಿದ್ದಾರೆ. ಸಭೆಯಲ್ಲಿನ ಹೇಳಿಕೆಗಳು ಸಂಶಯ ಮತ್ತು ಅನುಮಾನಾಸ್ಪವಾಗಿವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ತಿಳಿಸಿದ್ದಾರೆ.</p>.<p>ವಿಜ್ಞಾನಿಗಳ ಸೋಗಿನಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಹೆಸರು ದುರ್ಬಳಕೆ ಮಾಡಿಕೊಂಡು ಸರ್ಕಾರಕ್ಕೆ ಬೇಕಾದ ರೀತಿಯಲ್ಲಿ ವರದಿ ಬರೆದುಕೊಡುತ್ತಿದ್ದಾರೆ. ಈ ವಿಚಾರವನ್ನು ಐಐಎಸ್ಸಿ ನಿರ್ದೇಶಕರ ಗಮನಕ್ಕೆ ತರುತ್ತೇವೆ. ಇದರಲ್ಲಿ ಸಂಸ್ಥೆಯ ಪಾತ್ರವೇನು ಎನ್ನುವುದನ್ನು ಜನರ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು.</p>.<p>ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಶಾಸಕರು ಮೂರು ಹಂತದಲ್ಲಿ ಶುದ್ಧೀಕರಿಸಿ ಕೊಳಚೆ ನೀರನ್ನು ತಮ್ಮ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ತುಂಬಿಸಬೇಕು ಎಂದು ಆಗ್ರಹಿಸಿದ್ದಾರೆ ಎಂದರು.</p>.<p>ವ್ಯಾಲಿ ನೀರು ಸುರಕ್ಷಿತವಾಗಿದೆ. ಆತಂಕಪಡುವ ಅಗತ್ಯವಿಲ್ಲ. ನೀರು ಸಮರ್ಪಕವಾಗಿ ಶುದ್ಧೀಕರಣವಾಗುತ್ತಿದೆ. ಮಣ್ಣು, ನೀರಿಗೆ ಹಾನಿಯಾಗಿಲ್ಲ. 1,500 ಅಡಿಗೆ ದೊರೆಯುತ್ತಿದ್ದ ನೀರು 50ರಿಂದ 100 ಅಡಿಗೆ ದೊರೆಯುತ್ತಿದೆ ಎಂದು ಸಚಿವರು ಆತ್ಮವಂಚನೆಯ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೇವಲ ಮೂರು ಸಚಿವರು ಈ ಬಗ್ಗೆ ತೀರ್ಮಾನ ಕೈಗೊಂಡು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಚಿವರಿಗೆ ಬದ್ಧತೆ ಇದ್ದರೆ ಮೂರು ಜಿಲ್ಲೆಯ ನೀರಾವರಿ ಹೋರಾಟಗಾರರು ಮತ್ತು ಶಾಸಕರನ್ನು ಪಕ್ಷಾತೀತವಾಗಿ ಕರೆದು ಸಭೆ ನಡೆಸಿ ಚರ್ಚಿಸಬೇಕು ಎಂದರು.</p>.<p>ಐಐಎಸ್ಸಿ ವಿಜ್ಞಾನಿಗಳು ಎಂದು ಕೆಲವರು ಸಂಸ್ಥೆ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗುತ್ತಿಗೆದಾರರು ಮತ್ತು ನೀರಾವರಿ ಇಲಾಖೆ ಏಜೆಂಟರ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಯೋಜನೆಯನ್ನು ರೂಪಿಸಿಕೊಟ್ಟು ಮತ್ತು ಗುಣಮಟ್ಟ ಪರಿಶೀಲನೆಗೂ ಮುನ್ನವೇ ಪ್ರಶಂಸೆ ಸಹ ವಿಜ್ಞಾನಿಗಳು ವ್ಯಕ್ತಪಡಿಸಿದ್ದರು ಎಂದು ತಿಳಿಸಿದರು.</p>.<p>ಯೋಜನೆಯ ಕುರಿತು ಐಐಎಸ್ಸಿ ವಿಜ್ಞಾನಿಗಳಿಗೆ ಇರುವ ಆಸಕ್ತಿಯ ಬಗ್ಗೆ ನಾವು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದೇವೆ. ಇವರ ಉಸ್ತುವಾರಿ ಮತ್ತು ಸಂಶೋಧನೆಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ಕಿಡಿಕಾರಿದರು.</p>.<p>ಸರ್ಕಾರಕ್ಕೆ ಬದ್ಧತೆ ಇದ್ದರೆ ಸಿಪಿಎಚ್ಒ ಮಾರ್ಗಸೂಚಿ ಅನ್ವಯ ಮೂರು ಹಂತದಲ್ಲಿ ನೀರು ಶುದ್ಧೀಕರಿಸಬೇಕಿತ್ತು. ರಾಷ್ಟ್ರೀಯ ಹಸಿರು ಪೀಠ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹ ಈ ಹಿಂದೆಯೇ ಮೂರು ಹಂತದಲ್ಲಿ ವ್ಯಾಲಿ ನೀರು ಶುದ್ಧೀಕರಣ ಆಗಬೇಕು ಎಂದಿವೆ.</p>.<p>ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಇತ್ತೀಚೆಗೆ ವರದಿಯೊಂದನ್ನು ಬಿಡುಗಡೆ ಮಾಡಿದೆ. ಆ ವರದಿಯಲ್ಲಿ ಕೆ.ಸಿ ವ್ಯಾಲಿ, ಎಚ್.ಎನ್.ವ್ಯಾಲಿ ನೀರು ಹರಿದ ಮಣ್ಣಿನಲ್ಲಿ, ತರಕಾರಿ ಮಾದರಿಯಲ್ಲಿ ಅನೇಕ ರೀತಿಯ ಭಾರಿ ಲೋಹ, ನೈಟ್ರೇಟ್, ಸೀಸದ ಅಂಶಗಳು ಬಂದಿವೆ ಎಂದಿದೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-16-1914737979</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>