<p><strong>ಗೂಳೂರು (ಬಾಗೇಪಲ್ಲಿ)</strong>: ತಾಲ್ಲೂಕಿನ ಗೂಳೂರು-ಬಿಳ್ಳೂರು ಮಾರ್ಗದ ಚಿನ್ನಕಾಯಲಪಲ್ಲಿ ಗ್ರಾಮದ ಕ್ರಾಸ್ನಲ್ಲಿ ಸೋಮವಾರ ಬೆಳಿಗ್ಗೆ ಬಿದ್ದ ಗುಡುಗು, ಮಿಂಚಿನ ಮಳೆಗೆ ಮರವೊಂದು ರಸ್ತೆ ಮೇಲೆ ಬಿದ್ದಿದೆ. ಇದರಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು.</p>.<p>ಪಟ್ಟಣ ಮತ್ತು ತಾಲ್ಲೂಕಿನಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನವರೆಗೆ ಮೋಡ ಕವಿದ ವಾತಾವರಣ ಇತ್ತು. ಸೋಮವಾರ ಬೆಳಗ್ಗೆ 6 ಗಂಟೆಯಿಂದ 8 ಗಂಟೆವರೆಗೆ ಭಾರಿ ಗುಡುಗು, ಮಳೆ ಬಿದ್ದಿದೆ. ಡಾ.ಎಚ್.ಎನ್.ವೃತ್ತ, ವಾಲ್ಮೀಕಿ, ಡಾ.ಬಿ.ಆರ್.ಅಂಬೇಡ್ಕರ್ ನಗರ ಮತ್ತು 9ನೇ ವಾರ್ಡ್ನ ರಸ್ತೆಗಳಲ್ಲಿ ಮಳೆಯ ಮತ್ತು ಚರಂಡಿ ನೀರು ಹರಿಯಿತು. ಇದರಿಂದ ರಸ್ತೆ ಕೆಸರುಮಯ ಆಗಿತ್ತು.</p>.<p>ಗೂಳೂರು ಹೋಬಳಿಯ ಚಿನ್ನಕಾಯಲಪಲ್ಲಿ ಗ್ರಾಮದ ರಸ್ತೆಗೆ ಮರ ಬಿದ್ದಿದೆ. ಆಟೊ, ಶಾಲಾ ವಾಹನ ಸೇರಿದಂತೆ ಬಸ್ ಸಂಚಾರಕ್ಕೆ ತೊಂದರೆ ಆಗಿದೆ.</p>.<p>ಚಿನ್ನಕಾಯಲಪಲ್ಲಿ ಗ್ರಾಮದ ಕೆ.ವಿ.ಪ್ರಶಾಂತ್ಕುಮಾರ್ ಮತ್ತು ರೈತರು ಆಗಮಿಸಿ ಯಂತ್ರದ ಮೂಲಕ ಮರದ ಕೊಂಬೆ ತೆರವುಗೊಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-16-88571452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೂಳೂರು (ಬಾಗೇಪಲ್ಲಿ)</strong>: ತಾಲ್ಲೂಕಿನ ಗೂಳೂರು-ಬಿಳ್ಳೂರು ಮಾರ್ಗದ ಚಿನ್ನಕಾಯಲಪಲ್ಲಿ ಗ್ರಾಮದ ಕ್ರಾಸ್ನಲ್ಲಿ ಸೋಮವಾರ ಬೆಳಿಗ್ಗೆ ಬಿದ್ದ ಗುಡುಗು, ಮಿಂಚಿನ ಮಳೆಗೆ ಮರವೊಂದು ರಸ್ತೆ ಮೇಲೆ ಬಿದ್ದಿದೆ. ಇದರಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು.</p>.<p>ಪಟ್ಟಣ ಮತ್ತು ತಾಲ್ಲೂಕಿನಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನವರೆಗೆ ಮೋಡ ಕವಿದ ವಾತಾವರಣ ಇತ್ತು. ಸೋಮವಾರ ಬೆಳಗ್ಗೆ 6 ಗಂಟೆಯಿಂದ 8 ಗಂಟೆವರೆಗೆ ಭಾರಿ ಗುಡುಗು, ಮಳೆ ಬಿದ್ದಿದೆ. ಡಾ.ಎಚ್.ಎನ್.ವೃತ್ತ, ವಾಲ್ಮೀಕಿ, ಡಾ.ಬಿ.ಆರ್.ಅಂಬೇಡ್ಕರ್ ನಗರ ಮತ್ತು 9ನೇ ವಾರ್ಡ್ನ ರಸ್ತೆಗಳಲ್ಲಿ ಮಳೆಯ ಮತ್ತು ಚರಂಡಿ ನೀರು ಹರಿಯಿತು. ಇದರಿಂದ ರಸ್ತೆ ಕೆಸರುಮಯ ಆಗಿತ್ತು.</p>.<p>ಗೂಳೂರು ಹೋಬಳಿಯ ಚಿನ್ನಕಾಯಲಪಲ್ಲಿ ಗ್ರಾಮದ ರಸ್ತೆಗೆ ಮರ ಬಿದ್ದಿದೆ. ಆಟೊ, ಶಾಲಾ ವಾಹನ ಸೇರಿದಂತೆ ಬಸ್ ಸಂಚಾರಕ್ಕೆ ತೊಂದರೆ ಆಗಿದೆ.</p>.<p>ಚಿನ್ನಕಾಯಲಪಲ್ಲಿ ಗ್ರಾಮದ ಕೆ.ವಿ.ಪ್ರಶಾಂತ್ಕುಮಾರ್ ಮತ್ತು ರೈತರು ಆಗಮಿಸಿ ಯಂತ್ರದ ಮೂಲಕ ಮರದ ಕೊಂಬೆ ತೆರವುಗೊಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-16-88571452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>