<p><strong>ಚಿಂತಾಮಣಿ:</strong> ತಾಲ್ಲೂಕಿನ ಯಾತ್ರಾಸ್ಥಳವಾದ ಕೈವಾರದಲ್ಲಿ ತ್ರಿಕಾಲಜ್ಞಾನಿ, ಸಂತ ಯೋಗಿ ನಾರೇಯಣ ತಾತಯ್ಯ ಅವರ 191ನೇ ಜೀವ ಸಮಾಧಿ ಪ್ರವೇಶ ಪರ್ವ ಆರಾಧನಾ ಮಹೋತ್ಸವವನ್ನು ಜೂನ್ 17ರಂದು ಆಚರಿಸಲಾಗುವುದು ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್. ಜಯರಾಂ ತಿಳಿಸಿದರು.</p>.<p>ಕೈವಾರದ ಯೋಗಿನಾರೇಯಣ ಮಠದ ಸದ್ಗುರು ಕೈವಾರ ತಾತಯ್ಯ ಸನ್ನಿಧಾನದಲ್ಲಿ ಶನಿವಾರ ಆರಾಧನಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು.</p>.<p>ಆರಾಧನೆ ಪರ್ವ ಮಹೋತ್ಸವದ ಪ್ರಾತಃಕಾಲ ಘಂಟಾನಾದ, ಸುಪ್ರಭಾತ, ಗೋಪೂಜೆಯೊಂದಿಗೆ ಪೂಜಾ ಕೈಂಕರ್ಯಗಳು ಆರಂಭವಾಗಲಿವೆ. ಬೆಳಗ್ಗೆ 8 ಗಂಟೆಗೆ ಸದ್ಗುರು ತಾತಯ್ಯನವರನ್ನು ಅಲಂಕೃತ ಪಲ್ಲಕ್ಕಿಯಲ್ಲಿ ಸಭಾಂಗಣಕ್ಕೆ ಕರೆತರಲಾಗುವುದು. ತಾತಯ್ಯಗೆ ವಿಶೇಷ ಅಭಿಷೇಕ, ಅಷ್ಟವಧಾನ ಸೇವೆ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>ಯೋಗಿನಾರೇಯಣ ಮಠದ ಟ್ರಸ್ಟ್ ಉಪಾಧ್ಯಕ್ಷ ಜೆ.ವಿಭಾಕರರೆಡ್ಡಿ, ಖಜಾಂಚಿ ಆರ್.ಪಿ.ಎಂ. ಸತ್ಯನಾರಾಯಣ, ವಾನರಾಶಿ ಬಾಲಕೃಷ್ಣ ಭಾಗವತರ್, ಕೆ.ನರಸಿಂಹಪ್ಪ, ಕೆ.ಲಕ್ಷ್ಮಿನಾರಾಯಣ್, ಟಿ.ಎಲ್.ಆನಂದ್, ವೆಂಕಟರಮಣಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-16-1124639204</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಯಾತ್ರಾಸ್ಥಳವಾದ ಕೈವಾರದಲ್ಲಿ ತ್ರಿಕಾಲಜ್ಞಾನಿ, ಸಂತ ಯೋಗಿ ನಾರೇಯಣ ತಾತಯ್ಯ ಅವರ 191ನೇ ಜೀವ ಸಮಾಧಿ ಪ್ರವೇಶ ಪರ್ವ ಆರಾಧನಾ ಮಹೋತ್ಸವವನ್ನು ಜೂನ್ 17ರಂದು ಆಚರಿಸಲಾಗುವುದು ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್. ಜಯರಾಂ ತಿಳಿಸಿದರು.</p>.<p>ಕೈವಾರದ ಯೋಗಿನಾರೇಯಣ ಮಠದ ಸದ್ಗುರು ಕೈವಾರ ತಾತಯ್ಯ ಸನ್ನಿಧಾನದಲ್ಲಿ ಶನಿವಾರ ಆರಾಧನಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು.</p>.<p>ಆರಾಧನೆ ಪರ್ವ ಮಹೋತ್ಸವದ ಪ್ರಾತಃಕಾಲ ಘಂಟಾನಾದ, ಸುಪ್ರಭಾತ, ಗೋಪೂಜೆಯೊಂದಿಗೆ ಪೂಜಾ ಕೈಂಕರ್ಯಗಳು ಆರಂಭವಾಗಲಿವೆ. ಬೆಳಗ್ಗೆ 8 ಗಂಟೆಗೆ ಸದ್ಗುರು ತಾತಯ್ಯನವರನ್ನು ಅಲಂಕೃತ ಪಲ್ಲಕ್ಕಿಯಲ್ಲಿ ಸಭಾಂಗಣಕ್ಕೆ ಕರೆತರಲಾಗುವುದು. ತಾತಯ್ಯಗೆ ವಿಶೇಷ ಅಭಿಷೇಕ, ಅಷ್ಟವಧಾನ ಸೇವೆ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>ಯೋಗಿನಾರೇಯಣ ಮಠದ ಟ್ರಸ್ಟ್ ಉಪಾಧ್ಯಕ್ಷ ಜೆ.ವಿಭಾಕರರೆಡ್ಡಿ, ಖಜಾಂಚಿ ಆರ್.ಪಿ.ಎಂ. ಸತ್ಯನಾರಾಯಣ, ವಾನರಾಶಿ ಬಾಲಕೃಷ್ಣ ಭಾಗವತರ್, ಕೆ.ನರಸಿಂಹಪ್ಪ, ಕೆ.ಲಕ್ಷ್ಮಿನಾರಾಯಣ್, ಟಿ.ಎಲ್.ಆನಂದ್, ವೆಂಕಟರಮಣಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-16-1124639204</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>