<p>ಶಿಡ್ಲಘಟ್ಟ: ತಾಲ್ಲೂಕಿನ ಕುಂಬಿಗಾನಹಳ್ಳಿ (ಎಚ್.ಕ್ರಾಸ್) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಆಗಿ ಕಾಳನಾಯಕನಹಳ್ಳಿಯ ಕೆ.ಎಂ.ಭಿಮೇಶ್ ಹಾಗೂ ಉಪಾಧ್ಯಕ್ಷ ಆಗಿ ಟಿ.ಬುಸನಹಳ್ಳಿಯ ಸೋಮೇಶ್ ಅವಿರೋಧವಾಗಿ ಆಯ್ಕೆಯಾದರು.</p>.<p>ಚೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಬೇರ್ಪಟ್ಟು ಪ್ರತ್ಯೇಕವಾಗಿ ಅಸ್ತಿತ್ವಕ್ಕೆ ಬಂದ ಕುಂಬಿಗಾನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಪದಾಧಿಕಾರಿಗಳ ಸ್ಥಾನಕ್ಕೆ ಸಹಕಾರ ಸಂಘದ ಕಚೇರಿಯಲ್ಲಿ ಬುಧವಾರ ಚುನಾವಣೆ ನಡೆಯಿತು.</p>.<p>ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ.ಭಿಮೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮೇಶ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಿಸಿದರು.</p>.<p>ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು, ಅವರ ಬೆಂಬಲಿಗರು ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-16-1810686221</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ತಾಲ್ಲೂಕಿನ ಕುಂಬಿಗಾನಹಳ್ಳಿ (ಎಚ್.ಕ್ರಾಸ್) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಆಗಿ ಕಾಳನಾಯಕನಹಳ್ಳಿಯ ಕೆ.ಎಂ.ಭಿಮೇಶ್ ಹಾಗೂ ಉಪಾಧ್ಯಕ್ಷ ಆಗಿ ಟಿ.ಬುಸನಹಳ್ಳಿಯ ಸೋಮೇಶ್ ಅವಿರೋಧವಾಗಿ ಆಯ್ಕೆಯಾದರು.</p>.<p>ಚೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಬೇರ್ಪಟ್ಟು ಪ್ರತ್ಯೇಕವಾಗಿ ಅಸ್ತಿತ್ವಕ್ಕೆ ಬಂದ ಕುಂಬಿಗಾನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಪದಾಧಿಕಾರಿಗಳ ಸ್ಥಾನಕ್ಕೆ ಸಹಕಾರ ಸಂಘದ ಕಚೇರಿಯಲ್ಲಿ ಬುಧವಾರ ಚುನಾವಣೆ ನಡೆಯಿತು.</p>.<p>ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ.ಭಿಮೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮೇಶ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಿಸಿದರು.</p>.<p>ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು, ಅವರ ಬೆಂಬಲಿಗರು ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-16-1810686221</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>