<p><strong>ಚಿಂತಾಮಣಿ</strong>: ತಾಲ್ಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿಯ ಕೈಗಾರಿಕಾ ಪ್ರಾಂಗಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಭೇಟಿ ನೀಡಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲ ಸೌಲಭ್ಯಗಳ ಪರಿಶೀಲನೆ ನಡೆಸಿದರು.</p>.<p>ಈಗಾಗಲೇ ಆರಂಭವಾದ ಕೈಗಾರಿಕಾ ಸ್ಥಳಗಳಿಗೆ ಭೇಟಿ ನೀಡಿ ಮಾಲೀಕರೊಂದಿಗೆ ಮಾತುಕತೆ ನಡೆಸಿ, ಅವರ ಅಹವಾಲುಗಳನ್ನು ಆಲಿಸಿದರು. ಅಧಿಕಾರಿಗಳೊಂದಿಗೂ ಚರ್ಚೆ ನಡೆಸಿ ಅಗತ್ಯ ಸೌಲಭ್ಯ ಒದಗಿಸಿಕೊಡುವಂತೆ ಸೂಚಿಸಿದರು.</p>.<p>ಕ್ಷೇತ್ರದ ಯುವಜನರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಬೇಕು ಮತ್ತು ಆರ್ಥಿಕವಾಗಿ ಬಲತುಂಬಬೇಕು ಎನ್ನುವ ನಿಟ್ಟಿನಲ್ಲಿ ಕೈಗಾರಿಕಾ ಪ್ರಾಂಗಣ ಸ್ಥಾಪಿಸಲಾಗಿದೆ. ರೈತರಿಂದ ಪಡೆದ ಜಮೀನುಗಳನ್ನು ಖಾಲಿ ಬಿಡುವುದು ಒಳ್ಳೆಯದಲ್ಲ. ಕೈಗಾರಿಕೆಗಳನ್ನು ಸ್ಥಾಪಿಸಲು ಜಮೀನು ಪಡೆದುಕೊಂಡವರು ಆದಷ್ಟು ಬೇಗ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದು ಹೇಳಿದರು.</p>.<p>ಕೈಗಾರಿಕೆಗಳ ಉತ್ಪಾದನೆ, ತಂತ್ರಜ್ಞಾನ, ಮಾರುಕಟ್ಟೆ ವ್ಯವಸ್ಥೆ, ಕಾರ್ಮಿಕರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಕಾರ್ಖಾನೆಗಳ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಿದರು.</p>.<p>ಕೈಗಾರಿಕಾ ಪ್ರದೇಶಕ್ಕೆ ಅಗತ್ಯವಿರುವ ಹೆಚ್ಚುವರಿ ರಸ್ತೆ ಸಂಪರ್ಕ, ನಿರಂತರ ವಿದ್ಯುತ್ ಸರಬರಾಜು, ನೀರಾವರಿ ಸೌಲಭ್ಯಗಳ ಸುಧಾರಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.</p>.<p>ವಿವಿಧ ಇಲಾಖೆಗಳ ಅಧಿಕಾರಿಗಳು, ಆ ಪ್ರದೇಶದ ಮುಖಂಡರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-16-941207112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿಯ ಕೈಗಾರಿಕಾ ಪ್ರಾಂಗಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಭೇಟಿ ನೀಡಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲ ಸೌಲಭ್ಯಗಳ ಪರಿಶೀಲನೆ ನಡೆಸಿದರು.</p>.<p>ಈಗಾಗಲೇ ಆರಂಭವಾದ ಕೈಗಾರಿಕಾ ಸ್ಥಳಗಳಿಗೆ ಭೇಟಿ ನೀಡಿ ಮಾಲೀಕರೊಂದಿಗೆ ಮಾತುಕತೆ ನಡೆಸಿ, ಅವರ ಅಹವಾಲುಗಳನ್ನು ಆಲಿಸಿದರು. ಅಧಿಕಾರಿಗಳೊಂದಿಗೂ ಚರ್ಚೆ ನಡೆಸಿ ಅಗತ್ಯ ಸೌಲಭ್ಯ ಒದಗಿಸಿಕೊಡುವಂತೆ ಸೂಚಿಸಿದರು.</p>.<p>ಕ್ಷೇತ್ರದ ಯುವಜನರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಬೇಕು ಮತ್ತು ಆರ್ಥಿಕವಾಗಿ ಬಲತುಂಬಬೇಕು ಎನ್ನುವ ನಿಟ್ಟಿನಲ್ಲಿ ಕೈಗಾರಿಕಾ ಪ್ರಾಂಗಣ ಸ್ಥಾಪಿಸಲಾಗಿದೆ. ರೈತರಿಂದ ಪಡೆದ ಜಮೀನುಗಳನ್ನು ಖಾಲಿ ಬಿಡುವುದು ಒಳ್ಳೆಯದಲ್ಲ. ಕೈಗಾರಿಕೆಗಳನ್ನು ಸ್ಥಾಪಿಸಲು ಜಮೀನು ಪಡೆದುಕೊಂಡವರು ಆದಷ್ಟು ಬೇಗ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದು ಹೇಳಿದರು.</p>.<p>ಕೈಗಾರಿಕೆಗಳ ಉತ್ಪಾದನೆ, ತಂತ್ರಜ್ಞಾನ, ಮಾರುಕಟ್ಟೆ ವ್ಯವಸ್ಥೆ, ಕಾರ್ಮಿಕರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಕಾರ್ಖಾನೆಗಳ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಿದರು.</p>.<p>ಕೈಗಾರಿಕಾ ಪ್ರದೇಶಕ್ಕೆ ಅಗತ್ಯವಿರುವ ಹೆಚ್ಚುವರಿ ರಸ್ತೆ ಸಂಪರ್ಕ, ನಿರಂತರ ವಿದ್ಯುತ್ ಸರಬರಾಜು, ನೀರಾವರಿ ಸೌಲಭ್ಯಗಳ ಸುಧಾರಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.</p>.<p>ವಿವಿಧ ಇಲಾಖೆಗಳ ಅಧಿಕಾರಿಗಳು, ಆ ಪ್ರದೇಶದ ಮುಖಂಡರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-16-941207112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>