<p>ಶಿಡ್ಲಘಟ್ಟ: ನಗರದಲ್ಲಿ ಜೂನ್ 7ರಂದು ಶ್ರೀರಾಮ ಶೋಭಾಯಾತ್ರೆ ನಡೆಯಲಿದೆ ಎಂದು ಶೋಭಾಯಾತ್ರೆ ಆಚರಣಾ ಟ್ರಸ್ಟ್ನ ಅಧ್ಯಕ್ಷ ಬಿ.ವೆಂಕಟೇಶ್ ಹೇಳಿದರು.</p>.<p>ನಗರದ ಕೋಟೆ ವೃತ್ತದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಬುಧವಾರ ಶೋಭಾಯಾತ್ರೆಯ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.</p>.<p>ನಗರದ ಹೊರವಲಯದ ದಿಬ್ಬೂರಹಳ್ಳಿ ರಸ್ತೆಯಲ್ಲಿ ಹನುಮಂತಪುರ ಗೇಟ್ ಬಳಿ ಇರುವ ಆಂಜನೇಯ ದೇವಾಲಯದ ಆವರಣದಿಂದ ಜೂನ್ 7ರಂದು ಬೆಳಗ್ಗೆ 11 ಗಂಟೆಗೆ ಶೋಭಾಯಾತ್ರೆ ಪ್ರಾರಂಭವಾಗಲಿದೆ ಎಂದರು.</p>.<p>ಶಿಡ್ಲಘಟ್ಟ ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ಸಂಚರಿಸಲಿದೆ. ಜನಪದ ಕಲಾ ತಂಡಗಳು ಇರಲಿವೆ. 12 ಅಡಿ ಎತ್ತರ ಕೋದಂಡರಾಮ ಮೂರ್ತಿ, 6 ಅಡಿ ಎತ್ತರದ ಬಾಲರಾಮನ ವಿಗ್ರಹ, ಕುರುಕ್ಷೇತ್ರ ರಥ ಹನುಮ ವೇಷಧಾರಿಗಳು, ಕೇರಳದ ಚೆಂಡೆ ವಾದ್ಯ ಇರಲಿದೆ ಎಂದರು.</p>.<p>ಮೆರವಣಿಗೆ ನಂತರ ಬಸ್ ನಿಲ್ದಾಣದ ಬಳಿ ವೇದಿಕೆ ಕಾರ್ಯಕ್ರಮವಿರುತ್ತದೆ. ಹಳ್ಳಿಗಳಿಂದ ಸ್ವಯಂಪ್ರೇರಿತರಾಗಿ ಪಲ್ಲಕ್ಕಿಗಳನ್ನು ತಂದು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್ನ ಗೌರವಾಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಮಂಜುನಾಥ್, ಅನಿಲ್ಕುಮಾರ್.ಜಿ.ಕೆ, ಭರತ್, ರವಿಚಂದ್ರ, ನಾಗೇಶ್, ಲಕ್ಷ್ಮಿಪತಿ, ಕಿರಣ್, ರಾಮಾಂಜಿನೇಯ, ರವೀಂದ್ರನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-16-1198027804</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ನಗರದಲ್ಲಿ ಜೂನ್ 7ರಂದು ಶ್ರೀರಾಮ ಶೋಭಾಯಾತ್ರೆ ನಡೆಯಲಿದೆ ಎಂದು ಶೋಭಾಯಾತ್ರೆ ಆಚರಣಾ ಟ್ರಸ್ಟ್ನ ಅಧ್ಯಕ್ಷ ಬಿ.ವೆಂಕಟೇಶ್ ಹೇಳಿದರು.</p>.<p>ನಗರದ ಕೋಟೆ ವೃತ್ತದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಬುಧವಾರ ಶೋಭಾಯಾತ್ರೆಯ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.</p>.<p>ನಗರದ ಹೊರವಲಯದ ದಿಬ್ಬೂರಹಳ್ಳಿ ರಸ್ತೆಯಲ್ಲಿ ಹನುಮಂತಪುರ ಗೇಟ್ ಬಳಿ ಇರುವ ಆಂಜನೇಯ ದೇವಾಲಯದ ಆವರಣದಿಂದ ಜೂನ್ 7ರಂದು ಬೆಳಗ್ಗೆ 11 ಗಂಟೆಗೆ ಶೋಭಾಯಾತ್ರೆ ಪ್ರಾರಂಭವಾಗಲಿದೆ ಎಂದರು.</p>.<p>ಶಿಡ್ಲಘಟ್ಟ ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ಸಂಚರಿಸಲಿದೆ. ಜನಪದ ಕಲಾ ತಂಡಗಳು ಇರಲಿವೆ. 12 ಅಡಿ ಎತ್ತರ ಕೋದಂಡರಾಮ ಮೂರ್ತಿ, 6 ಅಡಿ ಎತ್ತರದ ಬಾಲರಾಮನ ವಿಗ್ರಹ, ಕುರುಕ್ಷೇತ್ರ ರಥ ಹನುಮ ವೇಷಧಾರಿಗಳು, ಕೇರಳದ ಚೆಂಡೆ ವಾದ್ಯ ಇರಲಿದೆ ಎಂದರು.</p>.<p>ಮೆರವಣಿಗೆ ನಂತರ ಬಸ್ ನಿಲ್ದಾಣದ ಬಳಿ ವೇದಿಕೆ ಕಾರ್ಯಕ್ರಮವಿರುತ್ತದೆ. ಹಳ್ಳಿಗಳಿಂದ ಸ್ವಯಂಪ್ರೇರಿತರಾಗಿ ಪಲ್ಲಕ್ಕಿಗಳನ್ನು ತಂದು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್ನ ಗೌರವಾಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಮಂಜುನಾಥ್, ಅನಿಲ್ಕುಮಾರ್.ಜಿ.ಕೆ, ಭರತ್, ರವಿಚಂದ್ರ, ನಾಗೇಶ್, ಲಕ್ಷ್ಮಿಪತಿ, ಕಿರಣ್, ರಾಮಾಂಜಿನೇಯ, ರವೀಂದ್ರನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-16-1198027804</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>