<p>ಶಿಡ್ಲಘಟ್ಟ: ತಾಲ್ಲೂಕಿನ ಪ್ರಸಿದ್ಧ ಸುಗಟೂರು ಕಲ್ಲೇಶ್ವರ, ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವವು ಇದೇ 25ರಿಂದ 28ರವರೆಗೆ ಅದ್ದೂರಿಯಾಗಿ ನಡೆಯಲಿದೆ.</p>.<p>ಏಪ್ರಿಲ್ 25ರಂದು ಕೂಟ, 26ರಂದು ಹೊಳೆ ಪರಿಷೆ ನಡೆಯಲಿದೆ. ಈ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂತ್ರಿಗಳು, ಶಾಸಕರು, ಗಣ್ಯರು ಭಾಗವಹಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಏಪ್ರಿಲ್ 27 ರಂದು ಹೊಳೆಪರಿಷೆ ಮುಂದುವರಿಯಲಿದ್ದು, ಸಂಜೆ ದೀಪಾರಾಧನೆ ನಡೆಯಲಿದೆ.</p>.<p>ಏಪ್ರಿಲ್ 28ರಂದು ಮಕ್ಕಳ ಚೌಲೋಪನ ಯನ, ದೇವರ ದರ್ಶನ, ಗುರುಗಳ ಆಶೀರ್ವಾದದ ನಂತರ ಭಕ್ತರು ಸ್ವಸ್ಥಾನಗಳಿಗೆ ತೆರಳುವ ಕಾರ್ಯಕ್ರಮಗಳು ನಡೆಯಲಿವೆ.</p>.<p>ಜಾತ್ರೆಗೆ ರಾಜ್ಯ ಮತ್ತು ಸುತ್ತಮುತ್ತಲಿನ ರಾಜ್ಯದ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಲಿದ್ದಾರೆ. ಈಗಾಗಲೇ ದೇವಾಲಯ ಟ್ರಸ್ಟ್ ಅಧ್ಯಕ್ಷರೂ ಆದ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್, ಶಾಸಕ ರವಿಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-16-1667496668</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ತಾಲ್ಲೂಕಿನ ಪ್ರಸಿದ್ಧ ಸುಗಟೂರು ಕಲ್ಲೇಶ್ವರ, ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವವು ಇದೇ 25ರಿಂದ 28ರವರೆಗೆ ಅದ್ದೂರಿಯಾಗಿ ನಡೆಯಲಿದೆ.</p>.<p>ಏಪ್ರಿಲ್ 25ರಂದು ಕೂಟ, 26ರಂದು ಹೊಳೆ ಪರಿಷೆ ನಡೆಯಲಿದೆ. ಈ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂತ್ರಿಗಳು, ಶಾಸಕರು, ಗಣ್ಯರು ಭಾಗವಹಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಏಪ್ರಿಲ್ 27 ರಂದು ಹೊಳೆಪರಿಷೆ ಮುಂದುವರಿಯಲಿದ್ದು, ಸಂಜೆ ದೀಪಾರಾಧನೆ ನಡೆಯಲಿದೆ.</p>.<p>ಏಪ್ರಿಲ್ 28ರಂದು ಮಕ್ಕಳ ಚೌಲೋಪನ ಯನ, ದೇವರ ದರ್ಶನ, ಗುರುಗಳ ಆಶೀರ್ವಾದದ ನಂತರ ಭಕ್ತರು ಸ್ವಸ್ಥಾನಗಳಿಗೆ ತೆರಳುವ ಕಾರ್ಯಕ್ರಮಗಳು ನಡೆಯಲಿವೆ.</p>.<p>ಜಾತ್ರೆಗೆ ರಾಜ್ಯ ಮತ್ತು ಸುತ್ತಮುತ್ತಲಿನ ರಾಜ್ಯದ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಲಿದ್ದಾರೆ. ಈಗಾಗಲೇ ದೇವಾಲಯ ಟ್ರಸ್ಟ್ ಅಧ್ಯಕ್ಷರೂ ಆದ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್, ಶಾಸಕ ರವಿಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-16-1667496668</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>