<p>ಗೌರಿಬಿದನೂರು: ಬದುಕಿದ ಗಂಡ ಸತ್ತಿದ್ದಾನೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಗಂಡನ ಸಂಬಂಧಿಕರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p>ತಾಲ್ಲೂಕಿನ ಸಾಗಾನಹಳ್ಳಿಯ ಅನುಜಾ ಮತ್ತು ಕುಮಾರ್ ಅವರು 9 ವರ್ಷದ ಹಿಂದೆ ಮದುವೆಯಾಗಿದ್ದು, ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಸದ್ಯ ಈ ದಂಪತಿ ದೇವನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದಿಂದಾಗಿ ಅನುಜಾ ಇದ್ದಕ್ಕಿದ್ದಂತೆ ಗಂಡನನ್ನು ತೊರೆದು ಹುಟ್ಟೂರು ಗೌರಿಬಿದನೂರಿಗೆ ಬಂದಿದ್ದಾರೆ.</p>.<p>‘ವಾಪಸ್ ಬರುವಂತೆ ಕುಮಾರ್ ಅವರು ಅನುಜಾ ಅವರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ನಿನ್ನ ಸಹವಾಸವೇ ಬೇಡ. ನನ್ನ ಗಂಡ ಸತ್ತಿದ್ದಾನೆ (RIP) ಎಂಬುದಾಗಿ ತಮ್ಮ ಫೇಸ್ಬುಕ್ನಲ್ಲಿ ಹಾಕಿಕೊಂಡಿದ್ದಾರೆ. ಇದರಿಂದ ಕೋಪಗೊಂಡ ಕುಮಾರ್ ಅವರ ಸಹೋದರ ಭಾಸ್ಕರ್ ಸಂಬಂಧಿಕರೊಂದಿಗೆ ಗೌರಿಬಿದನೂರಿಗೆ ಬಂದು ಈ ಕುರಿತು ಅನುಜಾ ಕುಟುಂಬಸ್ಥರಿಗೆ ಪ್ರಶ್ನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಅನುಜಾ ಅವರ ಅಣ್ಣ– ತಮ್ಮಂದಿರು, ಸಂಬಂಧಿಕರು ಕುಮಾರ್ ಕಡೆಯವರ ಮೇಲೆ ಖಾರದ ಪುಡಿ ಎರಚಿ, ಕಬ್ಬಿಣದ ಸಲಾಕೆ, ದೊಣ್ಣೆ, ಕಲ್ಲುಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ’ ಎಂದು ಕುಮಾರ್ ತಂದೆ ವೆಂಕಟರಮಣಪ್ಪ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-16-1350062556</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ಬದುಕಿದ ಗಂಡ ಸತ್ತಿದ್ದಾನೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಗಂಡನ ಸಂಬಂಧಿಕರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p>ತಾಲ್ಲೂಕಿನ ಸಾಗಾನಹಳ್ಳಿಯ ಅನುಜಾ ಮತ್ತು ಕುಮಾರ್ ಅವರು 9 ವರ್ಷದ ಹಿಂದೆ ಮದುವೆಯಾಗಿದ್ದು, ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಸದ್ಯ ಈ ದಂಪತಿ ದೇವನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದಿಂದಾಗಿ ಅನುಜಾ ಇದ್ದಕ್ಕಿದ್ದಂತೆ ಗಂಡನನ್ನು ತೊರೆದು ಹುಟ್ಟೂರು ಗೌರಿಬಿದನೂರಿಗೆ ಬಂದಿದ್ದಾರೆ.</p>.<p>‘ವಾಪಸ್ ಬರುವಂತೆ ಕುಮಾರ್ ಅವರು ಅನುಜಾ ಅವರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ನಿನ್ನ ಸಹವಾಸವೇ ಬೇಡ. ನನ್ನ ಗಂಡ ಸತ್ತಿದ್ದಾನೆ (RIP) ಎಂಬುದಾಗಿ ತಮ್ಮ ಫೇಸ್ಬುಕ್ನಲ್ಲಿ ಹಾಕಿಕೊಂಡಿದ್ದಾರೆ. ಇದರಿಂದ ಕೋಪಗೊಂಡ ಕುಮಾರ್ ಅವರ ಸಹೋದರ ಭಾಸ್ಕರ್ ಸಂಬಂಧಿಕರೊಂದಿಗೆ ಗೌರಿಬಿದನೂರಿಗೆ ಬಂದು ಈ ಕುರಿತು ಅನುಜಾ ಕುಟುಂಬಸ್ಥರಿಗೆ ಪ್ರಶ್ನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಅನುಜಾ ಅವರ ಅಣ್ಣ– ತಮ್ಮಂದಿರು, ಸಂಬಂಧಿಕರು ಕುಮಾರ್ ಕಡೆಯವರ ಮೇಲೆ ಖಾರದ ಪುಡಿ ಎರಚಿ, ಕಬ್ಬಿಣದ ಸಲಾಕೆ, ದೊಣ್ಣೆ, ಕಲ್ಲುಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ’ ಎಂದು ಕುಮಾರ್ ತಂದೆ ವೆಂಕಟರಮಣಪ್ಪ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-16-1350062556</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>