<p><strong>ಚಿಕ್ಕಬಳ್ಳಾಪುರ: </strong>ಜಿಲ್ಲಾ ಕೇಂದ್ರವಾದ ನಗರದಲ್ಲಿ ಬುಧವಾರ ಒಂದೇ ದಿನ 15 ಮಂದಿಗೆ ಕೋವಿಡ್ ತಗುಲಿರುವುದು ಸ್ಥಳೀಯರ ನಾಗರಿಕರಲ್ಲಿ ಭೀತಿ ಹುಟ್ಟಿಸಿದೆ. ಇನ್ನೊಂದೆಡೆ, ಚಿಂತಾಮಣಿ ತಾಲ್ಲೂಕಿನಲ್ಲಿ ಸೋಂಕಿತ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ.</p>.<p>ಬುಧವಾರ ವರದಿಯಾದ ಪ್ರಕರಣಗಳಲ್ಲಿ ಬಹುಪಾಲು ಜನರು 8ನೇ ವಾರ್ಡ್ನ20 ವರ್ಷದ ಸೋಂಕಿತ ಯುವಕ ಸಂಪರ್ಕಕ್ಕೆ ಬಂದವರಾಗಿದ್ದಾರೆ. ಸೋಂಕಿತನ ತಂದೆ, ಅವರಿಂದ ಸೊಸೆ, ಮೊಮ್ಮಗ, ನೆಂಟರು ಹೀಗೆ ಹಲವಾರು ಜನರಿಗೆ ಸೋಂಕು ತಗುಲಿದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p>.<p>ಸೋಂಕಿತರ ಮನೆ ಪ್ರದೇಶಗಳನ್ನು ಸೀಲ್ ಡೌನ್ ಮಾಡಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ವೈರಸ್ ನಾಶಕ ದ್ರಾವಣದಿಂದ ಶುಚಿಗೊಳಿಸುವುದು, ಸೋಂಕಿತರ ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆ ಹಾಕುವ ಕೆಲಸದಲ್ಲಿ ತೊಡಗಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 229 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 53, ಬಾಗೇಪಲ್ಲಿ 53, ಚಿಂತಾಮಣಿ 16, ಗೌರಿಬಿದನೂರು 96, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 11 ಜನರಿಗೆ ಕೋವಿಡ್ ಸೋಂಕಿದೆ.</p>.<p>ಸೋಂಕಿತರ ಪೈಕಿ ಮೂರು ಮಂದಿ ಕೋವಿಡ್ನಿಂದ, ಇಬ್ಬರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ಧಾರೆ. ಚಿಕಿತ್ಸೆಯಿಂದ 169 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ವಾರ್ಡ್ನಲ್ಲಿ 53 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಜಿಲ್ಲಾ ಕೇಂದ್ರವಾದ ನಗರದಲ್ಲಿ ಬುಧವಾರ ಒಂದೇ ದಿನ 15 ಮಂದಿಗೆ ಕೋವಿಡ್ ತಗುಲಿರುವುದು ಸ್ಥಳೀಯರ ನಾಗರಿಕರಲ್ಲಿ ಭೀತಿ ಹುಟ್ಟಿಸಿದೆ. ಇನ್ನೊಂದೆಡೆ, ಚಿಂತಾಮಣಿ ತಾಲ್ಲೂಕಿನಲ್ಲಿ ಸೋಂಕಿತ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ.</p>.<p>ಬುಧವಾರ ವರದಿಯಾದ ಪ್ರಕರಣಗಳಲ್ಲಿ ಬಹುಪಾಲು ಜನರು 8ನೇ ವಾರ್ಡ್ನ20 ವರ್ಷದ ಸೋಂಕಿತ ಯುವಕ ಸಂಪರ್ಕಕ್ಕೆ ಬಂದವರಾಗಿದ್ದಾರೆ. ಸೋಂಕಿತನ ತಂದೆ, ಅವರಿಂದ ಸೊಸೆ, ಮೊಮ್ಮಗ, ನೆಂಟರು ಹೀಗೆ ಹಲವಾರು ಜನರಿಗೆ ಸೋಂಕು ತಗುಲಿದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p>.<p>ಸೋಂಕಿತರ ಮನೆ ಪ್ರದೇಶಗಳನ್ನು ಸೀಲ್ ಡೌನ್ ಮಾಡಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ವೈರಸ್ ನಾಶಕ ದ್ರಾವಣದಿಂದ ಶುಚಿಗೊಳಿಸುವುದು, ಸೋಂಕಿತರ ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆ ಹಾಕುವ ಕೆಲಸದಲ್ಲಿ ತೊಡಗಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 229 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 53, ಬಾಗೇಪಲ್ಲಿ 53, ಚಿಂತಾಮಣಿ 16, ಗೌರಿಬಿದನೂರು 96, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 11 ಜನರಿಗೆ ಕೋವಿಡ್ ಸೋಂಕಿದೆ.</p>.<p>ಸೋಂಕಿತರ ಪೈಕಿ ಮೂರು ಮಂದಿ ಕೋವಿಡ್ನಿಂದ, ಇಬ್ಬರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ಧಾರೆ. ಚಿಕಿತ್ಸೆಯಿಂದ 169 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ವಾರ್ಡ್ನಲ್ಲಿ 53 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>