<p>ಗುಡಿಬಂಡೆ: ಸರ್ಕಾರಗಳು ಅನುಸರಿಸುತ್ತಿರುವ ರೈತ ವಿರೋಧಿ ನೀತಿಗಳನ್ನು ಹಾಗೂ ಜಿಲ್ಲೆಯ ರೈತರ ಸಮಸ್ಯೆಗಳನ್ನು ಸಮಗ್ರವಾಗಿ ಚರ್ಚಿಸಲು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಕೆಪಿಆರ್ಎಸ್ ಮುಖಂಡ ಜಯರಾಮರೆಡ್ಡಿ ಹೇಳಿದರು.</p>.<p>ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮ್ಮೇಳನದ ಭಾಗವಾಗಿ ತಾಲ್ಲೂಕಿನಾದ್ಯಂತ ಪ್ರಚಾರ ಮತ್ತು ಕರಪತ್ರ ಹಂಚುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.</p>.<p>ಜಿಲ್ಲೆಯಲ್ಲಿ ರೈತರ ಅನೇಕ ಸಮಸ್ಯೆಗಳು ಇವೆ. ಆ ಸಮಸ್ಯೆಗಳನ್ನು ಚರ್ಚೆ ಮಾಡಿ ಅವುಗಳ ಪರಿಹಾರಕ್ಕಾಗಿ ಸಮ್ಮೇಳನದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ಭಾಗದ ಕೃಷಿಗಾಗಿ ಕೃಷ್ಣಾ ನದಿ ನೀರನ್ನು ಹರಿಸಬೇಕಾಗಿದೆ. ಕೆಪಿಆರ್ಎಸ್ನ 19ನೇ ಜಿಲ್ಲಾ ಸಮ್ಮೇಳನ ಬಾಗೇಪಲ್ಲಿಯಲ್ಲಿ ಫೆ. 25-26ರಂದು ನಡೆಯಲಿದೆ ಎಂದರು.</p>.<p>ಎಂ.ಎ ಆದಿನಾರಾಯಣ ಮಾತನಾಡಿ, ರೈತರಿಗೆ ಅನುಕೂಲವಾಗಿದ್ದ ಮನರೇಗಾವನ್ನು ಕೇಂದ್ರ ಬಿಜೆಪಿ ಸರ್ಕಾರವು ಅದರ ಸ್ವರೂಪವನ್ನೇ ಬದಲಿಸಿದೆ. ರೈತರ ಅಭಿವೃದ್ಧಿಗೆ ಹಿನ್ನಡೆಯಾಗುವಂತೆ ಆಗುತ್ತಿದೆ ಎಂದರು.</p>.<p>ತಾಲ್ಲೂಕು ಕಾರ್ಯದರ್ಶಿ ಉಪ್ಪಾರಹಳ್ಳಿ ಶ್ರೀನಿವಾಸ, ಡಿ.ಆರ್ ದೇವರಾಜು, ಖಜಾಂಚಿ ನರೇಗಾ ಸೀನಪ್ಪ, ಚನ್ನರಾಯಪ್ಪ, ಆದಿನಾರಾಯಣ ಸ್ವಾಮಿ, ರಮಣ, ಪುರುಷೋತ್ತಮ್, ಲಕ್ಷ್ಮಿನಾರಾಯಣ, ರಾಮು, ರಾಮಾಂಜಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಿಬಂಡೆ: ಸರ್ಕಾರಗಳು ಅನುಸರಿಸುತ್ತಿರುವ ರೈತ ವಿರೋಧಿ ನೀತಿಗಳನ್ನು ಹಾಗೂ ಜಿಲ್ಲೆಯ ರೈತರ ಸಮಸ್ಯೆಗಳನ್ನು ಸಮಗ್ರವಾಗಿ ಚರ್ಚಿಸಲು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಕೆಪಿಆರ್ಎಸ್ ಮುಖಂಡ ಜಯರಾಮರೆಡ್ಡಿ ಹೇಳಿದರು.</p>.<p>ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮ್ಮೇಳನದ ಭಾಗವಾಗಿ ತಾಲ್ಲೂಕಿನಾದ್ಯಂತ ಪ್ರಚಾರ ಮತ್ತು ಕರಪತ್ರ ಹಂಚುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.</p>.<p>ಜಿಲ್ಲೆಯಲ್ಲಿ ರೈತರ ಅನೇಕ ಸಮಸ್ಯೆಗಳು ಇವೆ. ಆ ಸಮಸ್ಯೆಗಳನ್ನು ಚರ್ಚೆ ಮಾಡಿ ಅವುಗಳ ಪರಿಹಾರಕ್ಕಾಗಿ ಸಮ್ಮೇಳನದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ಭಾಗದ ಕೃಷಿಗಾಗಿ ಕೃಷ್ಣಾ ನದಿ ನೀರನ್ನು ಹರಿಸಬೇಕಾಗಿದೆ. ಕೆಪಿಆರ್ಎಸ್ನ 19ನೇ ಜಿಲ್ಲಾ ಸಮ್ಮೇಳನ ಬಾಗೇಪಲ್ಲಿಯಲ್ಲಿ ಫೆ. 25-26ರಂದು ನಡೆಯಲಿದೆ ಎಂದರು.</p>.<p>ಎಂ.ಎ ಆದಿನಾರಾಯಣ ಮಾತನಾಡಿ, ರೈತರಿಗೆ ಅನುಕೂಲವಾಗಿದ್ದ ಮನರೇಗಾವನ್ನು ಕೇಂದ್ರ ಬಿಜೆಪಿ ಸರ್ಕಾರವು ಅದರ ಸ್ವರೂಪವನ್ನೇ ಬದಲಿಸಿದೆ. ರೈತರ ಅಭಿವೃದ್ಧಿಗೆ ಹಿನ್ನಡೆಯಾಗುವಂತೆ ಆಗುತ್ತಿದೆ ಎಂದರು.</p>.<p>ತಾಲ್ಲೂಕು ಕಾರ್ಯದರ್ಶಿ ಉಪ್ಪಾರಹಳ್ಳಿ ಶ್ರೀನಿವಾಸ, ಡಿ.ಆರ್ ದೇವರಾಜು, ಖಜಾಂಚಿ ನರೇಗಾ ಸೀನಪ್ಪ, ಚನ್ನರಾಯಪ್ಪ, ಆದಿನಾರಾಯಣ ಸ್ವಾಮಿ, ರಮಣ, ಪುರುಷೋತ್ತಮ್, ಲಕ್ಷ್ಮಿನಾರಾಯಣ, ರಾಮು, ರಾಮಾಂಜಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>