ಕಾಂಗ್ರೆಸ್ ಸರ್ಕಾರ ಜಾಗತೀಕರಣ, ಉದಾರೀಕರಣ ನೀತಿಗಳನ್ನು ಜಾರಿಗೊಳಿಸಿತು. ಆ ನೀತಿಗಳನ್ನುಬಿಜೆಪಿ ಸರ್ಕಾರ ವೇಗವಾಗಿ ಜಾರಿಗೊಳಿಸುತ್ತಿವೆ. ಇದರಿಂದ ಕೊತ್ತಂಬರಿ ಸೊಪ್ಪಿನಿಂದ ಹಿಡಿದು ಹಾಲು, ರೇಷ್ಮೆ, ಹಣ್ಣು, ತರಕಾರಿ ಸೇರಿದಂತೆ ಎಲ್ಲ ವಸ್ತುಗಳು ವಿದೇಶಗಳಿಂದ ಆಮದಾಗುತ್ತಿವೆ. ಇದರಿಂದ ದೇಶದ ರೈತರುಬೆಳೆದ ಉತ್ಪನ್ನಗಳಿಗೆ ಬೆಲೆ ಇಲ್ಲದಂತೆ ಆಗಿದೆ ಎಂದು ಪ್ರತಿಭಟನಕಾರರು ದೂರಿದರು.