ಅಳ್ವಾರ್/ಹೈದರಾಬಾದ್/ ಆಗ್ರಾ: ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ದೂಳು ಬಿರುಗಾಳಿ ಹಾಗೂ ಭಾರಿ ಮಳೆಗೆ 108 ಜನ ಮೃತಪಟ್ಟಿದ್ದಾರೆ.
ತೆಲಂಗಾಣದಲ್ಲಿ ಸುರಿದ ಭಾರಿ ಮಳೆಗೆ ಮೂರು ಮಂದಿ ಮೃತಪಟ್ಟಿದ್ದಾರೆ. ದೂಳು ಬಿರುಗಾಳಿ ಮತ್ತು ಮಳೆಗೆ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಸಾವಿರಾರು ಎಕರೆಯಷ್ಟು ಬೆಳೆಗೆ ಹಾನಿಯಾಗಿದೆ.
ವಾತಾವರಣ ತಿಳಿಯಾಗಿರದ ಕಾರಣ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಲಖನೌ ವಿಮಾನ ನಿಲ್ದಾಣಗಳಲ್ಲಿ ಹಲವು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ.