<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿ ಕುತ್ತಾಂಡಹಳ್ಳಿ ಗ್ರಾಮದಲ್ಲಿ ಕೊಳವೆಬಾವಿಗೆ ಹೊಸ ಪಂಪು, ಮೋಟಾರ್ ಅನ್ನು ಅಳವಡಿಸಿ, ನೀರು ಹರಿಸಿತು. ಇದರೊಂದಿಗೆ ಒಂದು ವಾರದಿಂದ ತಲೆದೋರಿದ್ದ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಂತಾಗಿದ್ದು, ಗ್ರಾಮಸ್ಥರು ಪುಳಕಿತರಾದರು. </p>.<p>ಕುತ್ತಾಂಡಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುತ್ತಿದ್ದ ಕೊಳವೆಬಾವಿ ಬರಿದಾಗಿತ್ತು. ಮತ್ತೊಂದು ಕೊಳವೆಬಾವಿಯಲ್ಲಿ ನೀರು ಇತ್ತು. ಆದರೆ, ಪಂಪು ಮತ್ತು ಮೋಟಾರ್ ಇರಲಿಲ್ಲ. ಹೀಗಾಗಿ, ಗ್ರಾಮಸ್ಥರು ಸೋಮವಾರ ಖಾಲಿ ಕೊಡಗಳೊಂದಿಗೆ ದೇವರಮಳ್ಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಈ ಕುರಿತು ‘ಪ್ರಜಾವಾಣಿ’ಯ ಮಾರ್ಚ್ 3ರ ಸಂಚಿಕೆಯಲ್ಲಿ ‘ನೀರಿಗಾಗಿ ಕುತ್ತಾಂಡಹಳ್ಳಿ ಜನರ ಒತ್ತಾಯ’ ಎಂಬ ಶೀರ್ಷಿಕೆಯೊಂದಿಗೆ ವರದಿ ಪ್ರಕಟಿಸಿತ್ತು.</p>.<p>ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಹೊಸ ಪಂಪು ಮತ್ತು ಮೋಟಾರ್ ಖರೀದಿಸಿ, ಕೊಳವೆಬಾವಿಗೆ ಅಳವಡಿಸಿದ್ದಾರೆ. ಆ ಮೂಲಕ ಗ್ರಾಮಕ್ಕೆ ನೀರು ಹರಿಯುವಂತೆ ಕ್ರಮ ಕೈಗೊಂಡರು.</p>.<p>ಇಒ ಆರ್. ಹೇಮಾವತಿ ಮಾತನಾಡಿ, ‘ಕುತ್ತಾಂಡಹಳ್ಳಿ ಗ್ರಾಮದಲ್ಲಿ 10 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿತ್ತು. ಈ ಬಗ್ಗೆ ಶಾಸಕರು ನೀಡಿದ ಸೂಚನೆಯಂತೆ ಹೊಸ ಮೋಟಾರ್ ಮತ್ತು ಪಂಪು ಖರೀದಿಸಿ, ಕೊಳವೆಬಾವಿಗೆ ಬಿಟ್ಟು ನೀರು ಹರಿಸಿದ್ದೇವೆ’ ಎಂದು ಹೇಳಿದರು. </p>.<p>ಬೇಸಿಗೆ ಆರಂಭವಾಗಿದ್ದು, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಎಲ್ಲ ಪಿಡಿಒಗಳಿಗೆ ಸೂಚಿಸಲಾಗಿದೆ ಎಂದರು. </p>.<p>ಈ ವೇಳೆ ಪಿಡಿಒ ಸಿದ್ದಿಕ್, ದೇವರಮಳ್ಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆಂಪೇಗೌಡ ಸೇರಿದಂತೆ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿ ಕುತ್ತಾಂಡಹಳ್ಳಿ ಗ್ರಾಮದಲ್ಲಿ ಕೊಳವೆಬಾವಿಗೆ ಹೊಸ ಪಂಪು, ಮೋಟಾರ್ ಅನ್ನು ಅಳವಡಿಸಿ, ನೀರು ಹರಿಸಿತು. ಇದರೊಂದಿಗೆ ಒಂದು ವಾರದಿಂದ ತಲೆದೋರಿದ್ದ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಂತಾಗಿದ್ದು, ಗ್ರಾಮಸ್ಥರು ಪುಳಕಿತರಾದರು. </p>.<p>ಕುತ್ತಾಂಡಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುತ್ತಿದ್ದ ಕೊಳವೆಬಾವಿ ಬರಿದಾಗಿತ್ತು. ಮತ್ತೊಂದು ಕೊಳವೆಬಾವಿಯಲ್ಲಿ ನೀರು ಇತ್ತು. ಆದರೆ, ಪಂಪು ಮತ್ತು ಮೋಟಾರ್ ಇರಲಿಲ್ಲ. ಹೀಗಾಗಿ, ಗ್ರಾಮಸ್ಥರು ಸೋಮವಾರ ಖಾಲಿ ಕೊಡಗಳೊಂದಿಗೆ ದೇವರಮಳ್ಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಈ ಕುರಿತು ‘ಪ್ರಜಾವಾಣಿ’ಯ ಮಾರ್ಚ್ 3ರ ಸಂಚಿಕೆಯಲ್ಲಿ ‘ನೀರಿಗಾಗಿ ಕುತ್ತಾಂಡಹಳ್ಳಿ ಜನರ ಒತ್ತಾಯ’ ಎಂಬ ಶೀರ್ಷಿಕೆಯೊಂದಿಗೆ ವರದಿ ಪ್ರಕಟಿಸಿತ್ತು.</p>.<p>ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಹೊಸ ಪಂಪು ಮತ್ತು ಮೋಟಾರ್ ಖರೀದಿಸಿ, ಕೊಳವೆಬಾವಿಗೆ ಅಳವಡಿಸಿದ್ದಾರೆ. ಆ ಮೂಲಕ ಗ್ರಾಮಕ್ಕೆ ನೀರು ಹರಿಯುವಂತೆ ಕ್ರಮ ಕೈಗೊಂಡರು.</p>.<p>ಇಒ ಆರ್. ಹೇಮಾವತಿ ಮಾತನಾಡಿ, ‘ಕುತ್ತಾಂಡಹಳ್ಳಿ ಗ್ರಾಮದಲ್ಲಿ 10 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿತ್ತು. ಈ ಬಗ್ಗೆ ಶಾಸಕರು ನೀಡಿದ ಸೂಚನೆಯಂತೆ ಹೊಸ ಮೋಟಾರ್ ಮತ್ತು ಪಂಪು ಖರೀದಿಸಿ, ಕೊಳವೆಬಾವಿಗೆ ಬಿಟ್ಟು ನೀರು ಹರಿಸಿದ್ದೇವೆ’ ಎಂದು ಹೇಳಿದರು. </p>.<p>ಬೇಸಿಗೆ ಆರಂಭವಾಗಿದ್ದು, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಎಲ್ಲ ಪಿಡಿಒಗಳಿಗೆ ಸೂಚಿಸಲಾಗಿದೆ ಎಂದರು. </p>.<p>ಈ ವೇಳೆ ಪಿಡಿಒ ಸಿದ್ದಿಕ್, ದೇವರಮಳ್ಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆಂಪೇಗೌಡ ಸೇರಿದಂತೆ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>