<p><strong>ಚಿಕ್ಕಬಳ್ಳಾಪುರ:</strong> ನಗರದ ಕನ್ನಡ ಭವನದಲ್ಲಿ ರಂಗ ಕಹಳೆ ಸಂಸ್ಥೆಯು ಹಮ್ಮಿಕೊಂಡಿದ್ದ ಕುವೆಂಪು ನಾಟಕೋತ್ಸದ ಸಮಾರೋಪ ಸೋಮವಾರ ನಡೆಯಿತು. ‘ಶೂದ್ರ ತಪಸ್ವಿ’ ನಾಟಕ ಪ್ರದರ್ಶನದೊಂದಿಗೆ ನಾಟಕೋತ್ಸವಕ್ಕೆ ತೆರೆ ಬಿದ್ದಿತು. </p>.<p>ಸಮಾರೋಪದಲ್ಲಿ ಮಾತನಾಡಿದ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಕನ್ನಡ ರಂಗಭೂಮಿಗೆ ತನ್ನದೇ ಆದ ಶಕ್ತಿ ಇದೆ. ಪ್ರಪಂಚದಲ್ಲಿ ಯಾವ ಭೂಮಿಯಲ್ಲಿ ಹುಟ್ಟದಷ್ಟು ಸಂತರು, ದಾರ್ಶನಿಕರು, ತತ್ವಪದಕಾರರು, ಶರಣರು, ಜ್ಞಾನಿಗಳು ಕನ್ನಡ ನಾಡಿನಲ್ಲಿ ಹುಟ್ಟಿದ್ದಾರೆ ಎಂದರು.</p>.<p>ಮಹಾನ್ ಮೇರು ವ್ಯಕ್ತಿತ್ವದ ಹೆಸರಿನಲ್ಲಿ ನಡೆಯುತ್ತಿರುವ ಈ ನಾಟಕೋತ್ಸವ ಪ್ರಮುಖವಾದುದು. ಬಾಲ್ಯದಿಂದ ಇಲ್ಲಿಯವರೆಗೆ ನಮ್ಮ ಮನಸ್ಸಿನ ಪಟಲದಲ್ಲಿ ಕುವೆಂಪು ಅವರು ಆಗಾಗ್ಗೆ ಬಂದು ಹೋಗುತ್ತಾರೆ. ಅವರು ವಿಶ್ವಮಾನವ ಧರ್ಮವನ್ನು ಹುಟ್ಟು ಹಾಕಿದರು ಎಂದು ಪ್ರಶಂಸಿಸಿದರು.</p>.<p>ಕುವೆಂಪು ಅವರು ನಮ್ಮ ಅಸ್ಮಿತೆ ಮತ್ತು ಮಾರ್ಗದರ್ಶಕರು. ಅವರ ಅನೇಕ ನಾಟಕಗಳ ಶೀರ್ಷಿಕೆಯನ್ನು ನೋಡಿದರೆ ಅವು ಬಿತ್ತನೆಯ ಬೀಜಗಳು. ಕುವೆಂಪು ವಿಶ್ವಮಾನವ ಸಂದೇಶವನ್ನು ನಾವು ಮಕ್ಕಳಿಗೆ ಹೇಳಬೇಕಾಗಿದೆ ಎಂದರು.</p>.<p>ಮಂಗಳನಾಥ ಸ್ವಾಮೀಜಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಪ್ರೊ.ಕೋಡಿ ರಂಗಪ್ಪ, ನಾಟಕೋತ್ಸವದ ಸಂಚಾಲಕ ಓಹಿಲೇಶ್ ಲಕ್ಷ್ಮಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರದ ಕನ್ನಡ ಭವನದಲ್ಲಿ ರಂಗ ಕಹಳೆ ಸಂಸ್ಥೆಯು ಹಮ್ಮಿಕೊಂಡಿದ್ದ ಕುವೆಂಪು ನಾಟಕೋತ್ಸದ ಸಮಾರೋಪ ಸೋಮವಾರ ನಡೆಯಿತು. ‘ಶೂದ್ರ ತಪಸ್ವಿ’ ನಾಟಕ ಪ್ರದರ್ಶನದೊಂದಿಗೆ ನಾಟಕೋತ್ಸವಕ್ಕೆ ತೆರೆ ಬಿದ್ದಿತು. </p>.<p>ಸಮಾರೋಪದಲ್ಲಿ ಮಾತನಾಡಿದ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಕನ್ನಡ ರಂಗಭೂಮಿಗೆ ತನ್ನದೇ ಆದ ಶಕ್ತಿ ಇದೆ. ಪ್ರಪಂಚದಲ್ಲಿ ಯಾವ ಭೂಮಿಯಲ್ಲಿ ಹುಟ್ಟದಷ್ಟು ಸಂತರು, ದಾರ್ಶನಿಕರು, ತತ್ವಪದಕಾರರು, ಶರಣರು, ಜ್ಞಾನಿಗಳು ಕನ್ನಡ ನಾಡಿನಲ್ಲಿ ಹುಟ್ಟಿದ್ದಾರೆ ಎಂದರು.</p>.<p>ಮಹಾನ್ ಮೇರು ವ್ಯಕ್ತಿತ್ವದ ಹೆಸರಿನಲ್ಲಿ ನಡೆಯುತ್ತಿರುವ ಈ ನಾಟಕೋತ್ಸವ ಪ್ರಮುಖವಾದುದು. ಬಾಲ್ಯದಿಂದ ಇಲ್ಲಿಯವರೆಗೆ ನಮ್ಮ ಮನಸ್ಸಿನ ಪಟಲದಲ್ಲಿ ಕುವೆಂಪು ಅವರು ಆಗಾಗ್ಗೆ ಬಂದು ಹೋಗುತ್ತಾರೆ. ಅವರು ವಿಶ್ವಮಾನವ ಧರ್ಮವನ್ನು ಹುಟ್ಟು ಹಾಕಿದರು ಎಂದು ಪ್ರಶಂಸಿಸಿದರು.</p>.<p>ಕುವೆಂಪು ಅವರು ನಮ್ಮ ಅಸ್ಮಿತೆ ಮತ್ತು ಮಾರ್ಗದರ್ಶಕರು. ಅವರ ಅನೇಕ ನಾಟಕಗಳ ಶೀರ್ಷಿಕೆಯನ್ನು ನೋಡಿದರೆ ಅವು ಬಿತ್ತನೆಯ ಬೀಜಗಳು. ಕುವೆಂಪು ವಿಶ್ವಮಾನವ ಸಂದೇಶವನ್ನು ನಾವು ಮಕ್ಕಳಿಗೆ ಹೇಳಬೇಕಾಗಿದೆ ಎಂದರು.</p>.<p>ಮಂಗಳನಾಥ ಸ್ವಾಮೀಜಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಪ್ರೊ.ಕೋಡಿ ರಂಗಪ್ಪ, ನಾಟಕೋತ್ಸವದ ಸಂಚಾಲಕ ಓಹಿಲೇಶ್ ಲಕ್ಷ್ಮಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>