ನಗರದ ಕಾರ್ಮಿಕರ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಟಿ. ಬಿ. ಸತೀಶ್ ಅವರು ಏ. 26ರಂದು ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕಾರ್ಮಿಕರು ಕಡ್ಡಾಯವಾಗಿ ಮತದಾನ ಮಾಡಬೇಕು. ಇದು ಅವರ ಹಕ್ಕು. ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಖಾನೆಗಳು, ವಾಣಿಜ್ಯ ಸಂಸ್ಥೆಗಳು, ಅಂಗಡಿಗಳು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ತಿಳಿಸಿದರು.