ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ‘ಜಿಲ್ಲಾ ಕೇಂದ್ರದಲ್ಲಿ ಬುಧವಾರ ಬೆಳಿಗ್ಗೆ ಬೈಕ್ ರ್ಯಾಲಿ, ಮೆರವಣಿಗೆ ಮೂಲಕ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು. ಜಿಲ್ಲೆಯ ವರ್ತಕರು, ಹೋಟೆಲ್ ಮಾಲೀಕರು ಸ್ವಯಂ ಪ್ರೇರಿತರಾಗಿ ಮುಷ್ಕರಕ್ಕೆ ಬೆಂಬಲ ನೀಡಬೇಕು. ಕೂಲಿ, ಕಾರ್ಮಿಕ ಸಂಘಟನೆಗಳು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.