<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ ಮತ್ತು ಗೌರಿಬಿದನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗಾರಿಕೀಕರಣಕ್ಕೆ ದೊಡ್ಡ ಮಟ್ಟದ ಪ್ರಯತ್ನಗಳು ನಡೆದಿವೆ. ಈಗಾಗಲೇ ಪ್ರಾಥಮಿಕ ಹೆಜ್ಜೆಗಳನ್ನೂ ಇಡಲಾಗಿದೆ. ಆದರೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಶೂನ್ಯ ಸ್ಥಿತಿ ಎನ್ನುವಂತಿದೆ.</p>.<p>1984–85ರಲ್ಲಿ ಚಿಕ್ಕಬಳ್ಳಾಪುರ ನಗರ ಹೊರವಲಯದಲ್ಲಿ 69 ಎಕರೆಗಳಲ್ಲಿ ಕೈಗಾರಿಕಾ ಪ್ರದೇಶ ತಲೆಎತ್ತಿದೆ. ಆ ತರುವಾಯ ಕೈಗಾರಿಕೆಗಳೇ ಚಿಕ್ಕಬಳ್ಳಾಪುರಕ್ಕೆ ಕಾಲಿಟ್ಟಿಲ್ಲ.</p>.<p>ಡಾ.ಕೆ. ಸುಧಾಕರ್ ಶಾಸಕರಾಗಿದ್ದ ವೇಳೆ ಮಂಚೇನಹಳ್ಳಿ ತಾಲ್ಲೂಕಿನಲ್ಲಿ ಕೈಗಾರಿಕೆಗಳಿಗಾಗಿ ಎರಡು ಸಾವಿರ ಎಕರೆ ಜಮೀನು ಗುರುತಿಸಿದ್ದರು. ಆದರೆ ಇಷ್ಟು ಪ್ರಮಾಣದ ಸರ್ಕಾರಿ ಜಮೀನು ಒಂದೇ ಕಡೆ ಲಭ್ಯವಾಗದೆ ಚದುರಿದ ರೀತಿಯಲ್ಲಿ ಇತ್ತು. ಈ ಸರ್ಕಾರಿ ಜಮೀನು ಮತ್ತು ವಶಕ್ಕೆ ಪಡೆಯಬೇಕಾದ ಜಮೀನುಗಳ ಕುರಿತು ಆಡಳಿತದಲ್ಲಿ ಚರ್ಚೆಗಳು ನಡೆದಿದ್ದವು. ಈ ಸಂಬಂಧ ಯೋಜನೆಗಳು ತಯಾರಾಗುವ ಹಂತದಲ್ಲಿಯೇ ವಿಧಾನಸಭೆ ಚುನಾವಣೆ ಬಂದಿತು. ಸುಧಾಕರ್ ಸೋಲು ಅನುಭವಿಸಿದರು. ಆ ನಂತರ ಮಂಚೇನಹಳ್ಳಿ ಕೈಗಾರಿಕೀಕರಣದ ಬಗ್ಗೆ ಮಾತುಗಳೇ ಗೌಣವಾದವು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಕೈಗಾರಿಕೆಗಳ ವಿಚಾರವಾಗಿ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. </p>.<p>ರಾಜಕೀಯ ಇಚ್ಛಾಶಕ್ತಿ ಕೊರತೆ ಕಾರಣದಿಂದಲೇ ಕೈಗಾರಿಕೀಕರಣದ ವಿಚಾರದಲ್ಲಿ ಚಿಕ್ಕಬಳ್ಳಾಪುರಕ್ಕೆ ಹಿನ್ನಡೆಯಾಗುತ್ತಿದೆ ಎನ್ನುವ ಮಾತು ಪ್ರಜ್ಞಾವಂತರಲ್ಲಿದೆ.</p>.<p>ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರಯತ್ನದ ಫಲವಾಗಿ ಜಿಲ್ಲೆಯಲ್ಲಿ ಕೈಗಾರಿಕೀಕರಣಕ್ಕೆ ದೊಡ್ಡ ಹೆಜ್ಜೆ ಇಡಲಾಗಿದೆ. ರಾಷ್ಟ್ರೀಯ ಹಬ್ಬಗಳ ವೇದಿಕೆಗಳಲ್ಲಿಯೂ ಸಚಿವರು ಈ ವಿಚಾರವನ್ನು ಒತ್ತಿ ಹೇಳುವರು. </p>.<p>ಚಿಕ್ಕಬಳ್ಳಾಪುರ ಹೊರತುಪಡಿಸಿ ಜಿಲ್ಲೆಯ ಉಳಿದ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗಾರಿಕೀಕರಣದ ಯೋಜನೆಗಳು ಜರುಗುತ್ತಿವೆ. ಜಿಲ್ಲೆಯಲ್ಲಿ ಕೈಗಾರಿಕೀಕರಣಕ್ಕೆ 7,856.37 ಎಕರೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. 2,278.10 ಎಕರೆಯನ್ನು ಕರ್ನಾಟಕ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಸ್ವಾಧೀನಕ್ಕೆ ಪಡೆಯಲಾಗಿದೆ. ಈ ಜಮೀನುಗಳ ಮಾಲೀಕರಿಗೆ ಪರಿಹಾರ ವಿತರಣೆ ಸಹ ಪ್ರಗತಿಯಲ್ಲಿದೆ.</p>.<p>ಅಂತಿಮ ಅಧಿಸೂಚನೆ ಮತ್ತು ಪ್ರಾಥಮಿಕ ಅಧಿಸೂಚನೆ ಸೇರಿ ಜಿಲ್ಲೆಯಲ್ಲಿ 10,134 ಎಕರೆಯು ಕೈಗಾರಿಕೀಕರಣದ ಹಂತದಲ್ಲಿ ಇವೆ. ಪ್ರಾಥಮಿಕ ಅಧಿಸೂಚನೆಯ ಹಂತದಲ್ಲಿರುವ ಈ ಯೋಜನೆಗಳು ಯಾವುದೇ ಅಡೆತಡೆಗಳು ಇಲ್ಲದೆ ಜಾರಿಯಾದರೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗಳು ಆಗಲಿವೆ. ಆ ಮೂಲಕ ಉದ್ಯೋಗ ಸೃಷ್ಟಿಯಾಗಲಿದೆ ಎನ್ನುವ ಆಶಾವಾದ ಗರಿಗೆದರಿದೆ.</p>.<p>ಹೀಗೆ ಸಾವಿರಾರು ಎಕರೆಯಲ್ಲಿ ಕೈಗಾರಿಕೀಕರಣದ ಪ್ರಯತ್ನಗಳು ನಡೆದರೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕೈಗಾರಿಕಾ ಯೋಜನೆಗಳ ಮಾತುಗಳೇ ಕೇಳಿ ಬರುತ್ತಿಲ್ಲ.</p>.<p>ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾ ಕೇಂದ್ರಗಳ ಆಸುಪಾಸಿನಲ್ಲಿ ಕೈಗಾರಿಕೀಕರಣವು ವೇಗವಾಗಿ ಬೆಳೆಯುತ್ತಿದೆ. ಆದರೆ, ಚಿಕ್ಕಬಳ್ಳಾಪುರ ಮಾತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. </p>.<p>ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶ ಈಗಾಗಲೇ ಅಭಿವೃದ್ಧಿ ಹೊಂದಿದೆ. ಇಲ್ಲಿ ಸರ್ಕಾರ ಮೂರನೇ ಹಂತದ ಘಟಕ ವಿಸ್ತರಣೆಗೆ ಹೆಜ್ಜೆ ಇಟ್ಟಿದೆ. </p>.<p>ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಬಾಗೇಪಲ್ಲಿಯಲ್ಲಿ ಈ ಹಿಂದೆ ಕೈಗಾರಿಕೀಕರಣಕ್ಕೆ ನಡೆದ ಪ್ರಯತ್ನಗಳು ವಿಫಲವಾಗಿದ್ದವು. 15 ವರ್ಷಗಳ ಹಿಂದೆ ಇಲ್ಲಿ ಕೈಗಾರಿಕೆಗಳಿಗಾಗಿ ಭೂಮಿ ಗುರುತಿಸಲಾಗಿತ್ತು. ಆದರೆ, ಯೋಜನೆಗಳ ಕಾರ್ಯಗತವಾಗಿರಲಿಲ್ಲ. ಈಗ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಕೈಗಾರಿಕೀಕರಣಕ್ಕೆ ಜಮೀನು ಗುರುತಿಸಲಾಗಿದೆ </p>.<p>ಶಿಡ್ಲಘಟ್ಟ ತಾಲ್ಲೂಕಿನ ಜಂಗಮ ಕೋಟೆ ಹೋಬಳಿಯಲ್ಲಿ ಜಮೀನು ಗುರುತಿಸಲಾಗಿದೆ. ಈ ಹೋಬಳಿ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಮೀಪವಿದೆ. ಅಮರಾವತಿ ಬಳಿಯೇ ಬೆಂಗಳೂರು ಉತ್ತರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ಶಂಕು ಸ್ಥಾಪನೆ ನಡೆದಿದೆ. ಈ ಎಲ್ಲ ಬೆಳವಣಿಗೆಗಳು ಕೃಷಿಯೇ ಪ್ರಧಾನವಾಗಿರುವ ಶಿಡ್ಲಘಟ್ಟ ತಾಲ್ಲೂಕಿನ ಆರ್ಥಿಕ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ.</p>.<p>ಚಿಕ್ಕಬಳ್ಳಾಪುರದಲ್ಲಿ ಈ ಹಿಂದಿನಿಂದಲೂ ದ್ರಾಕ್ಷಿ ರಸ ತಯಾರಿಕಾ ಘಟಕ ಸೇರಿದಂತೆ ಕೃಷಿ ಉತ್ಪನ್ನಗಳಿಗೆ ಸಂಬಂಧಿಸಿದ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎನ್ನುವ ಕೂಗಿದೆ. ಜಿಲ್ಲೆಯ ಈಗ ಕೈಗಾರಿಕೀಕರಣಕ್ಕೆ ದೊಡ್ಡ ಪ್ರಯತ್ನಗಳು ನಡೆದಿದ್ದರೆ ಚಿಕ್ಕಬಳ್ಳಾಪುರದಲ್ಲಿ ‘ಚಿಕ್ಕ’ ಪ್ರಯತ್ನಗಳು ಸಾಧ್ಯವಾಗಿಲ್ಲ.</p>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ ಮತ್ತು ಗೌರಿಬಿದನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗಾರಿಕೀಕರಣಕ್ಕೆ ದೊಡ್ಡ ಮಟ್ಟದ ಪ್ರಯತ್ನಗಳು ನಡೆದಿವೆ. ಈಗಾಗಲೇ ಪ್ರಾಥಮಿಕ ಹೆಜ್ಜೆಗಳನ್ನೂ ಇಡಲಾಗಿದೆ. ಆದರೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಶೂನ್ಯ ಸ್ಥಿತಿ ಎನ್ನುವಂತಿದೆ.</p>.<p>1984–85ರಲ್ಲಿ ಚಿಕ್ಕಬಳ್ಳಾಪುರ ನಗರ ಹೊರವಲಯದಲ್ಲಿ 69 ಎಕರೆಗಳಲ್ಲಿ ಕೈಗಾರಿಕಾ ಪ್ರದೇಶ ತಲೆಎತ್ತಿದೆ. ಆ ತರುವಾಯ ಕೈಗಾರಿಕೆಗಳೇ ಚಿಕ್ಕಬಳ್ಳಾಪುರಕ್ಕೆ ಕಾಲಿಟ್ಟಿಲ್ಲ.</p>.<p>ಡಾ.ಕೆ. ಸುಧಾಕರ್ ಶಾಸಕರಾಗಿದ್ದ ವೇಳೆ ಮಂಚೇನಹಳ್ಳಿ ತಾಲ್ಲೂಕಿನಲ್ಲಿ ಕೈಗಾರಿಕೆಗಳಿಗಾಗಿ ಎರಡು ಸಾವಿರ ಎಕರೆ ಜಮೀನು ಗುರುತಿಸಿದ್ದರು. ಆದರೆ ಇಷ್ಟು ಪ್ರಮಾಣದ ಸರ್ಕಾರಿ ಜಮೀನು ಒಂದೇ ಕಡೆ ಲಭ್ಯವಾಗದೆ ಚದುರಿದ ರೀತಿಯಲ್ಲಿ ಇತ್ತು. ಈ ಸರ್ಕಾರಿ ಜಮೀನು ಮತ್ತು ವಶಕ್ಕೆ ಪಡೆಯಬೇಕಾದ ಜಮೀನುಗಳ ಕುರಿತು ಆಡಳಿತದಲ್ಲಿ ಚರ್ಚೆಗಳು ನಡೆದಿದ್ದವು. ಈ ಸಂಬಂಧ ಯೋಜನೆಗಳು ತಯಾರಾಗುವ ಹಂತದಲ್ಲಿಯೇ ವಿಧಾನಸಭೆ ಚುನಾವಣೆ ಬಂದಿತು. ಸುಧಾಕರ್ ಸೋಲು ಅನುಭವಿಸಿದರು. ಆ ನಂತರ ಮಂಚೇನಹಳ್ಳಿ ಕೈಗಾರಿಕೀಕರಣದ ಬಗ್ಗೆ ಮಾತುಗಳೇ ಗೌಣವಾದವು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಕೈಗಾರಿಕೆಗಳ ವಿಚಾರವಾಗಿ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. </p>.<p>ರಾಜಕೀಯ ಇಚ್ಛಾಶಕ್ತಿ ಕೊರತೆ ಕಾರಣದಿಂದಲೇ ಕೈಗಾರಿಕೀಕರಣದ ವಿಚಾರದಲ್ಲಿ ಚಿಕ್ಕಬಳ್ಳಾಪುರಕ್ಕೆ ಹಿನ್ನಡೆಯಾಗುತ್ತಿದೆ ಎನ್ನುವ ಮಾತು ಪ್ರಜ್ಞಾವಂತರಲ್ಲಿದೆ.</p>.<p>ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರಯತ್ನದ ಫಲವಾಗಿ ಜಿಲ್ಲೆಯಲ್ಲಿ ಕೈಗಾರಿಕೀಕರಣಕ್ಕೆ ದೊಡ್ಡ ಹೆಜ್ಜೆ ಇಡಲಾಗಿದೆ. ರಾಷ್ಟ್ರೀಯ ಹಬ್ಬಗಳ ವೇದಿಕೆಗಳಲ್ಲಿಯೂ ಸಚಿವರು ಈ ವಿಚಾರವನ್ನು ಒತ್ತಿ ಹೇಳುವರು. </p>.<p>ಚಿಕ್ಕಬಳ್ಳಾಪುರ ಹೊರತುಪಡಿಸಿ ಜಿಲ್ಲೆಯ ಉಳಿದ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗಾರಿಕೀಕರಣದ ಯೋಜನೆಗಳು ಜರುಗುತ್ತಿವೆ. ಜಿಲ್ಲೆಯಲ್ಲಿ ಕೈಗಾರಿಕೀಕರಣಕ್ಕೆ 7,856.37 ಎಕರೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. 2,278.10 ಎಕರೆಯನ್ನು ಕರ್ನಾಟಕ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಸ್ವಾಧೀನಕ್ಕೆ ಪಡೆಯಲಾಗಿದೆ. ಈ ಜಮೀನುಗಳ ಮಾಲೀಕರಿಗೆ ಪರಿಹಾರ ವಿತರಣೆ ಸಹ ಪ್ರಗತಿಯಲ್ಲಿದೆ.</p>.<p>ಅಂತಿಮ ಅಧಿಸೂಚನೆ ಮತ್ತು ಪ್ರಾಥಮಿಕ ಅಧಿಸೂಚನೆ ಸೇರಿ ಜಿಲ್ಲೆಯಲ್ಲಿ 10,134 ಎಕರೆಯು ಕೈಗಾರಿಕೀಕರಣದ ಹಂತದಲ್ಲಿ ಇವೆ. ಪ್ರಾಥಮಿಕ ಅಧಿಸೂಚನೆಯ ಹಂತದಲ್ಲಿರುವ ಈ ಯೋಜನೆಗಳು ಯಾವುದೇ ಅಡೆತಡೆಗಳು ಇಲ್ಲದೆ ಜಾರಿಯಾದರೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗಳು ಆಗಲಿವೆ. ಆ ಮೂಲಕ ಉದ್ಯೋಗ ಸೃಷ್ಟಿಯಾಗಲಿದೆ ಎನ್ನುವ ಆಶಾವಾದ ಗರಿಗೆದರಿದೆ.</p>.<p>ಹೀಗೆ ಸಾವಿರಾರು ಎಕರೆಯಲ್ಲಿ ಕೈಗಾರಿಕೀಕರಣದ ಪ್ರಯತ್ನಗಳು ನಡೆದರೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕೈಗಾರಿಕಾ ಯೋಜನೆಗಳ ಮಾತುಗಳೇ ಕೇಳಿ ಬರುತ್ತಿಲ್ಲ.</p>.<p>ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾ ಕೇಂದ್ರಗಳ ಆಸುಪಾಸಿನಲ್ಲಿ ಕೈಗಾರಿಕೀಕರಣವು ವೇಗವಾಗಿ ಬೆಳೆಯುತ್ತಿದೆ. ಆದರೆ, ಚಿಕ್ಕಬಳ್ಳಾಪುರ ಮಾತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. </p>.<p>ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶ ಈಗಾಗಲೇ ಅಭಿವೃದ್ಧಿ ಹೊಂದಿದೆ. ಇಲ್ಲಿ ಸರ್ಕಾರ ಮೂರನೇ ಹಂತದ ಘಟಕ ವಿಸ್ತರಣೆಗೆ ಹೆಜ್ಜೆ ಇಟ್ಟಿದೆ. </p>.<p>ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಬಾಗೇಪಲ್ಲಿಯಲ್ಲಿ ಈ ಹಿಂದೆ ಕೈಗಾರಿಕೀಕರಣಕ್ಕೆ ನಡೆದ ಪ್ರಯತ್ನಗಳು ವಿಫಲವಾಗಿದ್ದವು. 15 ವರ್ಷಗಳ ಹಿಂದೆ ಇಲ್ಲಿ ಕೈಗಾರಿಕೆಗಳಿಗಾಗಿ ಭೂಮಿ ಗುರುತಿಸಲಾಗಿತ್ತು. ಆದರೆ, ಯೋಜನೆಗಳ ಕಾರ್ಯಗತವಾಗಿರಲಿಲ್ಲ. ಈಗ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಕೈಗಾರಿಕೀಕರಣಕ್ಕೆ ಜಮೀನು ಗುರುತಿಸಲಾಗಿದೆ </p>.<p>ಶಿಡ್ಲಘಟ್ಟ ತಾಲ್ಲೂಕಿನ ಜಂಗಮ ಕೋಟೆ ಹೋಬಳಿಯಲ್ಲಿ ಜಮೀನು ಗುರುತಿಸಲಾಗಿದೆ. ಈ ಹೋಬಳಿ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಮೀಪವಿದೆ. ಅಮರಾವತಿ ಬಳಿಯೇ ಬೆಂಗಳೂರು ಉತ್ತರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ಶಂಕು ಸ್ಥಾಪನೆ ನಡೆದಿದೆ. ಈ ಎಲ್ಲ ಬೆಳವಣಿಗೆಗಳು ಕೃಷಿಯೇ ಪ್ರಧಾನವಾಗಿರುವ ಶಿಡ್ಲಘಟ್ಟ ತಾಲ್ಲೂಕಿನ ಆರ್ಥಿಕ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ.</p>.<p>ಚಿಕ್ಕಬಳ್ಳಾಪುರದಲ್ಲಿ ಈ ಹಿಂದಿನಿಂದಲೂ ದ್ರಾಕ್ಷಿ ರಸ ತಯಾರಿಕಾ ಘಟಕ ಸೇರಿದಂತೆ ಕೃಷಿ ಉತ್ಪನ್ನಗಳಿಗೆ ಸಂಬಂಧಿಸಿದ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎನ್ನುವ ಕೂಗಿದೆ. ಜಿಲ್ಲೆಯ ಈಗ ಕೈಗಾರಿಕೀಕರಣಕ್ಕೆ ದೊಡ್ಡ ಪ್ರಯತ್ನಗಳು ನಡೆದಿದ್ದರೆ ಚಿಕ್ಕಬಳ್ಳಾಪುರದಲ್ಲಿ ‘ಚಿಕ್ಕ’ ಪ್ರಯತ್ನಗಳು ಸಾಧ್ಯವಾಗಿಲ್ಲ.</p>