<p><strong>ಶಿಡ್ಲಘಟ್ಟ</strong>: ತಾಲ್ಲೂಕಿನಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಆದರೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಕೆ ಆಗದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಡಿಎಪಿ ಗೊಬ್ಬರವು ರೈತರ ಬೇಡಿಕೆಗೆ ಅನುಗುಣವಾಗಿ ಕಾಲಕಾಲಕ್ಕೆ ಸರಬರಾಜು ಆಗುತ್ತಿಲ್ಲ ಎಂದು ರೈತರು ದೂರಿದ್ದಾರೆ.</p>.<p>ತಾಲ್ಲೂಕಿನ ಬಹುತೇಕ ಕಡೆ ಮಳೆ ಧಾರಾಕಾರವಾಗಿ ಸುರಿದಿದೆ. ಈಗ ರಸಗೊಬ್ಬರಗಳ ಅಗತ್ಯತೆಯೂ ಹೆಚ್ಚಾಗಿದೆ. ಆದರೆ ಡಿಎಪಿ ಮತ್ತು ಯೂರಿಯಾ ಕೊರತೆ ಕಾಣಿಸಿಕೊಂಡಿದೆ.</p>.<p>ಕೇಂದ್ರ ಸರ್ಕಾರ ಡಿಎಪಿ ಬೆಲೆ ಏರಿಸಿದಾಗ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಡಿಎಪಿ ಬೆಲೆಯನ್ನು ₹1,200 ಗೆ ಇಳಿಸಿ ರಸಗೊಬ್ಬರ ಉತ್ಪಾದನಾ ಕಂಪನಿಗಳಿಗೆ ಸಬ್ಸಿಡಿ ಹಣ ನೀಡುವುದಾಗಿ ಹೇಳಿತ್ತು. ಇದೇ ಕಾರಣಕ್ಕೆ ಈಗ ಕಂಪನಿಗಳು ಡಿಎಪಿಯನ್ನು ಹೆಚ್ಚಾಗಿ ಉತ್ಪಾದಿಸದೆ ಪೂರೈಕೆಯನ್ನೂ ಕಡಿಮೆ ಮಾಡಿವೆ ಎಂಬ ಆರೋಪವಿದೆ.</p>.<p>ರೈತರು ಬಹುತೇಕ ರಸಗೊಬ್ಬರ ಮಳಿಗೆಗಳು ಮತ್ತು ಸೊಸೈಟಿ ಮುಂದೆ ಡಿಎಪಿಗಾಗಿ ಸಾಲುಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬರುತ್ತಿದೆ.</p>.<p>ತಿಂಗಳಿಂದಲೂ ಕೊರತೆ</p>.<p>‘ ಇದು ಬಿತ್ತನೆ ಮಾಡುವ ಕಾಲ. ಈಗ ನಮಗೆಲ್ಲರಿಗೂ ಡಿಎಪಿ ಅತ್ಯಗತ್ಯ. ಆದರೆ ಡಿಎಪಿ ಸಿಗುತ್ತಿಲ್ಲ. ಕೆಲವರು 20-20 ಗೊಬ್ಬರ ಕೊಂಡು ತಂದು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಕಳೆದ ಒಂದು ತಿಂಗಳಿಂದಲೂ ಡಿಎಪಿ ಗೊಬ್ಬರಕ್ಕೆ ತೀವ್ರ ಕೊರತೆಯಿದೆ. ಅಲ್ಪ ಸ್ವಲ್ಪ ಬಂದರೂ ಒಂದೆರಡು ಗಂಟೆಗಳಲ್ಲಿ ಖಾಲಿಯಾಗಿಬಿಡುತ್ತದೆ. ಬಿತ್ತನೆ ಕಾರ್ಯಕ್ಕೆ ಡಿಎಪಿ ಸಿಗದಂತಾಗಿದೆ’ ಎನ್ನುತ್ತಾರೆ ರೈತ ರಂಜಿತ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ತಾಲ್ಲೂಕಿನಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಆದರೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಕೆ ಆಗದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಡಿಎಪಿ ಗೊಬ್ಬರವು ರೈತರ ಬೇಡಿಕೆಗೆ ಅನುಗುಣವಾಗಿ ಕಾಲಕಾಲಕ್ಕೆ ಸರಬರಾಜು ಆಗುತ್ತಿಲ್ಲ ಎಂದು ರೈತರು ದೂರಿದ್ದಾರೆ.</p>.<p>ತಾಲ್ಲೂಕಿನ ಬಹುತೇಕ ಕಡೆ ಮಳೆ ಧಾರಾಕಾರವಾಗಿ ಸುರಿದಿದೆ. ಈಗ ರಸಗೊಬ್ಬರಗಳ ಅಗತ್ಯತೆಯೂ ಹೆಚ್ಚಾಗಿದೆ. ಆದರೆ ಡಿಎಪಿ ಮತ್ತು ಯೂರಿಯಾ ಕೊರತೆ ಕಾಣಿಸಿಕೊಂಡಿದೆ.</p>.<p>ಕೇಂದ್ರ ಸರ್ಕಾರ ಡಿಎಪಿ ಬೆಲೆ ಏರಿಸಿದಾಗ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಡಿಎಪಿ ಬೆಲೆಯನ್ನು ₹1,200 ಗೆ ಇಳಿಸಿ ರಸಗೊಬ್ಬರ ಉತ್ಪಾದನಾ ಕಂಪನಿಗಳಿಗೆ ಸಬ್ಸಿಡಿ ಹಣ ನೀಡುವುದಾಗಿ ಹೇಳಿತ್ತು. ಇದೇ ಕಾರಣಕ್ಕೆ ಈಗ ಕಂಪನಿಗಳು ಡಿಎಪಿಯನ್ನು ಹೆಚ್ಚಾಗಿ ಉತ್ಪಾದಿಸದೆ ಪೂರೈಕೆಯನ್ನೂ ಕಡಿಮೆ ಮಾಡಿವೆ ಎಂಬ ಆರೋಪವಿದೆ.</p>.<p>ರೈತರು ಬಹುತೇಕ ರಸಗೊಬ್ಬರ ಮಳಿಗೆಗಳು ಮತ್ತು ಸೊಸೈಟಿ ಮುಂದೆ ಡಿಎಪಿಗಾಗಿ ಸಾಲುಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬರುತ್ತಿದೆ.</p>.<p>ತಿಂಗಳಿಂದಲೂ ಕೊರತೆ</p>.<p>‘ ಇದು ಬಿತ್ತನೆ ಮಾಡುವ ಕಾಲ. ಈಗ ನಮಗೆಲ್ಲರಿಗೂ ಡಿಎಪಿ ಅತ್ಯಗತ್ಯ. ಆದರೆ ಡಿಎಪಿ ಸಿಗುತ್ತಿಲ್ಲ. ಕೆಲವರು 20-20 ಗೊಬ್ಬರ ಕೊಂಡು ತಂದು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಕಳೆದ ಒಂದು ತಿಂಗಳಿಂದಲೂ ಡಿಎಪಿ ಗೊಬ್ಬರಕ್ಕೆ ತೀವ್ರ ಕೊರತೆಯಿದೆ. ಅಲ್ಪ ಸ್ವಲ್ಪ ಬಂದರೂ ಒಂದೆರಡು ಗಂಟೆಗಳಲ್ಲಿ ಖಾಲಿಯಾಗಿಬಿಡುತ್ತದೆ. ಬಿತ್ತನೆ ಕಾರ್ಯಕ್ಕೆ ಡಿಎಪಿ ಸಿಗದಂತಾಗಿದೆ’ ಎನ್ನುತ್ತಾರೆ ರೈತ ರಂಜಿತ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>