ಬೆಳಿಗ್ಗೆಯಿಂದಲೇ ದೂರ ದೂರದ ಊರುಗಳಿಂದ ಬಂದ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಣ್ಣು ಕಾಯಿ ನೀಡಿ ಪೂಜೆ ಮಾಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಭೀಮ ಲಿಂಗೇಶ್ವರ ಸ್ವಾಮಿಗೆ ಮಹನ್ಯಾಸಪೂರ್ವಕ ರುದ್ರಾಭಿ ಷೇಕ ನಡೆಯಿತು. ರುದ್ರಹೋಮವನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಪಾರ್ವತಿ ಅಮ್ಮನವರಿಗೂ ವಿಶೇಷ ಅಭಿಷೇಕ, ಸಹಸ್ರನಾಮಾರ್ಚನೆಯನ್ನು ಮಾಡಲಾಯಿತು. ಲಿಂಗಕ್ಕೆ ಹೂಗಳಿಂದ ಮಾಡಿದ್ದ ವಿಶೇಷ ಅಲಂಕಾರ ಭಕ್ತರ ಮನತಣಿಸಿತು.