ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದುಗೆರೆಯಲ್ಲಿ ಸ್ವರ್ಗದ ಬಾಗಿಲು ದರ್ಶನ

Last Updated 13 ಜನವರಿ 2020, 13:13 IST
ಅಕ್ಷರ ಗಾತ್ರ

ಗೌರಿಬಿದನೂರು: ತಾಲ್ಲೂಕಿನ ಹೊಸೂರು ‌ಹೋಬಳಿಯ ಮುದುಗೆರೆ ಗ್ರಾಮದ ಲಕ್ಷ್ಮಿ ಚನ್ನಕೇಶವ ದೇವಾಲಯದಲ್ಲಿ‌ ಜ. 14ರಂದು ಸಂಕ್ರಾಂತಿ ಹಾಗೂ ಉತ್ತರಾಯಣ ಪುಣ್ಯಕಾಲದ ಅಂಗವಾಗಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ದೇವಸ್ಥಾನದ ಸ್ವರ್ಗದ ಬಾಗಿಲನ್ನು‌ ತೆರೆಯಲಾಗುವುದು.

ಆ ಸಂದರ್ಭದಲ್ಲಿ ಸೂರ್ಯನ ಕಿರಣಗಳು‌ ನೇರವಾಗಿ ಗರ್ಭ ಗುಡಿಯಲ್ಲಿನ ದೇವರ ಪಾದಗಳ‌ ಮೇಲೆ ಬೀಳಲಿವೆ. ಆ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೂರಾರು‌ ಭಕ್ತರು ಬರುತ್ತಾರೆ. ಇದರ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕಾರ್ಯಗಳನ್ನು ನೆರವೇರಿಸಲಾಗುವುದು. ಪ್ರತಿ ವರ್ಷಕ್ಕೊಮ್ಮೆ ತೆರೆಯುವ ಈ ಬಾಗಿಲಿನಲ್ಲಿ ದೇವರ ದರ್ಶನ ಮಾಡಲು ಭಕ್ತರು ಕಾತರದಿಂದ ದೇವಾಲಯಕ್ಕೆ ಬರುತ್ತಾರೆ ಎಂದು ದೇವಾಲಯದ ಅರ್ಚಕರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT