<p><strong>ಗುಡಿಬಂಡೆ</strong>: ‘ಆರ್ಥಿಕವಾಗಿ ದುರ್ಬಲರಾದವರು ಕಾನೂನು ಪ್ರಾಧಿಕಾರದಿಂದ ಉಚಿತವಾಗಿ ಕಾನೂನಿನ ನೆರವು ಹಾಗೂ ಅರಿವು ಪಡೆದುಕೊಳ್ಳಬಹುದು’ ಎಂದು ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಆರ್. ಶಿವಕುಮಾರ್ ಹೇಳಿದರು.</p>.<p>ಪಟ್ಟಣದ ನ್ಯಾಯಾಲಯದಲ್ಲಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ನಡೆದ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಕಾನೂನು ನೆರವು ಮತ್ತು ಅರಿವು ಪಡೆಯುವವರು ಪ್ರಾಧಿಕಾರದಿಂದ ನೇಮಿಸಿರುವ ವಕೀಲರನ್ನು ಸಂಪರ್ಕಿಸಬೇಕು. ವಕೀಲರಿಗೂ ಹಾಗೂ ನ್ಯಾಯಾಲಯಕ್ಕೆ ಯಾವುದೇ ಶುಲ್ಕ ಪಾವತಿಸದೆ ಕಾನೂನು ಹೋರಾಟ ಮಾಡಬಹುದು ಎಂದು ತಿಳಿಸಿದರು.</p>.<p>ವಕೀಲ ಎಸ್.ವಿ. ನಂದೀಶ್ವರ ರೆಡ್ಡಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡ, ಅಂಗವಿಕಲರು, ಮಹಿಳೆಯರು, ₹ 1 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಉಚಿತವಾಗಿ ಕಾನೂನಿನ ನೆರವು ಪಡೆದುಕೊಳ್ಳಬಹುದು ಎಂದು ಹೇಳಿದರು.</p>.<p>ಎಪಿಪಿ ವಿ. ರಾಮಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಪಿ.ಶಿವಪ್ಪ, ವಕೀಲರಾದ ನಾರಾಯಣಸ್ವಾಮಿ, ರಾಮನಾಥ ರೆಡ್ಡಿ, ಶಿವಾನಂದರೆಡ್ಡಿ, ಎ. ಗಂಗಾಧರಪ್ಪ, ಟಿ.ಸಿ. ಅಶ್ವಥರೆಡ್ಡಿ, ಎನ್. ನರಸಿಂಹಪ್ಪ, ಕೆ.ಎಲ್. ಮಂಜುನಾಥ, ಕಾನೂನು ಸೇವಾ ಸಮಿತಿಯ ಸುರೇಶ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ</strong>: ‘ಆರ್ಥಿಕವಾಗಿ ದುರ್ಬಲರಾದವರು ಕಾನೂನು ಪ್ರಾಧಿಕಾರದಿಂದ ಉಚಿತವಾಗಿ ಕಾನೂನಿನ ನೆರವು ಹಾಗೂ ಅರಿವು ಪಡೆದುಕೊಳ್ಳಬಹುದು’ ಎಂದು ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಆರ್. ಶಿವಕುಮಾರ್ ಹೇಳಿದರು.</p>.<p>ಪಟ್ಟಣದ ನ್ಯಾಯಾಲಯದಲ್ಲಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ನಡೆದ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಕಾನೂನು ನೆರವು ಮತ್ತು ಅರಿವು ಪಡೆಯುವವರು ಪ್ರಾಧಿಕಾರದಿಂದ ನೇಮಿಸಿರುವ ವಕೀಲರನ್ನು ಸಂಪರ್ಕಿಸಬೇಕು. ವಕೀಲರಿಗೂ ಹಾಗೂ ನ್ಯಾಯಾಲಯಕ್ಕೆ ಯಾವುದೇ ಶುಲ್ಕ ಪಾವತಿಸದೆ ಕಾನೂನು ಹೋರಾಟ ಮಾಡಬಹುದು ಎಂದು ತಿಳಿಸಿದರು.</p>.<p>ವಕೀಲ ಎಸ್.ವಿ. ನಂದೀಶ್ವರ ರೆಡ್ಡಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡ, ಅಂಗವಿಕಲರು, ಮಹಿಳೆಯರು, ₹ 1 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಉಚಿತವಾಗಿ ಕಾನೂನಿನ ನೆರವು ಪಡೆದುಕೊಳ್ಳಬಹುದು ಎಂದು ಹೇಳಿದರು.</p>.<p>ಎಪಿಪಿ ವಿ. ರಾಮಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಪಿ.ಶಿವಪ್ಪ, ವಕೀಲರಾದ ನಾರಾಯಣಸ್ವಾಮಿ, ರಾಮನಾಥ ರೆಡ್ಡಿ, ಶಿವಾನಂದರೆಡ್ಡಿ, ಎ. ಗಂಗಾಧರಪ್ಪ, ಟಿ.ಸಿ. ಅಶ್ವಥರೆಡ್ಡಿ, ಎನ್. ನರಸಿಂಹಪ್ಪ, ಕೆ.ಎಲ್. ಮಂಜುನಾಥ, ಕಾನೂನು ಸೇವಾ ಸಮಿತಿಯ ಸುರೇಶ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>