<p><strong>ಶಿಡ್ಲಘಟ್ಟ:</strong> ‘ಹಣದ ಕೊರತೆಯಿಂದ ಜನಸಾಮಾನ್ಯರು ಕಾನೂನು ಸೌಲಭ್ಯದಿಂದ ವಂಚಿತರಾಗಬಾರದು. ಅನಕ್ಷರಸ್ಥ ಹಾಗೂ ಬಡ ವರ್ಗದವರಿಗೆ ಉಚಿತ ಕಾನೂನು ಸೇವೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಕಾನೂನು ಸೇವಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಮಂಜುನಾಥ್ ತಿಳಿಸಿದರು.</p>.<p>ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲ್ಲೂಕು ಆಡಳಿತದಿಂದ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಸೋಮವಾರ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ ನಾಗರಿಕರಿಗೆ ಕಾನೂನು, ಮೂಲಸೌಲಭ್ಯದ ಬಗ್ಗೆ ಅರಿವು ಮೂಡಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಬೇಕು. ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಬಹಳ ಮುಂದುವರಿದಿದ್ದು, ಕಾನೂನಿನ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ. ಚಂದ್ರಶೇಖರಗೌಡ ಮಾತನಾಡಿ, ಯಾರೊಬ್ಬರೂ ಕಾನೂನಿನ ಮೂಲಕ ಪರಿಹಾರ ಪಡೆದುಕೊಳ್ಳುವಲ್ಲಿ ವಂಚಿತರಾಗಬಾರದು. ಈ ಆಶಯದಡಿ ಜಾರಿಗೆ ತಂದಿರುವ ಕಾಯ್ದೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ. ಪಚ್ಚಾಪುರೆ, ಸಿವಿಲ್ ನ್ಯಾಯಾಧೀಶರಾದ ಡಿ. ರೋಹಿಣಿ, ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ವಿಜಯಾ ವೆಂಕಟರಾಮ್, ವಕೀಲರ ಸಂಘದ ಕಾರ್ಯದರ್ಶಿ ಎಂ.ಬಿ. ಲೋಕೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ‘ಹಣದ ಕೊರತೆಯಿಂದ ಜನಸಾಮಾನ್ಯರು ಕಾನೂನು ಸೌಲಭ್ಯದಿಂದ ವಂಚಿತರಾಗಬಾರದು. ಅನಕ್ಷರಸ್ಥ ಹಾಗೂ ಬಡ ವರ್ಗದವರಿಗೆ ಉಚಿತ ಕಾನೂನು ಸೇವೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಕಾನೂನು ಸೇವಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಮಂಜುನಾಥ್ ತಿಳಿಸಿದರು.</p>.<p>ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲ್ಲೂಕು ಆಡಳಿತದಿಂದ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಸೋಮವಾರ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ ನಾಗರಿಕರಿಗೆ ಕಾನೂನು, ಮೂಲಸೌಲಭ್ಯದ ಬಗ್ಗೆ ಅರಿವು ಮೂಡಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಬೇಕು. ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಬಹಳ ಮುಂದುವರಿದಿದ್ದು, ಕಾನೂನಿನ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ. ಚಂದ್ರಶೇಖರಗೌಡ ಮಾತನಾಡಿ, ಯಾರೊಬ್ಬರೂ ಕಾನೂನಿನ ಮೂಲಕ ಪರಿಹಾರ ಪಡೆದುಕೊಳ್ಳುವಲ್ಲಿ ವಂಚಿತರಾಗಬಾರದು. ಈ ಆಶಯದಡಿ ಜಾರಿಗೆ ತಂದಿರುವ ಕಾಯ್ದೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ. ಪಚ್ಚಾಪುರೆ, ಸಿವಿಲ್ ನ್ಯಾಯಾಧೀಶರಾದ ಡಿ. ರೋಹಿಣಿ, ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ವಿಜಯಾ ವೆಂಕಟರಾಮ್, ವಕೀಲರ ಸಂಘದ ಕಾರ್ಯದರ್ಶಿ ಎಂ.ಬಿ. ಲೋಕೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>