ಅಬಕಾರಿ, ಪೊಲೀಸ್, ಲೋಕೋಪಯೋಗಿ ಇಲಾಖೆ, ಕೃಷಿ, ಪಶು ಇಲಾಖೆ, ಸಣ್ಣ ನೀರಾವರಿ ಇಲಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪ್ರವಾಸೋದ್ಯಮ, ಶಿಕ್ಷಣ, ಮೀನುಗಾರಿಕೆ ಸೇರಿದಂತೆ ಪ್ರಮುಖ ಅಧಿಕಾರಿಗಳು ಸಭೆಗೆ ಬರಲಿಲ್ಲ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ದಲಿತ ಸಂಘಟನೆಗಳ ಮುಂಖಡರು ಸಭೆಯನ್ನು ಮುಂದೂಡುವಂತೆ ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಅವರಿಗೆ ಒತ್ತಾಯಿಸಿದರು.