ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮನುಷ್ಯರಾದವರು, ಭಾರತೀಯ ಸಂಪ್ರದಾಯದ ಬಗ್ಗೆ ಗೌರವ, ನಂಬಿಕೆ ಹೊಂದಿರುವವರು ಗೋವುಗಳನ್ನು ಗೌರವಿಸುತ್ತಾರೆ. ಗೋಹತ್ಯೆ ನಿಷೇಧದ ವಿಚಾರದಲ್ಲಿ ಬಿಜೆಪಿ ದೃಢ ಸಂಕಲ್ಪ ಹೊಂದಿದೆ. ಆದಷ್ಟು ಶೀಘ್ರದಲ್ಲಿ ಗೋಮಾಂಸ ರಫ್ತು ನಿಷೇಧ ಕಾಯ್ದೆ ಜಾರಿಗೆ ಬರುವುದರಲ್ಲಿ ಅನುಮಾನವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.