ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ಈಗ ಪದವಿ ಕಳೆದುಕೊಂಡಿದ್ದಾರೆ. ಆದರೆ ಇಂದಿಗೂ ಆ ಕುರ್ಚಿಯ ಮೇಲೆ ಆಕರ್ಷಣೆ, ಮೋಹ ಇದೆ. ನಾವು ಕುಳಿತುಕೊಳ್ಳಬೇಕಾದ ಕುರ್ಚಿಯಲ್ಲಿ ಮತ್ತೊಬ್ಬರು ಕುಳಿತರಲ್ಲ ಎಂಬ ಅಸೂಹೆ ಇದೆ. ಯಡಿಯೂರಪ್ಪ ಅವರ ಆಡಳಿತ ಟೀಕಿಸುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.