ವಿವಿಧ ಶಾಲೆಗಳ ವಿದ್ಯಾರ್ಥಿ ತಂಡಗಳು, ಪೊಲೀಸ್, ಎನ್.ಸಿ.ಸಿ, ಗೃಹರಕ್ಷಕದಳ ಪಥಸಂಚಲನ ನಡೆಸಿ ಧ್ವಜವಂದನೆ ಸಲ್ಲಿಸಿದರು. ತಹಶೀಲ್ದಾರ್ ಮುನಿಶಾಮಿರೆಡ್ಡಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಎಸ್ಪಿ ಕುಶಾಲ್ ಚೌಕ್ಸೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ನಗರಸಭೆ ಅಧ್ಯಕ್ಷೆ ರೇಖಾ ಉಮೇಶ್, ಉಪಾಧ್ಯಕ್ಷೆ ಸುಹಾಸಿಸಿರೆಡ್ಡಿ, ಪೌರಾಯುಕ್ತ ರಾಘವೇಂದ್ರ
ಗುರು, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ಧನರೆಡ್ಡಿ, ವಿವಿಧ ಇಲಾಖೆಗಳ ಅಧಿಕಾರಿಗಳು, ನಗರಸಭೆ ಸದಸ್ಯರು ಭಾಗವಹಿಸಿದ್ದರು.