ನಗರದ ಗುರುವಾರ ಜಿಲ್ಲಾ ಮಕ್ಕಳ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತರತ್ನ ಪಡೆದಂತಹ ಇಬ್ಬರು ಮೇರು ಪುರುಷರು ಜನಿಸಿದಂತ ಹೆಮ್ಮೆಯ ಜಿಲ್ಲೆ ನಮ್ಮದು. ಇಂತಹ ಜಿಲ್ಲೆಯಲ್ಲಿರುವ ಮಕ್ಕಳ ಜ್ಞಾನಾರ್ಜನೆಗಾಗಿ ಮಕ್ಕಳ ಗ್ರಂಥಾಲಯ ಸ್ಥಾಪಿಸಲಾಗಿದೆ. ಇಲ್ಲಿ ಸಮಾಜ, ವಿಜ್ಞಾನ, ಇತಿಹಾಸ, ಸಾಮಾನ್ಯ ಜ್ಞಾನ ಸೇರಿದಂತೆ ಮಕ್ಕಳ ಬೌದ್ಧಿಕ ವಿಕಸನಕ್ಕೆ ಅಗತ್ಯವಾದ ಪುಸ್ತಕಗಳು ಲಭ್ಯ ಇವೆ’ ಎಂದು ತಿಳಿಸಿದರು.