<p><strong>ಚಿಕ್ಕಬಳ್ಳಾಪುರ:</strong> ಶಿಕ್ಷಣ ಪಡೆದವರು ಪ್ರತಿಯೊಂದನ್ನು ಪ್ರಶ್ನಿಸಿ ತಿಳಿದುಕೊಳ್ಳುವ ಮನೋಭಾವ ಬೆಳೆಸಿಕೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯ ಶಿಕ್ಷಣ ವಿದ್ಯಾಲಯದ ಆಶ್ರಯದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಜಿಲ್ಲೆಯವರಾದ ಶಿಕ್ಷಣ ತಜ್ಞ ಎಚ್.ನರಸಿಂಹಯ್ಯ ಅವರು ‘ಪ್ರಶ್ನಿಸದೆ ಏನನ್ನು ಒಪ್ಪಬೇಡಿ’ ಎಂದರು. ಪ್ರಶ್ನಿಸಿದರೆ ಸರಿ ಯಾವುದು ತಪ್ಪು ಯಾವುದು ಎಂದು ತಿಳಿಯುತ್ತದೆ. ಶಿಕ್ಷಣ ಪಡೆದವರೇ ಪ್ರಶ್ನಿಸುವ, ಚರ್ಚಿಸುವ ಮನುಭಾವವನ್ನು ಹೆಚ್ಚಾಗಿ ಹೊಂದಿರುತ್ತಾರೆ. ಕಿವಿಗೆ ಕೇಳಿಸುವ ಸಂವಹನವನ್ನು ಕೇಳಿ ಅರಿಯಬಹುದು ಆದರೆ ಬರವಣಿಗೆಯಲ್ಲಿರುವುದನ್ನು ತಿಳಿಯಬೇಕಾದರೆ ನಮಗೆ ಅಕ್ಷರದ ಜ್ಞಾನ ಬೇಕೇ ಬೇಕು ಎಂದರು.</p>.<p>ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣ ಉತ್ತಮ ಪಡಿಸಬೇಕು ಎನ್ನುವ ಹಿನ್ನೆಲೆಯಲ್ಲಿ 15 ವರ್ಷ ಮೇಲ್ಪಟ್ಟ ಎಲ್ಲ ವಯೋಮಾನದ ಜಿಲ್ಲೆಯ ಅನಕ್ಷರಸ್ಥರಿಗೆ ಮೂಲ ಶಿಕ್ಷಣ ದೊರೆಯುವ ವಾತಾವರಣ ಸೃಷ್ಟಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 5,790 ಅನಕ್ಷರಸ್ಥರನ್ನು ನವ ಸಾಕ್ಷರರನ್ನಾಗಿ ಮಾಡಲಾಗಿದೆ. ಈ ಸಾಲಿನಲ್ಲಿಯು ಸಹ ಸಂಪೂರ್ಣ ಸಾಕ್ಷರತಾ ಅಭಿಯಾನ ಕೈಗೊಂಡು 11,287 ಜನರನ್ನು ನವ ಸಾಕ್ಷರನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.</p>.<p>2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ಶೇ 69.76ರಷ್ಟು ಸಾಕ್ಷರತೆ ಪ್ರಮಾಣವಿದೆ. ದೇಶ ಹಾಗೂ ರಾಜ್ಯದ ಪ್ರಮಾಣಕ್ಕೆ ಜಿಲ್ಲೆಯ ಸಾಕ್ಷರತಾ ಪ್ರಮಾಣ ಕಡಿಮೆ ಇದೆ. ಈ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು 2030ರ ಒಳಗೆ ನೂರರಷ್ಟು ಸಾಕ್ಷರತೆಯನ್ನು ಜಿಲ್ಲೆಯಲ್ಲಿ ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ ನವೀನ್ ಭಟ್ ಮಾತನಾಡಿ, ಜಿಲ್ಲೆಯು ಜ್ಞಾನವಂತರಿಗೆ ಖ್ಯಾತಿ ಪಡೆದಿದೆ. ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ, ಖ್ಯಾತ ವಿಜ್ಞಾನಿ ಸಿ.ಎನ್.ಆರ್ ರಾವ್ ಮತ್ತು ಶಿಕ್ಷಣ ತಜ್ಞ ಎಚ್. ನರಸಿಂಹಯ್ಯ ಅವರ ಜನ್ಮ ಭೂಮಿ ಇದು. ಇಂತಹ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತೆ ಜಿಲ್ಲೆಯನ್ನಾಗಿಸಲು ನಾವೆಲ್ಲರೂ ಶ್ರಮಿಸಬೇಕಿದೆ ಎಂದರು.</p>.<p>ಅನಕ್ಷರಸ್ಥರನ್ನು ನವ ಸಾಕ್ಷರನ್ನಾಗಿಸುವ ಜೊತೆಗೆ ನವಸಾಕ್ಷರರಲ್ಲಿ ಶೇ 1 ರಷ್ಟು ಜನರನ್ನು ಕನಿಷ್ಠ 10ನೇ ತರಗತಿ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಬೇಕು. ಆಗ ಜಿಲ್ಲೆಗೆ ಹಿರಿಮೆ ಬರುತ್ತದೆ ಎಂದರು. ಸಾಕ್ಷರತಾ ದಿನಾಚಣೆಯ ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ಡಯಟ್ ಪ್ರಾಂಶುಪಾಲ ಮುನಿಕೆಂಪೇಗೌಡ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆಂಜನೇಯ, 6 ತಾಲ್ಲೂಕುಗಳ ಕ್ಷೇತ್ರ ಸಮನ್ವಯಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು, ಸ್ವಯಂಸೇವಕ ಬೋಧಕರು ಹಾಗೂ ನವ ಸಾಕ್ಷರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಶಿಕ್ಷಣ ಪಡೆದವರು ಪ್ರತಿಯೊಂದನ್ನು ಪ್ರಶ್ನಿಸಿ ತಿಳಿದುಕೊಳ್ಳುವ ಮನೋಭಾವ ಬೆಳೆಸಿಕೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯ ಶಿಕ್ಷಣ ವಿದ್ಯಾಲಯದ ಆಶ್ರಯದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಜಿಲ್ಲೆಯವರಾದ ಶಿಕ್ಷಣ ತಜ್ಞ ಎಚ್.ನರಸಿಂಹಯ್ಯ ಅವರು ‘ಪ್ರಶ್ನಿಸದೆ ಏನನ್ನು ಒಪ್ಪಬೇಡಿ’ ಎಂದರು. ಪ್ರಶ್ನಿಸಿದರೆ ಸರಿ ಯಾವುದು ತಪ್ಪು ಯಾವುದು ಎಂದು ತಿಳಿಯುತ್ತದೆ. ಶಿಕ್ಷಣ ಪಡೆದವರೇ ಪ್ರಶ್ನಿಸುವ, ಚರ್ಚಿಸುವ ಮನುಭಾವವನ್ನು ಹೆಚ್ಚಾಗಿ ಹೊಂದಿರುತ್ತಾರೆ. ಕಿವಿಗೆ ಕೇಳಿಸುವ ಸಂವಹನವನ್ನು ಕೇಳಿ ಅರಿಯಬಹುದು ಆದರೆ ಬರವಣಿಗೆಯಲ್ಲಿರುವುದನ್ನು ತಿಳಿಯಬೇಕಾದರೆ ನಮಗೆ ಅಕ್ಷರದ ಜ್ಞಾನ ಬೇಕೇ ಬೇಕು ಎಂದರು.</p>.<p>ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣ ಉತ್ತಮ ಪಡಿಸಬೇಕು ಎನ್ನುವ ಹಿನ್ನೆಲೆಯಲ್ಲಿ 15 ವರ್ಷ ಮೇಲ್ಪಟ್ಟ ಎಲ್ಲ ವಯೋಮಾನದ ಜಿಲ್ಲೆಯ ಅನಕ್ಷರಸ್ಥರಿಗೆ ಮೂಲ ಶಿಕ್ಷಣ ದೊರೆಯುವ ವಾತಾವರಣ ಸೃಷ್ಟಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 5,790 ಅನಕ್ಷರಸ್ಥರನ್ನು ನವ ಸಾಕ್ಷರರನ್ನಾಗಿ ಮಾಡಲಾಗಿದೆ. ಈ ಸಾಲಿನಲ್ಲಿಯು ಸಹ ಸಂಪೂರ್ಣ ಸಾಕ್ಷರತಾ ಅಭಿಯಾನ ಕೈಗೊಂಡು 11,287 ಜನರನ್ನು ನವ ಸಾಕ್ಷರನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.</p>.<p>2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ಶೇ 69.76ರಷ್ಟು ಸಾಕ್ಷರತೆ ಪ್ರಮಾಣವಿದೆ. ದೇಶ ಹಾಗೂ ರಾಜ್ಯದ ಪ್ರಮಾಣಕ್ಕೆ ಜಿಲ್ಲೆಯ ಸಾಕ್ಷರತಾ ಪ್ರಮಾಣ ಕಡಿಮೆ ಇದೆ. ಈ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು 2030ರ ಒಳಗೆ ನೂರರಷ್ಟು ಸಾಕ್ಷರತೆಯನ್ನು ಜಿಲ್ಲೆಯಲ್ಲಿ ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ ನವೀನ್ ಭಟ್ ಮಾತನಾಡಿ, ಜಿಲ್ಲೆಯು ಜ್ಞಾನವಂತರಿಗೆ ಖ್ಯಾತಿ ಪಡೆದಿದೆ. ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ, ಖ್ಯಾತ ವಿಜ್ಞಾನಿ ಸಿ.ಎನ್.ಆರ್ ರಾವ್ ಮತ್ತು ಶಿಕ್ಷಣ ತಜ್ಞ ಎಚ್. ನರಸಿಂಹಯ್ಯ ಅವರ ಜನ್ಮ ಭೂಮಿ ಇದು. ಇಂತಹ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತೆ ಜಿಲ್ಲೆಯನ್ನಾಗಿಸಲು ನಾವೆಲ್ಲರೂ ಶ್ರಮಿಸಬೇಕಿದೆ ಎಂದರು.</p>.<p>ಅನಕ್ಷರಸ್ಥರನ್ನು ನವ ಸಾಕ್ಷರನ್ನಾಗಿಸುವ ಜೊತೆಗೆ ನವಸಾಕ್ಷರರಲ್ಲಿ ಶೇ 1 ರಷ್ಟು ಜನರನ್ನು ಕನಿಷ್ಠ 10ನೇ ತರಗತಿ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಬೇಕು. ಆಗ ಜಿಲ್ಲೆಗೆ ಹಿರಿಮೆ ಬರುತ್ತದೆ ಎಂದರು. ಸಾಕ್ಷರತಾ ದಿನಾಚಣೆಯ ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ಡಯಟ್ ಪ್ರಾಂಶುಪಾಲ ಮುನಿಕೆಂಪೇಗೌಡ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆಂಜನೇಯ, 6 ತಾಲ್ಲೂಕುಗಳ ಕ್ಷೇತ್ರ ಸಮನ್ವಯಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು, ಸ್ವಯಂಸೇವಕ ಬೋಧಕರು ಹಾಗೂ ನವ ಸಾಕ್ಷರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>