ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಅನಕ್ಷರಸ್ಥರ ಪ್ರಮಾಣ ಕಡಿಮೆ ಆಗುತ್ತಿದೆ. ಲಿಂಕ್ ಡಾಕ್ಯುಮೆಂಟ್ ಕಾರ್ಯಕ್ರಮದ ಅಡಿ ಬಹಳಷ್ಟು ಮಂದಿ ನವಸಾಕ್ಷರರಾಗಿದ್ದಾರೆ. 2030ರ ವೇಳೆಗೆ ರಾಜ್ಯದಲ್ಲಿ ಪೂರ್ಣವಾಗಿ ಅನಕ್ಷರತೆಯನ್ನು ತೊಡೆದುಹಾಕಲು ಸರ್ಕಾರ ಯೋಜಿಸಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆಂಜನೇಯ ‘ಪ್ರಜಾವಾಣಿ’ಗೆ ತಿಳಿಸಿದರು.