ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಶಿವಶಂಕರರೆಡ್ಡಿ, ಗ್ರಾ.ಪಂ. ಅಧ್ಯಕ್ಷ ಜಯರಾಮಯ್ಯ, ಸಂಸ್ಕೃತಿ ಚಿಂತಕ ಪ್ರೊ.ಕೋಡಿರಂಗಪ್ಪ, ಪ್ರೊ.ಬಿ. ಗಂಗಾಧರಮೂರ್ತಿ, ಪಿ.ಎಸ್. ರಮೇಶ್, ದತ್ತಗುರು ಎಸ್. ಹೆಗ್ಗಡೆ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಿವಂಗತ ಡಾ.ಎಲ್. ಬಸವರಾಜು ಅವರ ಪತ್ನಿ ವಿಶಾಲಾಕ್ಷ್ಮಮ್ಮ, ತಹಶೀಲ್ದಾರ್ ಎಚ್. ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ತಾ.ಪಂ. ಇಒ ಎನ್. ಮುನಿರಾಜು, ಬಿಇಒ ಕೆ.ವಿ. ಶ್ರೀನಿವಾಸಮೂರ್ತಿ ಭಾಗವಹಿಸಲಿದ್ದಾರೆ.