ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎಂ. ಪಾಪಿರೆಡ್ಡಿ ಮಾತನಾಡಿ, ‘ಸಮಗ್ರ ಕೃಷಿ ಆಳವಡಿಸಿಕೊಂಡರೆ ಹೆಚ್ಚಿನ ಆದಾಯ ಪಡೆಯಬಹುದು. ರೈತರು ಒಂದೇ ಬೆಳೆಗೆ ಜೋತು ಬೀಳದೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಕೃಷಿಯ ಜತೆಗೆ ಕುರಿ-ಮೇಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆಯಂಥ ಉಪ ಕಸಬುಗಳನ್ನು ರೂಢಿಸಿಕೊಳ್ಳಬೇಕು. ವಿವಿಧ ತೋಟಗಾರಿಕೆ ಬೆಳೆ ಬೆಳೆಯಬೇಕು. ಬೆಲೆ ಕುಸಿತದ ಕಾಲದಲ್ಲೂ ಒಂದಲ್ಲ ಒಂದು ಬೆಳೆ ಕೈಹಿಡಿಯುತ್ತದೆ’ ಎಂದು ರೈತರಿಗೆ ಸಲಹೆ ನೀಡಿದರು.