<p><strong>ಶಿಡ್ಲಘಟ್ಟ: </strong>ಕೋವಿಡ್ 19 ನಿಯಂತ್ರಣಕ್ಕೆ ವಿಧಿಸಿರುವ ನಿರ್ಬಂಧಗಳನ್ನು ಪಾಲಿಸದೇ ಟೌನ್ ಎಸ್ಎಫ್ಸಿಎಸ್ ಸಂಘದವರು ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ತಹಶೀಲ್ದಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪಟ್ಟಣದ ಡಾಲ್ಫಿನ್ ಕಾಲೇಜು ಆವರಣದಲ್ಲಿ ಮೇ 27ರಂದು ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದಿಂದ (ಎಸ್ಎಫ್ಸಿಎಸ್) 42 ಸಂಘಗಳಿಗೆ ₹ 2. 25 ಕೋಟಿ ಬಡ್ಡಿರಹಿತ ಸಾಲ ವಿತರಣೆ ಮಾಡಲಾಗಿತ್ತು. ಸುಮಾರು 500 ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<p>ಕಾರ್ಯಕ್ರಮಕ್ಕೆ ಅನುಮತಿ ಪಡೆಯದಿರುವುದು, ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಮಾಸ್ಕ್ ಧರಿಸದೇ ಕೋವಿಡ್ 19 ತಡೆಗಟ್ಟಲು ವಿಧಿಸಿರುವ ನಿರ್ಬಂಧಗಳನ್ನು ಪಾಲಿಸದಿರುವ ಬಗ್ಗೆ ಆಯೋಜಕರ ಮೇಲೆ ದೂರು ದಾಖಲಾಗಿದೆ.</p>.<p>ಡಿಸಿಸಿ ಬ್ಯಾಂಕ್ನಿಂದ ಸ್ತ್ರೀಶಕ್ತಿ ಸಂಘಗಳಿಗೆ ನೀಡುತ್ತಿರುವ ಬಡ್ಡಿ ರಹಿತ ಸಾಲ ವಿತರಣಾ ಕಾರ್ಯಕ್ರಮವು ತಾಲ್ಲೂಕಿನ ಸಾದಲಿ, ವೈ.ಹುಣಸೇನಹಳ್ಳಿ, ಮಳ್ಳೂರು, ನಗರದ ಡಾಲ್ಫಿನ್ ವಿದ್ಯಾ ಸಂಸ್ಥೆ ಮತ್ತು ಮಳಮಾಚನಹಳ್ಳಿಯಲ್ಲಿ ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ: </strong>ಕೋವಿಡ್ 19 ನಿಯಂತ್ರಣಕ್ಕೆ ವಿಧಿಸಿರುವ ನಿರ್ಬಂಧಗಳನ್ನು ಪಾಲಿಸದೇ ಟೌನ್ ಎಸ್ಎಫ್ಸಿಎಸ್ ಸಂಘದವರು ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ತಹಶೀಲ್ದಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪಟ್ಟಣದ ಡಾಲ್ಫಿನ್ ಕಾಲೇಜು ಆವರಣದಲ್ಲಿ ಮೇ 27ರಂದು ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದಿಂದ (ಎಸ್ಎಫ್ಸಿಎಸ್) 42 ಸಂಘಗಳಿಗೆ ₹ 2. 25 ಕೋಟಿ ಬಡ್ಡಿರಹಿತ ಸಾಲ ವಿತರಣೆ ಮಾಡಲಾಗಿತ್ತು. ಸುಮಾರು 500 ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<p>ಕಾರ್ಯಕ್ರಮಕ್ಕೆ ಅನುಮತಿ ಪಡೆಯದಿರುವುದು, ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಮಾಸ್ಕ್ ಧರಿಸದೇ ಕೋವಿಡ್ 19 ತಡೆಗಟ್ಟಲು ವಿಧಿಸಿರುವ ನಿರ್ಬಂಧಗಳನ್ನು ಪಾಲಿಸದಿರುವ ಬಗ್ಗೆ ಆಯೋಜಕರ ಮೇಲೆ ದೂರು ದಾಖಲಾಗಿದೆ.</p>.<p>ಡಿಸಿಸಿ ಬ್ಯಾಂಕ್ನಿಂದ ಸ್ತ್ರೀಶಕ್ತಿ ಸಂಘಗಳಿಗೆ ನೀಡುತ್ತಿರುವ ಬಡ್ಡಿ ರಹಿತ ಸಾಲ ವಿತರಣಾ ಕಾರ್ಯಕ್ರಮವು ತಾಲ್ಲೂಕಿನ ಸಾದಲಿ, ವೈ.ಹುಣಸೇನಹಳ್ಳಿ, ಮಳ್ಳೂರು, ನಗರದ ಡಾಲ್ಫಿನ್ ವಿದ್ಯಾ ಸಂಸ್ಥೆ ಮತ್ತು ಮಳಮಾಚನಹಳ್ಳಿಯಲ್ಲಿ ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>