ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಲೋಕಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಒಡೆದ ಮನೆಯಾದ ಚಿಕ್ಕಬಳ್ಳಾಪುರ ಕಾಂಗ್ರೆಸ್

ಮುಖಂಡರ ನಡುವೆ ಕದಡಿದ ಮನಸ್ಸು
ಡಿ.ಎಂ.ಕುರ್ಕೆ ಪ್ರಶಾಂತ್
Published : 3 ಮಾರ್ಚ್ 2024, 6:09 IST
Last Updated : 3 ಮಾರ್ಚ್ 2024, 6:09 IST
ಫಾಲೋ ಮಾಡಿ
Comments
ಶಾಸಕರಿಗಿಲ್ಲ ಪಕ್ಷದ ಮೇಲೆ ಹಿಡಿತ?
ಚಿಕ್ಕಬಳ್ಳಾಪುರ ಕಾಂಗ್ರೆಸ್‌ನ ಬೆಳವಣಿಗೆಗಳನ್ನು ನೋಡಿದರೆ ಶಾಸಕ ಪ್ರದೀಪ್ ಈಶ್ವರ್‌ ಅವರಿಗೆ ಪಕ್ಷದ ಮೇಲೆ ಇಂದಿಗೂ ಹಿಡಿತ ಸಾಧಿಸಲು ಸಾಧ್ಯವಾಗಿಲ್ಲ. ವಿಧಾನಸಭೆ ಚುನಾವಣೆಯ ನಂತರ ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಎರಡು ಬಣಗಳು ಇವೆ. ಮೇಲ್ನೋಟಕ್ಕೆ ಒಗ್ಗಟ್ಟು ಎಂದರೂ ಆಂತರಿಕವಾಗಿ ಬೇರೆಯರದ್ದೇ ರಾಜಕೀಯ ಆಟಗಳಿವೆ. ಶಾಸಕರು ಪಟ್ಟು ಹಿಡಿದ್ದರೆ ಗೌರಿಬಿದನೂರು ತಾಲ್ಲೂಕಿನವರಾದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ ಅವರನ್ನು ಚಿಕ್ಕಬಳ್ಳಾಪುರ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನಾಗಿ ಮಾಡಲು ಹೇಗೆ ಸಾಧ್ಯವಿತ್ತು ಎಂದು ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೊಬ್ಬರು ಆಕ್ರೋಶ ವ್ಯಕ್ತಪಡಿಸುವರು. ಶಾಸಕರು ಮತ್ತು ಸಚಿವರ ನಡುವೆಯೂ ಉತ್ತಮ ಸಂಬಂಧವಿಲ್ಲ. ಕ್ಷೇತ್ರಕ್ಕೆ ನಿಯಮಿತವಾಗಿ ಬರುವುದೂ ಇಲ್ಲ. ಮಾತುಗಾರ ಶಾಸಕರು ಕೆಲಸಗಾರರಲ್ಲ. ಪಕ್ಷಕ್ಕೆ ದುಡಿಯುವ ಕಾರ್ಯಕರ್ತರು ಇದ್ದಾರೆ. ಆದರೆ ಸಂಘಟನೆ ಮತ್ತು ಎಲ್ಲರನ್ನೂ ಜೊತೆಯಲ್ಲಿ ಕೊಂಡೊಯ್ಯುವ ನಾಯಕರು ಚಿಕ್ಕಬಳ್ಳಾಪುರದಲ್ಲಿ ಇಲ್ಲ ಎಂದು ಬೇಸರ ವ್ಯಕ್ತಪಡಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT