ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಫಲಿತಾಂಶ ಜೂನ್ 4ರಂದು ಬರಲಿದೆ. ಅಂದು ಚೊಂಬಿಗೆ ಮೂರು ನಾಮವಿಟ್ಟು ಕಾಂಗ್ರೆಸ್ಗೆ ಚಟ್ಟದ ಮೆರವಣಿಗೆ ನಡೆಸುತ್ತೇವೆ ಎಂದು ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.
ನಗರದ ಹೊರವಲಯದ ಚೊಕ್ಕಹಳ್ಳಿ ಬಳಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಈ ಬಾರಿ ಚುನಾವಣೆಯಲ್ಲಿ ಚೊಂಬೇ ಗತಿ. ಇದನ್ನು ಬರೆದಿಟ್ಟುಕೊಳ್ಳಿ ಎಂದರು.
ಆಲೂಗಡ್ಡೆಯಲ್ಲಿ ಚಿನ್ನ ತೆಗೆಯುವ ರಾಹುಲ್ ಗಾಂಧಿ ಪ್ರಧಾನಿ ಆಗುವುದು ಬೇಡ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಳೆದ ಎರಡು ಚುನಾವಣೆಯಲ್ಲಿ ಮೋದಿ ಅವರನ್ನು ವಿರೋಧಿಸಿದರು. ಆದರೆ ಮೋದಿ ಅವರ ಆಡಳಿತ ದೇಶ ಅಗತ್ಯ ಎಂದು ಈ ಬಾರಿ ಬೆಂಬಲ ನೀಡಿದ್ದಾರೆ. ಇದು ರಾಜ್ಯದಲ್ಲಿ ನಮ್ಮ ಶಕ್ತಿಯನ್ನು ಮತ್ತಷ್ಟು ವೃದ್ದಿಗೊಳಿಸಿದೆ ಎಂದರು.